ಗೋವಿಂದದಾಸ ಕಾಲೇಜಿನ ಆಡಳಿತಾತ್ಮಕ ನಿರ್ದೇಶಕ ಪ್ರೊ.ರಮೇಶ್ ಕುಳಾಯಿ ಮಾತನಾಡಿ, ನಮ್ಮ ದೇಶದಲ್ಲಿ 68 ಶೇಕಡದಷ್ಟು ಯುವ ಸಮುದಾಯವಿದ್ದು, ಇವರಲ್ಲಿನ ಕೌಶಲ್ಯವೃದ್ಧಿಯ ಮೂಲಕ ದೇಶವು ಅಭಿವೃದ್ಧಿಯಲ್ಲಿ ಜಾಗತಿಕವಾಗಿ ಪ್ರಥಮ ಸ್ಥಾನ ಪಡೆಯಲು ಸಾಧ್ಯವಿದೆ ಎಂದು ನುಡಿದರು.
ಕಾಲೇಜಿನ ಪ್ರಾಂಶುಪಾಲ ಪ್ರೊ.ಕೃಷ್ಣಮೂರ್ತಿ ಪಿ. ಅಧ್ಯಕ್ಷತೆ ವಹಿಸಿ ಮಾತನಾಡಿ, ಲಿಂಗ ಸಮಾನತೆಯ ಶಕ್ತಿಯ ತೆರೆದಿಡುವಿಕೆಯ ಮೂಲಕ ಸುಸ್ಥಿರ ಸಮಾಜ ನಿರ್ಮಾಣ ಸಾಧ್ಯ ಎಂದರು. ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಹರೀಶ್ ಆಚಾರ್ಯ ಸ್ವಾಗತಿಸಿದರು, ಶಮಾ ಫರ್ಹಾನ ವಂದಿಸಿದರು, ಸೌಪರ್ಣಿಕ ಕಾರ್ಯಕ್ರಮ ನಿರೂಪಿಸಿದರು.
ಕಾಲೇಜಿನ ಉಪಪ್ರಾಂಶುಪಾಲ ಪ್ರೊ.ರಮೇಶ್ ಭಟ್ ಎಸ್.ಜಿ., ದೈಹಿಕ ಶಿಕ್ಷಣ ನಿರ್ದೇಶಕ ಡಾ.ಪ್ರಶಾಂತ್, ಕ್ಯಾಪ್ಟನ್ ಸುಧಾ ಯು., ಡಾ. ವಿಜಯಲಕ್ಷ್ಮೀ, ದಯಾ ಸುವರ್ಣ, ರಶ್ಮಿ ಕಾಯರ್ಮಾರ್, ಡಾ. ಸುಜಾತ ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ