ಮೈಸೂರು ರಾಜಮನೆತನದ ನಿಕಟವರ್ತಿಗಳಾಗಿ, ಅರಮನೆಯ ಸಹಾಯಕ ಕಾರ್ಯದರ್ಶಿಯಾಗಿ, ಹಿಂದಿನ ಮೈಸೂರು ಜಿಲ್ಲೆಯ ಜಿಲ್ಲಾಧಿಕಾರಿಯಾಗಿ, ಮೈಸೂರಿನ ಐಜಿಪಿಯಾಗಿ ಕಾರ್ಯನಿರ್ವಹಿಸಿದ ಶ್ರೀಕಂಠೇಶ್ವರ ಅಯ್ಯರ್ ಅವರ ಜನಾನುರಾಗಿ ವ್ಯಕ್ತಿತ್ವ ದಿಂದ ಇಂದಿಗೂ ಮಾದರಿ ಎನಿಸಿದ್ದಾರೆ .ಅನೇಕ ಸಾಮಾಜಿಕ ಶೈಕ್ಷಣಿಕ ಕಾರ್ಯ ಕೈಗೊಂಡ ಶ್ರೀಯುತರ ಜೀವನ ದರ್ಶನದಲ್ಲಿ ಪಾರಂಪರಿಕ ಸಾಂಸ್ಕೃತಿಕ ಚಿತ್ರಣವನ್ನು ಮಾಡಿಸುತ್ತಾರೆ ಎಂದು ಅಭಿಪ್ರಾಯ ಪಟ್ಟರು.
ಎಸ್ ಬಿ ಐ ಹಿರಿಯ ವ್ಯವಸ್ಥಾಪಕ ಅಶ್ವಥ್ ಕುಲಕರಣಿ ಕಾರ್ಯಕ್ರಮ ಉದ್ಘಾಟಿಸಿದರು. ಬೆಂಗಳೂರು ಆಕಾಶವಾಣಿಯ ಕಾರ್ಯಕ್ರಮ ನಿರ್ವಾಹಕಿ ಕಾನ್ಸೆಪ್ಟ ಫರ್ನಾಂಡಿಸ್, ನಿವೃತ್ತ ಪ್ರಾಂಶುಪಾಲ ಕೆಂಪರಾಜು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು .
ಸ್ನೇಹ ಸಿಂಚನ ಸಂಸ್ಥೆಯ ಅಧ್ಯಕ್ಷ ಲತಾ ಮೋಹನ್ ಅಧ್ಯಕ್ಷತೆ ವಹಿಸಿದ್ದ ಸಮಾರಂಭದಲ್ಲಿ ಎನ್ ಎಸ್ ವಾಮನ್ ಬಗ್ಗೆ ಸ್ಮರಣೆಯನ್ನು ಹಿರಿಯ ಕಲಾವಿದೆ ಶ್ರೀಮತಿ ಹರಿ ಪ್ರಸಾದ್, ಕವಿ ಡಾ ಜಯಪ್ಪ ಹೊನ್ನಾಳಿ ,ಎನ್ ವಿ ಬಾಲರಾಜ್, ಆಕಾಶವಾಣಿ ಹಿರಿಯ ಉದ್ಘೋಷಕಿ ಬಿ.ಕೆ ಸುಮತಿ ನಡೆಸಿಕೊಟ್ಟರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ