ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಸಾಂಸ್ಕೃತಿಕ ಸ್ಪರ್ಧೆಗಳಿಗೆ ಚಾಲನೆ

Upayuktha
0

 


ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ 2023-24ನೇ ಸಾಲಿನ ಶೈಕ್ಷಣಿಕ ವರ್ಷದ ಸಾಂಸ್ಕೃತಿಕ ಸ್ಪರ್ಧೆಗಳಿಗೆ ಚಾಲನೆ ನಿಡಲಾಯಿತು. ಕಾರ್ಯಕ್ರಮವನ್ನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ರವೀಂದ್ರ ಪಿ ದೀಪ ಬೆಳಗಿಸಿ ಚಾಲನೆ ನೀಡಿದರು.


ಕಾಲೇಜಿನ ಆಡಳಿತ ಮಂಡಳಿಯ ಸದಸ್ಯ ಡಾ. ಕೃಷ್ಣ ಪ್ರಸನ್ನ ಕೆ ಮಾತನಾಡಿ ಎಲ್ಲಾ ತರಹದ ಲಲಿತ ಕಲೆಗಳ ಸಮ್ಮಿಲನವೇ ಶಿಕ್ಷಣ. ವ್ಯಕ್ತಿಯಲ್ಲಿರುವ ಯಾವುದೇ ಒಂದು ಪ್ರತಿಭೆ ಇದ್ದರೂ ಅದು ಆತನ ಒತ್ತಡ ಎದುರಿಸುವಲ್ಲಿ ಸಹಕಾರಿಯಾಗುತ್ತದೆ ಮತ್ತು ಎಂತಹ ಕಷ್ಟಕರ ಪರಿಸ್ಥಿತಿಯನ್ನೂ ಎದುರಿಸುವ ಶಕ್ತಿಯನ್ನು ಒದಗಿಸಿಕೊಡುತ್ತದೆ ಎಂದರು. ಬಳಿಕ ಕಾಲೇಜಿನ ವಾರ್ಷಿಕೋತ್ಸವದ ಪ್ರಯುಕ್ತ ವಿವಿಧ ರೀತಿಯ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಯಿತು.


ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಸಂಚಾಲಕ ಎಂ. ಗೋಪಾಲಕೃಷ್ಣ ಭಟ್, ಪ್ರಾಂಶುಪಾಲ ಮಹೇಶ ನಿಟಿಲಾಪುರ, ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು.ಉಪನ್ಯಾಸಕಿ ಸ್ನೇಹ ಸ್ವಾಗತಿಸಿ ವಂದಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter   

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top