ಉಜಿರೆ: ಚಂದ್ರಯಾನದ ಯಶಸ್ವೀ ಲ್ಯಾಂಡಿಂಗ್ ಕಾರ್ಯಾಚರಣೆ ನಡೆಸಿದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋದ ವಿಜ್ಞಾನಿಗಳು ವಿಶ್ವವೇ ಹೆಮ್ಮೆ ಪಡುವಂತಹ ಸಾಧನೆ ಮಾಡಿದ್ದಾರೆ. ಅವರ ಅದ್ಭುತ ಯಶಸ್ಸಿಗೆ ಅವರನ್ನು ಅಭಿನಂದಿಸುತ್ತೇನೆ ಎಂದು ಧರ್ಮಸ್ಥಳದ ಧರ್ಮಾದಿಕಾರಿ, ರಾಜ್ಯಸಭಾ ಸದಸ್ಯರಾದ ಡಿ. ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.
ಮಾಧ್ಯಮಗಳಿಗೆ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ಅವರು, ಚಂದ್ರಯಾನದ ಸರಣಿಯ ಮೂರನೇ ಯಾನದ ವಿಕ್ರಮ್ ಚಂದ್ರನ ಅಂಗಳಕ್ಕೆ ಇಂದು ಬುಧವಾರ ಕಾಲಿಡುವ ಅಂತಿಮ ರೋಚಕ ಕ್ಷಣಗಳನ್ನು ನಾನು ಕೂಡಾ ಅತ್ಯಂತ ಕುತೂಹಲ ಮತ್ತು ಆಸಕ್ತಿಯಿಂದ ವೀಕ್ಷಿಸಿ ಸಂತಸ ಹಾಗೂ ಅಚ್ಚರಿ ಪಟ್ಟಿದ್ದೇನೆ. ಈ ಅದ್ಭುತ ಯಶಸ್ಸಿಗೆ ಭಗೀರಥ ಪ್ರಯತ್ನ ಮಾಡಿದ ಬಾಹ್ಯಾಕಾಶ ವಿಜ್ಞಾನಿಗಳೆಲ್ಲರನ್ನೂ ನಾನು ಹಾರ್ದಿಕವಾಗಿ ಅಭಿನಂದಿಸುತ್ತೇನೆ. ಇದೊಂದು ವಿಶ್ವದಾಖಲೆಯಾಗಿದ್ದು ಭಾರತದ ಕೀರ್ತಿ ಜಾಗತಿಕ ಮಟ್ಟದಲ್ಲಿ ಇನ್ನಷ್ಟು ಹೆಚ್ಚಾಗಿದೆ ಎಂದಿದ್ದಾರೆ.
ಚಂದ್ರನನ್ನು ಈ ಸಂಭ್ರಮ - ಸಡಗರದ ಸಂದರ್ಭದಲ್ಲಿ ಸ್ಮರಿಸಿ ದೂರದಿಂದಲೇ ಪರಿಚಯವಾದ ಚಂದ್ರನನ್ನು ಅತೀ ಸಮೀಪಕ್ಕೆ ತಂದ ಎಲ್ಲಾ ಬಾಹ್ಯಾಕಾಶ ವಿಜ್ಞಾನಿಗಳನ್ನು ಮತ್ತು ತಂತ್ರಜ್ಞರನ್ನು ನಮ್ಮ ದೇಶದ ಎಲ್ಲಾ ಪ್ರಜೆಗಳ ಪರವಾಗಿ ನಾನು ಹಾರ್ದಿಕವಾಗಿ ಅಭಿನಂದಿಸುತ್ತೇನೆ.
ಎಲ್ಲರಿಗೂ ಉಜ್ವಲ ಭವಿಷ್ಯವನ್ನು ಹಾರೈಸುತ್ತಾ, ಬಾಹ್ಯಾಕಾಶ ತಂತ್ರಜ್ಞಾನದಲ್ಲಿ ಮುಂದೆ ಇನ್ನೂ ಹೆಚ್ಚಿನ ಸೇವೆ - ಸಾಧನೆ ಮಾಡಿ ಯಶಸ್ಸನ್ನು ಪಡೆಯುವಂತೆ ಶ್ರೀ ಮಂಜುನಾಥ ಸ್ವಾಮಿ ಹಾಗೂ ಧರ್ಮದೇವತೆಗಳು ಅನುಗ್ರಹಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೆಗ್ಗಡೆಯವರು ತಿಳಿಸಿದ್ದಾರೆ.
ಚಂದ್ರ್ರಯಾನದ ಸರಣಿಯ ಮೂರನೇ ಯಾನದ ವಿಕ್ರಮ್ ಚಂದ್ರನ ಅಂಗಳಕ್ಕೆ ಇಂದು ಬುಧವಾರ ಕಾಲಿಡುವ ಅಂತಿಮ ರೋಚಕ ಕ್ಷಣಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಪ್ರವಚನ ಮಂಟಪದಲ್ಲಿ ಪರದೆ ಮೂಲಕ ಭಕ್ತಾದಿಗಳಿಗೆ ವೀಕ್ಷಿಸಲು ಅನುಕೂಲ ಮಾಡಲಾಗಿತ್ತು.
ಭಕ್ತಾದಿಗಳು ಚಂದ್ರಯಾನದ ಸರಣಿಯ ಮೂರನೇ ಯಾನದ ವಿಕ್ರಮ್ ಚಂದ್ರನ ಅಂಗಳಕ್ಕೆ ಇಂದು ಬುಧವಾರ ಕಾಲಿಡುವ ಅಂತಿಮ ರೋಚಕ ಕ್ಷಣಗಳನ್ನು ವೀಕ್ಷಿಸಿ ಸಂತಸ ಪಟ್ಟರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ