ಗೋವಾದ ಪಣಜಿಯಲ್ಲಿ ಆಗಸ್ಟ್ 20ರಂದು ರಾಷ್ಟ್ರೀಯ ಸಮ್ಮೇಳನ
ಮಂಗಳೂರು: ಅಖೀಲ್ ಭಾರತೀಯ ಕೊಂಕ್ಣಿ ಸಾಹಿತ್ಯ್ ಪರಿಷದ್ ಇದರ ರಾಷ್ಟ್ರೀಯ ದ್ವಿತೀಯ ಸಮ್ಮೇಳನ ಆಗಸ್ಟ್ 20 ಗೋವಾದ ಪಣಜಿಯ ಶ್ರೀ ಸರಸ್ವತಿ ಭವನದಲ್ಲಿ ನಡೆಯಲಿದೆ. ಅಲ್ಲಿ ಮಂಗಳೂರಿನ ಕೊಂಕಣಿಯ ಹಿರಿಯ ಕವಿ ಜೊಸ್ಸಿ ಪಿಂಟೊ ಕಿನ್ನಿಗೋಳಿ ಹಾಗೂ ಗೋವಾದ ಹಿರಿಯ ಕವಿ, ಗೀತೆಗಾರಾದ ಪ್ರಾಚಾರ್ಯ ಡಾ ರಾಜಯ್ ಪವಾರ್ ಅವರಿಗೆ ರಾಷ್ಟ್ರೀಯ ಚಾರೊಳಿ ಚುಟುಕು ಸನ್ಮಾನ ನೀಡಲಾಗುವುದು ಎಂದು ರಾಷ್ಟ್ರೀಯ ಚಾರೊಳಿ ಚುಟುಕು ಪರಿಷದ್ನ ಅಧ್ಯಕ್ಷರಾದ ರೇಮಂಡ್ ಡಿಕೂನಾ ತಾಕೊಡೆ ಹಾಗೂ ಕೊಂಕಣಿ ಲೇಖಕ ಸಂಘ ಗೋವಾ ಇದರ ಅಧ್ಯಕ್ಷ ಗೌರೀಶ ವರ್ಣೇಕರ್ ತಿಳಿಸಿದ್ದಾರೆ.
ಕೊಂಕಣಿ ಲೇಖಕ ಸಂಘ ಗೋವ ಇದರ ಆಶ್ರಯದಲ್ಲಿ ನಡೆಯುವ ಒಂದು ದಿನದ ಸಮ್ಮೇಳನದ ಉಧ್ಘಾಟನೆಯನ್ನು ರಾಜ್ಯ ಸಭಾ ಸದಸ್ಯರು ಆದ ಸನ್ಮಾನ್ಯ ಸದಾನಂದ ತಾನವ್ಡೆ ಮಾಡಲಿದ್ದು ಹಿರಿಯ ಹೆಸರಾಂತ ರಾಷ್ಟ್ರೀಯ ಕವಿ ಶಿವ್ದಾಸ್ ಎನ್ ಮುಖ್ಯ ಅತಿಥಿಯಾಗಿರುತ್ತಾರೆ.
ಗೋವಾದಲ್ಲಿ ಕೊಂಕಣಿ ಭಾಷೆಯ ಶಿಕ್ಷಕಿ ಯೋಗಿತಾ ವರ್ಣೇಕರ್ ಅವರಿಂದ ವಿಶೇಷ ಚಾರೊಳಿ ಚುಟುಕು ರಚನೆ ಕಾರ್ಯಾಗಾರ ಉಪನ್ಯಾಸ ನಡೆಯಲಿದೆ.
ಗೋವಾದ ರಾಜ್ಯದ ಪ್ರಶಸ್ತಿ ವಿಜೇತ ಕವಿ ಉದಯ್ ತಾಂಬ್ರೊ ಅವರ ಅಧ್ಯಕ್ಷತೆಯಲ್ಲಿ ಕೇರಳ, ಹೈದರಾಬಾದ್, ಕರ್ನಾಟಕ, ಗೋವಾ, ಮಹಾರಾಷ್ಟ್ರ, ಡೆಲ್ಲಿ, ಬೆಂಗಳೂರು, ಕುಮಟಾ ಪ್ರದೇಶದ ವಿವಿಧ ಬೋಲಿಗಳ (ಕೊಂಕಣಿ ಭಾಷಾ ಪ್ರಕಾರ) ಚಾರೊಳಿ ಚುಟುಕು ಕವಿಗಳಿಂದ ಕವಿಗೋಷ್ಟಿ ನಡೆಯಲಿದೆ. ಸಂಜೆಯ ಸಮಾರೋಪದಲ್ಲಿ ಉಪಸ್ಥಿತರಿರುವ ಆಸ್ವಾದಕರಿಗೆ ತಮ್ಮ ಮಾತು ಮತ್ತು ಚಾರೊಳಿ ಚುಟುಕು ಪ್ರಸ್ತುತ ಪಡಿಸಲು ಮುಕ್ತ ವೇದಿಕೆ ಇದೆ.
ಗೋವಾ ಕೊಂಕಣಿ ಅಕಾಡೆಮಿ ಅಧ್ಯಕ್ಷರಾದ ಹಿರಿಯ ಸಾಹಿತಿ, ಕವಿ ಅರುಣ್ ಸಾಕ್ರದಂಡೆ ಮುಖ್ಯ ಅತಿಥಿಯಾಗಿದ್ದಾರೆ. ಕಳೆದ ವರುಷ ಮೊದಲ ಚಾರೊಳಿ ಚುಟುಕು ಸಮ್ಮೇಳನವು ಮಂಗಳೂರು ಸಂದೇಶ ಸಭಾಂಗಣದಲ್ಲಿ ನದೆದಿತ್ತು. ಅಖಿಲ ಭಾರತ ಕೊಂಕಣಿ ಪರಿಷದ್ ಅಂದಿನ ಅಧ್ಯಕ್ಷರಾದ ಉಷಾ ರಾಣೆ ಉದ್ಘಾಟನೆ ಮಾಡಿ, ಕೇರಳದ ಆರ್.ಎಸ್ ಭಾಸ್ಕರ್ ಮತ್ತು ಗೋವಾದ ಗೌರೀಶ ವರ್ಣೇಕರ್ ಶ್ರೇಷ್ಠ ರಾಷ್ಟ್ರೀಯ ಪುರಸ್ಕಾರ ಪಡೆದಿದ್ದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ