ರಾಯಚೂರು: ನಾಡಿನ ಹೆಸರಾಂತ ಕಾದಂಬರಿಕಾರ, ಸಾಹಿತಿ ಕಥೆಗಾರ, ನೃಪತುಂಗ ಪ್ರಶಸ್ತಿ, ಕೇಂದ್ರ ಸಾಹಿತ್ಯ ಪ್ರಶಸ್ತಿ ಪುರಸ್ಕೃತರಾದ ಡಾ. ಕುಂ. ವೀರಭದ್ರಪ್ಪನವರನ್ನು ರಾಜ್ಯ ಸರಕಾರದ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಕ ಮಾಡುವಂತೆ ಪತ್ರಕರ್ತ, ಸಮಾಜಸೇವಕ ಮಾರುತಿ ಬಡಿಗೇರ್ ಸರಕಾರಕ್ಜೆ ಒತ್ತಾಯ ಮಾಡಿದ್ದಾರೆ.
ವಿಜಯನಗರ ಜಿಲ್ಲೆಯ ಕೊಟ್ಟೂರಿನವರಾಗಿರುವ ಇವರು ಬಳ್ಳಾರಿ ಜಿಲ್ಲೆಯ ಗಡಿ ಭಾಗದಲ್ಲಿರುವ ಆಂಧ್ರದಲ್ಲಿ ಸರ್ಕಾರಿ ಶಾಲೆಯ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದಾರೆ. ರಾಜ್ಯದಲ್ಲಿ ಹೆಸರಾಂತ ಸಾಹಿತಿಗಳ ಸಾಲಿನಲ್ಲಿ ಇವರು ಒಬ್ಬರಾಗಿದ್ದಾರೆ. ಬಂಡಾಯ ಸಾಹಿತಿಗಳಾಗಿದ್ದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರಿಗೆ ಆತ್ಮೀಯರಾಗಿದ್ದಾರೆ. ಸಾಮಾಜಿಕ ಚಿಂತಕರಾಗಿರುವ ಕುಂ ವೀ ಅವರು ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನದ ಸೂಕ್ತ ಅಭ್ಯರ್ಥಿ ಆಗಿದ್ದಾರೆ. ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ನೀಡಿದಂತಾಗುತ್ತದೆ.
ಕುಂ.ವೀ ಅವರಿಗೆ ಅಧಿಕಾರ ಸಿಕ್ಕರೆ ಇನ್ನೂ ಸಮಾಜದಲ್ಲಿ ಕೆಲಸಗಳನ್ನು ಮಾಡಲು ಅನುಕೂಲ ಆಗುತ್ತದೆ. ಈ ನಿಟ್ಟಿನಲ್ಲಿ ಸರ್ಕಾರ ಇವರನ್ನು ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಕ ಮಾಡುವಂತೆ ಕುಂ.ವೀ ಅವರ ಅಭಿಮಾನಿಗಳು ಇಷ್ಟರಲ್ಲೇ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗುತ್ತದೆ ಎಂದು ಮಾರುತಿ ಬಡಿಗೇರ್ ತಿಳಿಸಿದ್ದಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ