ಮಂಗಳೂರು: ರಾಮಕೃಷ್ಣ ಮಠದಲ್ಲಿ ನಾಳೆ 77ನೇ ಸ್ವಾತಂತ್ರ್ಯ ದಿನಾಚರಣೆ

Upayuktha
0


ಮಂಗಳೂರು: ಮಂಗಳಾದೇವಿಯಲ್ಲಿಯಲ್ಲಿರುವ ಶ್ರೀರಾಮಕೃಷ್ಣ ಮಠದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಬೆಳಗ್ಗೆ 7:30ಕ್ಕೆ ರಾಷ್ಟ್ರಧ್ವಜಾರೋಹಣ ನೆರವೇರಿಸಲಾಗುವುದು.


ಮಠದ ಅಧ್ಯಕ್ಷರಾದ ಸ್ವಾಮಿ ಜಿತಕಾಮಾನಂದಜಿ ಅವರು ದಿವ್ಯ ಉಪಸ್ಥಿತಿ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ನಿಧಿಲ್ಯಾಂಡ್ ಇನ್‌ಫ್ರಾಸ್ಟ್ರಕ್ಚರ್‌ ಆಡಳಿತ ನಿರ್ದೇಶಕ ಪ್ರಶಾಂತ್ ಕುಮಾರ್ ಸನಿಲ್ ಹಾಗೂ ವಿಶೇಷ ಅತಿಥಿಗಳಾಗಿ ಭಾರತೀಯ ಸೇನೆಯ ನಿವೃತ್ತ ಅಧಿಕಾರಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಮತ್ತು ಮಂಗಳೂರು ಮಹಾನಗರಪಾಲಿಕೆಯ ಮುಖ್ಯ ಸಚೇತಕ ಪ್ರೇಮಾನಂದ ಶೆಟ್ಟಿ ಭಾಗವಹಿಸಲಿದ್ದಾರೆ ಎಂದು ಮಠದ ಪ್ರಕಟಣೆ ತಿಳಿಸಿದೆ.

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top