ಕೊಪ್ಪಳ: ಸಾಹಿತ್ಯ, ಸಂಘಟನೆ, ಸಾಮಾಜಿಕ ಸೇವಾ ಕಾರ್ಯದಲ್ಲಿ ನಿರತರಾಗಿರುವ ಕನಕ ಪ್ರೀತೀಶ್ ಅವರಿಗೆ ಆ.20ರಂದು 'ನಿಸರ್ಗ ಸಾಹಿತ್ಯ ರತ್ನ' ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಕೊಪ್ಪಳದ ಹನುಮಸಾಗರದ ನಿಸರ್ಗ ಸಂಗೀತ ವಿದ್ಯಾಲಯ ಹಾಗೂ ರಂಗ ಕಲಾವಿದರ ಸಂಘದ ಅಧ್ಯಕ್ಷ ಮಲ್ಲಯ್ಯ ಎಸ್. ಕೋಮಾರಿ ಹಾಗೂ ಸಂಚಾಲಕರಾದ ಮುತ್ತು ವಡ್ಡರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಿವಂಗತ ಪಿ.ಬಿ. ಧುತ್ತರಗಿ ಹಾಗೂ ಸರೋಜಮ್ಮ ಧುತ್ತರಗಿ ಸ್ಮರಣಾರ್ಥವಾಗಿ ಮತ್ತು ನಿಸರ್ಗ ಸಂಗೀತ ಶಾಲೆಯ 23ನೆಯ ವರ್ಷದ ಸವಿನೆನಪಿಗಾಗಿ ಹನುಮಸಾಗರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ