ಆ.26: ಗಡಿನಾಡ ಕನ್ನಡ ಉತ್ಸವದಲ್ಲಿ ಪಾಲ್ಗೊಳ್ಳಲು ಶಿಕ್ಷಕರಿಗೆ ಒಒಡಿ ಸೌಲಭ್ಯ

Upayuktha
0


ಮಂಗಳೂರು: ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ ಮತ್ತು ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಒಂದು ದಿನದ ಗಡಿನಾಡ ಕನ್ನಡ ಉತ್ಸವವು ತಲಪಾಡಿಯ ವಿಶ್ವಾಸ ಅಡಿಟೋರಿಯಂನಲ್ಲಿ ಶನಿವಾರ (ಆ.26) ಜರಗಲಿದೆ.


ಇಡೀ ದಿನ ನಡೆಯುವ ಉತ್ಸವದಲ್ಲಿ ಪಾಲ್ಗೊಳ್ಳಲು ಪದವಿ ಮಹಾವಿದ್ಯಾಲಯದ ಉಪನ್ಯಾಸಕರಿಗೆ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ ಮಂಗಳೂರು ಹಾಗೂ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗೆ ಉಪನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ, ದ ಕ ಜಿಲ್ಲೆ ಮಂಗಳೂರು ಇವರು ಅನ್ಯಕಾರ್ಯ ನಿಮಿತ್ತ ಪಾಲ್ಗೊಳ್ಳುವರೆ ಅವಕಾಶ ನೀಡಿ ಸುತ್ತೋಲೆಯನ್ನು ಹೊರಡಿಸಿರುತ್ತಾರೆ. 


ದ.ಕ ಜಿಲ್ಲೆಯ ಕಾಲೇಜಿನ ಉಪನ್ಯಾಸಕರು, ಪ್ರಾಥಮಿಕ ಮತ್ತು ಪ್ರೌಢಶಾಲೆಯ ಶಿಕ್ಷಕರು ಈ ಸೌಲಭ್ಯದ ಸದುಪಯೋಗಪಡಿಸಿಕೊಂಡು ಉತ್ಸವದಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕಾಗಿ ದ. ಕ. ಜಿಲ್ಲಾ ಕ.ಸಾ.ಪ. ದ ಅಧ್ಯಕ್ಷರಾದ ಡಾ. ಎಂ.ಪಿ ಶ್ರೀನಾಥರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಪಿ.ಯು ಕಾಲೇಜಿನ ಮಂಗಳೂರು ಮತ್ತು ಉಳ್ಳಾಲ ತಾಲೂಕಿನ ಉಪನ್ಯಾಸಕರಿಗೂ ಓಓಡಿ ಸೌಲಭ್ಯ ಇರಲಿದ್ದು ಈ ಬಗ್ಗೆ ಶಿಕ್ಷಣ ಇಲಾಖೆಯು  ಸೂಚನೆ ಹೊರಡಿಸಿದೆ ಎಂದು ಅಧ್ಯಕ್ಷರು ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter   

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top