ಪುತ್ತೂರು: ಭಾರತೀಯ ಚಾರ್ಟಡ್ ಅಕೌಂಟೆಂಟ್ಸ್ ಸಂಸ್ಥೆ ಕಳೆದ ಜೂನ್ ನಲ್ಲಿ ನಡೆಸಿದ ಸಿ ಎ ಫೌಂಡೇಶನ್ ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ 2021-23ನೇ ಸಾಲಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ತೇರ್ಗಡೆಯಾಗುವುದರ ಮೂಲಕ ವಿಶೇಷ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಗಳಾದ ಸುದೇಶ್ ಭಟ್-245 ಅಂಕ (ಪರ್ಲಡ್ಕದ ಪ್ರಶಾಂತ್ ಭಟ್ ಕೆ ಮತ್ತು ಶಾಂತೇರಿ ಭಟ್ ಕೆ ದಂಪತಿ ಪುತ್ರಿ),ಆದಿತ್ಯ ನಾರಾಯಣ ಪಿ ಎಸ್-239 ಅಂಕ (ಬನ್ನೂರಿನ ಶಂಕರ ಭಟ್ ಮತ್ತು ದೇವಕಿ ದಂಪತಿ ಪುತ್ರ, ಪ್ರದೀಪ್ ಕೃಷ್ಣ ಐ-202 ಅಂಕ (ಕನ್ಯಾನದ ಪೆರುವಾಯಿಯ ಗಣಪತಿ ಭಟ್ ಐ ಹಾಗೂ ವಿನಯ ದಂಪತಿ ಪುತ್ರ), ಮತ್ತು ಎಸ್ ತ್ವಿಷ-200 ಅಂಕ (ಬಂಟ್ವಾಳದ ಪೆರಾಜೆಯ ಸುರೇಶ ಆಚಾರ್ಯ ಮತ್ತು ವಿಶಾಲಕ್ಷಿ ದಂಪತಿ ಪುತ್ರಿ) ತೇರ್ಗಡೆಯಾಗುವುದರ ಮೂಲಕ ಮುಂದಿನ ಹಂತದ ಸಿ ಎ ಇಂಟರ್ಮಿಡಿಯೆಟ್ ಪರೀಕ್ಷೆಯನ್ನು ಬರೆಯಲು ಅರ್ಹತೆ ಗಳಿಸಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.
ಕಳೆದ ಹತ್ತು ವರ್ಷಗಳಿಂದ ಸಿಎ ಆಕಾಂಕ್ಷಿಗಳಿಗೆ ವಿಶೇಷ ತರಬೇತಿ ವ್ಯವಸ್ಥೆಯನ್ನು ಕಾಲೇಜಿನ ವತಿಯಿಂದ ಕಲ್ಪಿಸಿಕೊಡಲಾ ಗುತ್ತಿದೆ. ವಿದ್ಯಾರ್ಥಿಗಳಿಗೆ ವಾಣಿಜ್ಯ ವಿಷಯದ ಜೊತೆಗೆ ಸಿಎ ಪರೀಕ್ಷೆಗೆ ಬೇಕಾದ ಸಕಲ ತರಬೇತಿ ಕಾರ್ಯವನ್ನೂ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ನಡೆಸಿಕೊಂಡು ಬರಲಾಗುತ್ತಿದೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ