ಇವರು ಪುತ್ತೂರಿನ ವಿವೇಕಾನಂದ ಕಲಾ,ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ)ಇಲ್ಲಿ ನಡೆದಇಸ್ರೋ ವಿಜ್ಞಾನಿಗಳ ಸಾಧನೆಯ ಅಭಿನಂದನಾ ಕಾರ್ಯಕ್ರಮದಲ್ಲಿ ಅಧ್ಯಕ್ಷೀಯ ಮಾತುಗಳನ್ನಾಡಿದರು.
ಕಾರ್ಯಕ್ರಮದಲ್ಲಿ ಹಿರಿಯ ವಿಜ್ಞಾನಿ ಮತ್ತುಕಾಲೇಜಿನ ಆಡಳಿತ ಮಂಡಳಿಯ ಸದಸ್ಯ ಎಮುರ್ಂಜ ಶಂಕರ ಜೋಯಿಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ, ಚಂದ್ರಯಾನ-3 ಯಶಸ್ಸುಗೊಂಡಿರುವುದು ನಮ್ಮರಾಷ್ಟ್ರ ಮಾತ್ರವಲ್ಲದೆ ಇಡೀ ವಿಶ್ವವೇ ಹೆಮ್ಮೆ ಪಡುವ ವಿಚಾರವಾಗಿದೆ. ಈ ನಿಟ್ಟಿನಲ್ಲಿ ಇಸ್ರೋದ ವಿಜ್ಞಾನಿಗಳು ಸತತ ಪ್ರಯತ್ನ ಮಾಡಿ ಭಾರತದ ಹಿರಿಮೆಯನ್ನು ಪ್ರಪಂಚದಾದ್ಯಂತ ಪಸರಿಸಿದ್ದಾರೆ. ಇತಿಹಾಸದಲ್ಲಿ ಎಂದು ಮರೆಯಲು ಸಾಧ್ಯವಿಲ್ಲದಂತಹ ಸಾಧನೆಯನ್ನುಇಸ್ರೋ ಜಗತ್ತಿಗೆ ಮಾಡಿ ತೋರಿಸಿತು ಎಂದರು.
ಕಾಲೇಜಿನ ಐಕ್ಯೂಎಸಿ ಘಟಕದ ಸಂಯೋಜಕ ಹಾಗೂ ಭೌತಶಾಸ್ತ್ರ ವಿಭಾಗದ ಉಪನ್ಯಾಸಕ ಪ್ರೊ.ಶಿವಪ್ರಸಾದ್ ಕೆ.ಎಸ್ ಚಂದ್ರಯಾನ-3ರ ಕುರಿತು ಸಂಪೂರ್ಣ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ನೀಡಿದರು.
ಕಾರ್ಯಕ್ರಮದ ವೇದಿಕೆಯಲ್ಲಿ ಆಡಳಿತ ಮಂಡಳಿಯ ಕೋಶಾಧಿಕಾರಿ ಶ್ರೀನಿವಾಸ ಸಾಮಂತ ಮತ್ತು ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಎನ್.ನರಸಿಂಹ ಭಟ್ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಕಾಲೇಜಿನ ವಿಶೇಷ ಅಧಿಕಾರಿ ಮತ್ತುಇ ತಿಹಾಸ ವಿಭಾಗದ ಮುಖ್ಯಸ್ಥ ಡಾ.ಶ್ರೀಧರ ನಾಯ್ಕ್. ಬಿ ಸ್ವಾಗತಿಸಿ, ಕನ್ನಡ ವಿಭಾಗದ ಮುಖ್ಯಸ್ಥ ಡಾ. ಮನಮೋಹನ ಎಂ ವಂದಿಸಿ ಕಾರ್ಯಕ್ರಮ ನಿರ್ವಹಿಸಿದರು.
ವಿವೇಕಾನಂದ ಶಿಕ್ಷಣ ಸಂಸ್ಥೆಯ ಹಿರಿಯ ವಿದ್ಯಾರ್ಥಿ ಪ್ರೊ.ಕೃಷ್ಣ ಮೋಹನ್ ಶಾನುಭೋಗ್ ಎಲೆಕ್ಟ್ರಾನಿಕ್ ಪ್ರೊಪ್ಯುಲಷನ್ ಡಿವಿಷನ್ ಹೆಡ್ ಆಗಿ ಚಂದ್ರಯಾನ-3 ರಲ್ಲಿ ಕಾರ್ಯನಿರ್ವಹಿಸಿರುವುದು ಕಾಲೇಜಿಗೆ ಹೆಮ್ಮೆಯ ವಿಷಯವಾಗಿದೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ