ತಂಬಾಕು ತನಿಖಾ ದಳದಿಂದ ದಾಳಿ: ದಂಡ ವಸೂಲಿ

Upayuktha
0



ಉಡುಪಿ: ಉಡುಪಿ ತಾಲೂಕಿನಲ್ಲಿ ಕೋಟ್ಟಾ ಕಾಯಿದೆಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ತಾಲೂಕು ತಂಬಾಕು ನಿಯಂತ್ರಣ ತನಿಖಾ ದಳದ ವತಿಯಿಂದ ಬುಧವಾರ ಮಣಿಪಾಲದ ರಾಜೀವನಗರ, ಪ್ರಗತಿನಗರ ಮುಂತಾದ ಕಡೆಗಳಲ್ಲಿ ತಂಬಾಕು ಮಾರಾಟದ ಅಂಗಡಿ, ಹೋಟೆಲ್, ಬಾರ್ ಮತ್ತು ರೆಸ್ಟೋರೆಂಟ್‌ಗಳ ಮೇಲೆ ದಾಳಿ ನಡೆಸಿ, ಸೆಕ್ಷನ್ 4, 6(ಎ) ಮತ್ತು 6(ಬಿ) ಅಡಿಯಲ್ಲಿ 28 ಪ್ರಕರಣ ದಾಖಲಿಸಿ, 4000 ರೂ. ದಂಡ ವಸೂಲಿ ಮಾಡಲಾಯಿತು.


ಈ ಸಂದರ್ಭದಲ್ಲಿ ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ, ಹಿರಿಯ ಆರೊಗ್ಯ ನಿರೀಕ್ಷಣಾಧಿಕಾರಿ ದೇವಪ್ಪ ಪಟಗಾರ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ, ಮಣಿಪಾಲ ಠಾಣೆಯ ಎ.ಎಸ್.ಐ ಗಂಗಪ್ಪ ಎಸ್, ಶಿಕ್ಷಣ ಸಂಯೋಜಕ ಶಂಕರ್, ಎನ್.ಟಿ.ಸಿ.ಪಿ ವಿಭಾಗದ ಸಾಮಾಜಿಕ ಕಾರ್ಯಕರ್ತೆ ಶೈಲಾ ಶ್ಯಾಮನೂರ್, ಕಾರ್ಮಿಕ ನಿರೀಕ್ಷಕ ಸಂಜಯ್, ನಗರಸಭೆಯ ಯೋಗೀಶ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter  

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top