ಆಳ್ವಾಸ್ ಸಹಕಾರ ಸಂಘದ 7ನೇ ವಾರ್ಷಿಕ ಮಹಾಸಭೆ : 2.87 ಕೋಟಿ ನಿವ್ವಳ ಲಾಭ, ಶೇ 17 ಲಾಭಾಂಶ

Upayuktha
0



ವಿದ್ಯಾಗಿರಿ: ಆಳ್ವಾಸ್ ಸಹಕಾರ ಸಂಘವು 2022-23 ನೇ ಸಾಲಿನಲ್ಲಿ 2.87 ಕೋಟಿ ರೂಪಾಯಿ ನಿವ್ವಳ ಲಾಭ ಗಳಿಸಿದ್ದು, ತನ್ನ ಸದಸ್ಯರಿಗೆ ಶೇ 17 ಲಾಭಾಂಶ (ಡಿವಿಡೆಂಟ್) ಘೋಷಿಸಿದೆ. 


ಆಳ್ವಾಸ್ ಕಾಲೇಜು ಸುಂದರಿ ಆಳ್ವ ಆವರಣದಲ್ಲಿನ ಮುಂಡ್ರುದೆಗುತ್ತು ಕೆ ಅಮರನಾಥ ಶೆಟ್ಟಿ ವೇದಿಕೆಯಲ್ಲಿ ಶನಿವಾರ ನಡೆದ ಸಂಘದ 2022-23 ನೇ ಸಾಲಿನ 7ನೇ ವಾರ್ಷಿಕ ಮಹಾಸಭೆಯಲ್ಲಿ ಪ್ರಕಟಿಸಲಾಯಿತು. 


ವಾರ್ಷಿಕ ವರದಿ ವಾಚಿಸಿದ ಸಂಘದ ಕಾರ್ಯ ನಿರ್ವಹಣಾಧಿಕಾರಿ ಅರ್ಪಿತಾ ಶೆಟ್ಟಿ, ಸಂಘವು ಈ ಸಾಲಿನಲ್ಲಿ 150 ಕೋಟಿ ರೂಪಾಯಿ ವ್ಯವಹಾರ ನಡೆಸಿದ್ದು, ಕಳೆದ ವಿತ್ತೀಯ ವರ್ಷಕ್ಕಿಂತ ಶೇ 28 ಹೆಚ್ಚುವರಿ ಲಾಭ ಗಳಿಸಿದೆ. ಶೇ 99.74 ಸಾಲ ವಸೂಲಾತಿ ಮಾಡಿದೆ. 2016ರ ಜುಲೈ 10 ರಂದು ಸಂಘ ಆರಂಭಗೊಂಡಿದ್ದು, ಪ್ರಸ್ತುತ 2033 ಸದಸ್ಯರಿದ್ದಾರೆ ಎಂದು ಮಾಹಿತಿ ನೀಡಿದರು. 


ಆಳ್ವಾಸ್ ಶಿಕ್ಷಣ ಪ್ರತಿμÁ್ಠನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ‘ ಸಂಘದ ಅಧ್ಯಕ್ಷರೂ ಆಗಿರುವ ಡಾ. ಮೋಹನ ಆಳ್ವ ಅವರು ಸಮಾಜಮುಖಿ ಚಿಂತನೆಯಲ್ಲಿ ಆಳ್ವಾಸ್ ಸಮೂಹ ಸಂಸ್ಥೆಗಳನ್ನು ಕಟ್ಟಿದ್ದಾರೆ. ಈ ಸಹಕಾರಿ ಸಂಘವನ್ನೂ ಸಮಾಜಕ್ಕೆ ಸಹಕರಿಸುವ ದೂರದೃಷ್ಟಿಯಿಂದ ನಮ್ಮೆಲ್ಲರ ಜೊತೆ ಸೇರಿ ಸ್ಥಾಪಿಸಿದ್ದು, ವಾಣಿಜ್ಯೋದ್ದೇಶದ ಲವಲೇಶವೂ ಇಲ್ಲ. ಅವರದ್ದು, ಸಾಮಾಜಿಕ ಬಿಂಬದ ಪಾರದರ್ಶಕ ವ್ಯವಸ್ಥೆ’ ಎಂದರು. 


‘1984ರಲ್ಲೇ ಕಲೆ ಹಾಗೂ ಕ್ರೀಡೆಗೆ ಪ್ರೋತ್ಸಾಹ ನೀಡುವ ಕೈಂಕರ್ಯ ಆರಂಭಿಸಿದ್ದು,    ಸಾಂಸ್ಕøತಿಕ, ಕ್ರೀಡಾ ಸ್ವರೂಪವನ್ನು ಶಿಕ್ಷಣಕ್ಕೆ ನೀಡಿದರು. ಮಾದರಿ ಕನ್ನಡ ಶಾಲೆ ಕಟ್ಟಿದ್ದು, ಮಕ್ಕಳು ಉಚಿತ ಶಿಕ್ಷಣ ಪಡೆಯುತ್ತಿದ್ದಾರೆ’ ಎಂದರು. 


‘ಆರು ವಿದ್ಯಾರ್ಥಿಗಳನ್ನು ಒಲಿಂಪಿಕ್ಸ್‍ಗೆ ಕಳುಹಿಸಿದ ಶಿಕ್ಷಣ ಸಂಸ್ಥೆ ಆಳ್ವಾಸ್ ಮಾತ್ರ. ಮೂರೂವರೆ ಸಾವಿರ ಮಕ್ಕಳಿಗೆ ದತ್ತು ಶಿಕ್ಷಣ ನೀಡಲಾಗುತ್ತಿದೆ. ಶಿಕ್ಷಣ ಎಂದರೆ ‘ವೈದ್ಯಕೀಯ- ಎಂಜಿನಿಯರಿಂಗ್’ ಎಂದು ಬಹುತೇಕರು ಭ್ರಮಿಸುವಾಗ, ಆಳ್ವಾಸ್ ಸಿ.ಎ. ಫೌಂಡೇಶನ್ ಹಾಗೂ ಇಂಟರ್ಮೀಡಿಯೆಟ್‍ನಲ್ಲಿ ರಾಷ್ಟ್ರೀಯ ಫಲಿತಾಂಶಕ್ಕಿಂತ ಹೆಚ್ಚಿನ ಫಲಿತಾಂಶ ಪಡೆದು ಸಾಧಿಸಿ ತೋರಿಸುತ್ತಿದೆ’ ಎಂದರು. 


ಸಂಘದ ಅಧ್ಯಕ್ಷ ಡಾ. ಎಮ್ ಮೋಹನ ಆಳ್ವ ಅವರ ಅನುಪಸ್ಥಿತಿಯಲ್ಲಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಆಡಳಿತ ಮಂಡಳಿ ಉಪಾಧ್ಯಕ್ಷ ಎ. ಮೋಹನ್ ಪಡಿವಾಳ್, ‘ಮನುಕುಲದ ಸೇವೆಯೇ ದೇವರ ಸೇವೆ ಎಂಬ ಧ್ಯೇಯದೊಂದಿಗೆ ನಡೆದವರು ಡಾ.ಎಂ.ಮೋಹನ ಆಳ್ವ. ಅವರ ಆಶಯದಂತೆ ಸಂಘ ಕಾರ್ಯ ನಿರ್ವಹಿಸುತ್ತಿದೆ’ ಎಂದರು. 


ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯಲ್ಲಿ ಹತ್ತನೇ ತರಗತಿಯಲ್ಲಿ 625ಕ್ಕೆ 622 ಅಂಕ ಪಡೆದ ಸ್ವಂದನಾ ಮಹಾಂತೇಶ್ ಮುರಗೋಡ್, 621 ಅಂಕ ಪಡೆದ ಶಾರದಾ ಸತೀಶ್ ಕಂಕನವಾಡಿ, 620 ಅಂಕ ಪಡೆದ ಮಂಜುಳಾ ಸದಾಶಿವ ಜಮಖಂಡಿ ಹಾಗೂ  ವರ್ಷಾ ಬೀರಪ್ಪ ಹುಣಶ್ಯಾಲ್ ಹಾಗೂ ಪಿಯುಸಿ ವಾಣಿಜ್ಯ ವಿಭಾಗದಲ್ಲಿ 600 ಕ್ಕೆ 600 ಅಂಕ ಪಡೆದ ಅನನ್ಯಾ, 596 ಅಂಕ ಗಳಿಸಿದ ಕೆ. ದಿಶಾ ರಾವ್, ವಿಜ್ಞಾನ ವಿಭಾಗದಲ್ಲಿ 595 ಅಂಕ ಪಡೆದ ಅದಿತಿ (ಪರವಾಗಿ ತಾಯಿ ಶ್ವೇತಾ ಆರ್) ವಿದ್ಯಾರ್ಥಿಗಳಿಗೆ ತಲಾ 10 ಸಾವಿರ ನಗದಿನೊಂದಿಗೆ ಅಭಿನಂದಿಸಲಾಯಿತು. 


ಸಹಕಾರ ಶಿಕ್ಷಣ ನಿಧಿಯ 2.58 ಲಕ್ಷದ ಚೆಕ್ ಅನ್ನು  ಕರ್ನಾಟಕ ರಾಜ್ಯ ಸಹಕಾರಿ ಮಹಾಮಂಡಳಿಗೆ  ಮೂಡುಬಿದಿರೆಯ ಸಹಕಾರಿ ತರಬೇತಿ ಸಂಸ್ಥೆಯ ಪುಷ್ಪರಾಜ್ ಮೊಯಿಲಿ ಮೂಲಕ ಹಸ್ತಾಂತರಿಸಲಾಯಿತು.


ನಿರ್ದೇಶಕರಾದ ಅಶ್ವಿನ್ ಜೋಸ್ಸಿ ಪಿರೇರಾ, ರಾಮಚಂದ್ರ ಮಿಜಾರು, ಡಾ. ರಮೇಶ್ ಶೆಟ್ಟಿ, ಪ್ರಕಾಶಿನಿ ಹೆಗ್ಡೆ ಇದ್ದರು.

ನಿರ್ದೇಶಕರಾದ ಜಯರಾಮ ಕೋಟ್ಯಾನ್ ಸ್ವಾಗತಿಸಿದರು. ಡಾ.ಕುರಿಯನ್ ವಂದಿಸಿದರು. ಉಪನ್ಯಾಸಕ ಕೆ.ವೇಣುಗೋಪಾಲ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಸದಸ್ಯರಾದ ಸದಾಶಿವ ಶೆಟ್ಟಿ, ಭುವನ ಪ್ರಸಾದ್ ಹೆಗ್ಡೆ ಸಲಹೆ ನೀಡಿದರು. 


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top