ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷರು, ದೇವಸ್ಥಾನ ಸಮಿತಿಯ ಅಧ್ಯಕ್ಷರು ಮತ್ತು ಎಲ್ಲರ ಮಾರ್ಗದರ್ಶಕರಾದ ಸಾಮಾಜಿಕ ಹಾಗೂ ಧಾರ್ಮಿಕ ಕೆಲಸಗಳನ್ನು ಮಾಡಿದ ಸುಧಾಕರ ಶೆಟ್ಟಿಯವರ ನಿಧನದಿಂದ ಎಲ್ಲರಿಗೂ ಅಪಾರ ನೋವುಂಟಾಗಿದೆ. ಅಂಬಿಕಾ ವಿದ್ಯಾಲಯ ಪ್ರಾರಂಭವಾಗುವಂದಿನಿಂದ ಅವರ ಸಹಕಾರ ಅವಿಸ್ಮರಣೀಯ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಅವರ ಕುಟುಂಬಕ್ಕೆ ದುಃಖವನ್ನು ಸಹಿಸುವ ಶಕ್ತಿ ಸಿಗಲಿ ಎಂದು ನಟ್ಟೋಜ ಪೌಂಡೇಶನ್ ಟ್ರಸ್ಟ್ ನ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜರು ಅಗಲಿದ ಸುಧಾಕರ ಶೆಟ್ಟಿಯವರಿಗೆ ಅಂಬಿಕಾ ವಿದ್ಯಾಲಯ ನೆಲ್ಲಿಕಟ್ಟೆಯಲ್ಲಿ ನುಡಿನಮನ ಸಲ್ಲಿಸಿದರು.
ಆಡಳಿತ ಮಂಡಳಿಯ ಸದಸ್ಯರಾದ ಸುರೇಶ ಶೆಟ್ಟಿಯವರು ನಿಧನರಾದ ಸುಧಾಕರ ಶೆಟ್ಟಿಯವರ ಉದಾತ್ತ ಗುಣಗಳನ್ನು ಸ್ಮರಿಸಿದರು. ಕಾಲೇಜಿನ ಪ್ರಾಚಾರ್ಯರದ ಸತ್ಯಜಿತ್ ಉಪಾಧ್ಯಾಯ ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಮೌನ ಪ್ರಾರ್ಥನೆ ಸಲ್ಲಿಸಿದರು.
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ