ತಿಮ್ಮಾಪೂರ: ಪ್ರತಿ ವರ್ಷದಂತೆ ಈ ವರ್ಷವು ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲುಕಿನ ತಿಮ್ಮಾಪೂರ ಗ್ರಾಮದ ಅರಾಧ್ಯ ದೇವರಾದ ಶ್ರೀ ಮಾರುತೇಶ್ವರ ಹಾಗೂ ಬಸವೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಮಹಾರಥೋತ್ಸವ ಇಂದು ಸಡಗರ ಸಂಭ್ರಮದಿಂದ ನೆರವೇರಿತು.
ಮಧ್ಯಾಹ್ನ ಕಳಸದ ಮೆರವಣಿಗೆಯು ಗ್ರಾಮದಲ್ಲಿ ಸಂಚರಿಸಿದ ನಂತರದ ಕಳಸವನ್ನು ರಥಕ್ಕೆ ಏರಿಸಲಾಗಿತ್ತು. ನಂತರ ಭಕ್ತರು ರಥದ ಹಗ್ಗ ಎಳೆಯುವ ಮೂಲಕ ಭಕ್ತಿ ಭಾವದಲ್ಲಿ ಪರವಶರಾದರು. ರಥೋತ್ಸವದ ಪೂರ್ವದಲ್ಲಿ ಗ್ರಾಮದರಲ್ಲಿ ಉಚ್ಚಯ್ಯ (ಸಣ್ಣ ತೇರು)ನ್ನು ಪಾದಗಟ್ಟೆಯವರಿಗೆ ಎಳೆಯಲಾಯಿತು.
ಕಳೆದ 2000ನೇ ಇಸ್ವಿಯಲ್ಲಿ ಚಿತ್ತರಗಿ-ಇಲಕಲ್ಲದ ವಿಜಯ ಮಹಾಂತ ಶ್ರೀಗಳು, ಕೊಳೂರ ಶ್ರೀಗಳು, ಹಡಗಲಿ-ನಿಡಗುಂದಿಯ ರುದ್ರಮುನಿ ಶ್ರೀಗಳ ಸಾನಿಧ್ಯದಲ್ಲಿ ಪ್ರಾರಂಭಗೊoಡು ಈ ಇಂದಿಗೆ 22 ವರ್ಷಕ್ಕೆ ಪೂರೈಸಿ 23 ವರ್ಷದ ರಥೋತ್ಸವ ಪಾದಾರ್ಪಣೆಗೊಂಡಿದ್ದು ಈ ವರ್ಷದ ರಥೋತ್ಸವವನ್ನು ಹಡಗಲಿ-ನಿಡಗುಂದಿಯ ರುದ್ರಮುನಿ ಶ್ರೀಗಳು, ಆಳಂದ ನಂದವಾಡಗಿಯ ಚನ್ನಬಸವ ಶ್ರೀಗಳು, ಗ್ರಾಮದ ವೆ.ಮೂ ಬಸಯ್ಯ ಹೀರೇಮಠ ಸಾಮೂಹಿಕವಾಗಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು ಇತರರು ಉಪಸ್ಥಿತರಿದ್ದರು.
ವಿವಿಧ ಬಣ್ಣದ ಧ್ವಜ ಬಾಳೆಕಂಬಗಳ ವಿವಿಧ ಬಗೆಯ ಹೂಗಳಿಂದ ಶೃಂಗಾರ ಮಾಡಿದ ಭವ್ಯವಾದ ರಥ ನೋಡುಗರ ಕಣ್ಮನ ಸೆಳೆಯಿತು. ರಥೋತ್ಸವದಲ್ಲಿ ತಿಮ್ಮಾಪೂರ, ಹಡಗಲಿ, ಚಿತ್ತರಿಗಿ, ಹುನಗುಂದ ಇಲಕಲ್ಲ ಅಮರಾವತಿ, ಬೇವೂರ, ಹಳ್ಳೂರ, ಭಗವತಿ, ಬೆಳಗಲ್ಲ, ಇದ್ದಲಗಿ, ಧನ್ನೂರ ಕೂಡಲಸಂಗಮ, ಬೆಂಗಳೂರು ಸೇರಿದಂತೆ ವಿವಿಧ ಮಹಾರಾಷ್ರದ ಕೊಲ್ಹಾಪೂರ, ಪೂಣೆ, ಮಂಗಳೂರಿನ ಭಕ್ತರು ಸೇರಿದಂತೆ ಅಪಾರ ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ