48ನೇ ವಾರ್ಷಿಕೋತ್ಸವ ಮತ್ತು ‘ಕೃಷ್ಣಂ ಕಲಯ ಸಖಿ’ ಹಂಸ ಗಾನ- ನಾಟ್ಯ ಸಂಭ್ರಮ
ಬೆಂಗಳೂರು: ನಾಡಿನ ಸಾಂಸ್ಕೃತಿಕ ಚಳುವಳಿಯ ಸಂದರ್ಭದಲ್ಲಿ ಪ್ರಮುಖ ಸಂಸ್ಥೆಯಾದ ಹಂಸಜ್ಯೋತಿಯ 48ನೇ ವಾರ್ಷಿಕೋತ್ಸವ ಸಂದರ್ಭದಲ್ಲಿ ಬೆಂಗಳೂರು ನಗರ ಮಲ್ಲತ್ತಹಳ್ಳಿಯ ಕಲಾಗ್ರಾಮದ ಸಾಂಸ್ಕೃತಿಕ ಸಮುಚ್ಛಯ ಭವನದಲ್ಲಿ ಸೆಪ್ಟಂಬರ್ 27 ಬುಧವಾರ ಸಂಜೆ 4.30ರಿಂದ ‘ಕೃಷ್ಣಂ ಕಲಯ ಸಖಿ’ ಹಂಸ ಗಾನ- ನಾಟ್ಯ ಸಂಭ್ರಮ ಮತ್ತು ‘ಹಂಸ ಸಮ್ಮಾನ್’ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಿದೆ.
ಶೇಷಾದ್ರಿಪುರಂ ಶಿಕ್ಷಣ ದತ್ತಿಯ ಗೌ. ಪ್ರಧಾನ ಕಾರ್ಯದರ್ಶಿ ನಾಡೋಜ ಡಾ.ವೂಡೇ ಪಿ. ಕೃಷ್ಣರವರು ಸಮಾರಂಭವನ್ನು ಉದ್ಘಾಟಿಸಲಿದ್ದಾರೆ. ಬೆಂ. ನಗರ ಜಿಲ್ಲೆ ಅಬಕಾರಿ ಇಲಾಖೆ ಉಪ ಆಯುಕ್ತ ಡಾ.ಬಿ.ಆರ್. ಹಿರೇಮಠ್ ಅಧ್ಯಕ್ಷತೆ ವಹಿಸುವ ಕಾರ್ಯಕ್ರಮದಲ್ಲಿ ನಾಡಿನ ಸಾಮಾಜಿಕ, ಶೈಕ್ಷಣಿಕ, ಸಾಹಿತ್ಯಕ, ಧಾರ್ಮಿಕ, ಸೇವಾ ವಲಯ 12 ಮಂದಿ ಸಾಧಕೋತ್ತಮರಾದ ವೇದ-ಜೋತಿಷ್ಯ– ವಾಸ್ತು ಶಾಸ್ತ್ರ ಪರಿಣತ ಟಿ.ವಿ. ವಿಶ್ವನಾಥ ಅಯ್ಯರ್, ಮೈಸೂರು ಸಾಂಪ್ರದಾಯಿಕ ಶೈಲಿಯ ಖ್ಯಾತ ಚಿತ್ರಕಲಾವಿದೆ ಡಾ. ಮೀರಾ ಕುಮಾರ್, ಸಾಮಾಜಿಕ, ಶೈಕ್ಷಣಿಕ ಮತ್ತು ಧಾರ್ಮಿಕ ಕ್ಷೇತ್ರ ಅಭಿವೃದ್ಧಿಯ ಹರಿಕಾರ ಎಸ್.ವೀರಭದ್ರಯ್ಯ, ಭಾರತೀಯ ಸಾರ್ವಜನಿಕ ಸಂರ್ಪಕ ಪರಿಷತ್ತು ರಾಷ್ಟ್ರೀಯ ಅಧ್ಯಕ್ಷೆ ಎಸ್.ಗೀತಾ ಶಂಕರ್, ವಿಕ್ಟೋರಿಯ ಆಸ್ಪತ್ರೆಯ ಸಹಾಯಕ ಆಡಳಿತಾಧಿಕಾರಿ ಆರ್.ಶ್ರೀನಿವಾಸ್, ಬೆಂಗಳೂರು ವಿವಿ ವಾಣಿಜ್ಯ ಮತ್ತು ನಿರ್ವಹಣಾ ವಿಭಾಗದ ಡೀನ್ ಡಾ.ಆರ್.ಸರ್ವಮಂಗಳ, ವಾಸ್ತು ಶಿಲ್ಪ ತಜ್ಞ ಬಿ.ಕೆ.ಮುರಳೀಧರ, ರಂಗ ಸಜ್ಜಿಕೆ, ಬೆಳಕು ಮತ್ತು ಧ್ವನಿ ತಜ್ಞ ಬಿ.ಕೆ.ರವಿಶಂಕರ್, ಕ್ರೀಡಾ ಪಟು ಜಯರಾಂ ಶೆಟ್ಟಿ, ನೃತ್ಯ ತರಬೇತುದಾರೆ ವಿದುಷಿ ರೂಪಶ್ರೀ ಮಧುಸೂಧನ್, ಸಂಸ್ಕೃತಿ ಚಿಂತಕ, ಅಂಕಣಕಾರ, ಪ್ರಣವ ಮೀಡಿಯಾ ಹೌಸ್ ಪ್ರಕಾಶನದ ನಿರ್ದೇಶಕ ಡಾ.ಗುರುರಾಜ ಪೋಶೆಟ್ಟಿಹಳ್ಳಿ ಮತ್ತು ವಚನ, ಜಾನಪದ ನೃತ್ಯ ಸಂಯೋಜಕಿ ಸ್ನೇಹ ಕಪ್ಪಣ್ಣ ರವರುಗಳಿಗೆ ಈ ಸಾಲಿನ ಪ್ರತಿಷ್ಠಿತ ‘ಹಂಸ ಸಮ್ಮಾನ್ ಪ್ರಶಸ್ತಿ– 2023’ ನೀಡಿ ಗೌರವಿಸಲಾಗುವುದು. ಮುಖ್ಯ ಅತಿಥಿಗಳಾಗಿ ಹಿರಿಯ ರಂಗ ಸಂಘಟಕ, ಕರ್ನಾಟಕ ನಾಟಕ ಅಕಾಡೆಮಿ ಮಾಜಿ ಅಧ್ಯಕ್ಷ ಶ್ರೀನಿವಾಸ ಜಿ ಕಪ್ಪಣ್ಣ, ಬೆಂಗಳೂರು ದೂರದರ್ಶನ ಕೇಂದ್ರದ ನಿವೃತ್ತ ನಿರ್ದೇಶಕ ಜಿ.ಎಂ ಶಿರಹಟ್ಟಿ, ಕಿದ್ವಾಯಿ ಸ್ಮಾರಕ ಗ್ರ್ರಂಥಿ ಆಸ್ಪತ್ರೆಯ ನಿವೃತ್ತ ನಿರ್ದೇಶಕ ಡಾ.ಸಿ. ರಾಮಚಂದ್ರ ಹಾಗೂ ಎನ್.ಟಿ.ಪಿ.ಸಿ ಮುಖ್ಯ ಸಲಹೆಗಾರ ಎಂ.ಬಿ. ಜಯರಾಮ್ ಭಾಗವಹಿಸಿಲಿದ್ದಾರೆ.
ಕಳೆದ 48 ವರ್ಷಗಳಿಂದ ಹಲವಾರು ವೈಶಿಷ್ಟಪೂರ್ಣ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಂಡು ಬರುತ್ತಿರುವ ಹಂಸಜ್ಯೋತಿಯು ಈ ಬಾರಿ ‘ಕೃಷ್ಣಂ ಕಲಯ ಸಖಿ’ ಎಂಬ ಶೀರ್ಷಿಕೆಯಡಿ ನಾಡಿನ ಸುಪ್ರಸಿದ್ಧ ಕಲಾವಿದರಾದ ವಿಜಯ ಹಾವನೂರು, ರವೀಂದ್ರ ಸೊರಗಾವಿ, ಗಣೇಶ ದೇಸಾಯಿ, ದಿವಾಕರ ಕಶ್ಯಪ್, ಹರೀಶ ನರಸಿಂಹ, ಗುರುರಾಜ ಹೊಳೆನರಸೀಪುರ, ಮಧುರ ರವಿಕುಮಾರ್, ಶ್ರೀದೇವಿ ಗರ್ತಿಕೆರೆ, ಚಾಂದಿನಿ ಗರ್ತಿಕೆರೆ ಮತ್ತು ಹೆಚ್.ಕೆ. ಅನಘ ರವರು ಶ್ರೀಕೃಷ್ಣ ಸ್ಮರಣೆಯ ವೈವಿಧ್ಯಮಯ ಗಾಯನವನ್ನು ಪ್ರಸ್ತುತಪಡಿಸಲಿದ್ದಾರೆ. ಡಾ.ಮಾಲಿನಿ ರವಿಶಂಕರ್ ನಿರ್ದೇಶನದ ಲಾಸ್ಯ ವರ್ಧನ ಟ್ರಸ್ಟ್ ನೃತ್ಯ ಶಾಲೆಯ ಕಲಾವಿದರು ಮತ್ತು ರೂಪಶ್ರೀ ಮಧುಸೂಧನ್ ನಿರ್ದೇಶನದ ನೃತ್ಯ ಗಂಗಾ ಪ್ರದರ್ಶನ ಕಲಾ ಕೇಂದ್ರದವರಿಂದ ಶ್ರೀಕೃಷ್ಣ ಸ್ಮರಣೆಯ ಶಾಸ್ತ್ರೀಯ ನೃತ್ಯ ಏರ್ಪಡಿಸಿದೆ ಎಂದು ಹಂಸಜ್ಯೋತಿ ಟ್ರಸ್ಟ್ನ ಸಂಸ್ಥಾಪಕ – ವ್ಯವಸ್ಥಾಪಕ ಟ್ರಸ್ಟೀ ಎಂ.ಮುರಳೀಧರ ಮತ್ತು ಹಿರಿಯ ಟ್ರಸ್ಟೀ ಎಂ.ಆರ್. ನಾಗರಾಜ ನಾಯ್ಡು ತಿಳಿಸಿರುತ್ತಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ