ಮಂಗಳೂರು: ಭರತಾಂಜಲಿ ರಿ ಕೊಟ್ಟಾರ ಮಂಗಳೂರು ಇವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಶ್ರೀ ಜಗದ್ಗುರು ಶ್ರೀ ಶಂಕರಾಚಾರ್ಯ ಶ್ರೀ ಸಂಸ್ಥಾನ ಎಡನೀರು ಮಠ ಇಲ್ಲಿ ನೃತ್ಯ ಗುರು ವಿದುಷಿ ಪ್ರತಿಮಾ ಶ್ರೀಧರ್ ನಿರ್ದೇಶನದಲ್ಲಿ ಗುರು ಶ್ರೀಧರ ಹೊಳ್ಳ ಸಂಯೋಜನೆಯಲ್ಲಿ 'ನೃತ್ಯ ವಂದನಾ' ಕಾರ್ಯಕ್ರಮವನ್ನು ನಡೆಸಿಕೊಟ್ಟರು.
ಕಲಾವಿದೆಯರಾದ ವಿದುಷಿ ಪ್ರಕ್ಷಿಲಾ ಜೈನ್, ಶಿವಪ್ರಣಾಮ್ ಸಂಸ್ಥೆಯ ವಿದುಷಿ ಅನ್ನಪೂರ್ಣ ರಿತೇಶ್, ವಿದುಷಿ ಮಾನಸ ಕುಲಾಲ್, ವಿದುಷಿ ಅದಿತಿ ಸಹಕರಿಸಿದ್ದರು. ಹಿಮ್ಮೇಳ ಕಲಾವಿದರಾಗಿ ಹಾಡುಗಾರಿಕೆಯಲ್ಲಿ ಸ್ವರಾಗ್ ಕಣ್ಣೂರು, ಮೃದಂಗನಲ್ಲಿ ವಿದ್ವಾನ್ ಸುರೇಶ್ ಬಾಬು, ಕೊಳಲಿನಲ್ಲಿ ರಾಹುಲ್ ಕಣ್ಣೂರು ಸಹಕರಿಸಿದ್ದರು. ವಿದುಷಿ ಮಧುರಾ ಕಾರಂತ್ ನಿರೂಪಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ