ಮಂಗಳೂರು: ಭಾರತವು ಹಿಂದೆ ಹಲವಾರು ಅವಕಾಶಗಳನ್ನು ಕೈ ಚೆಲ್ಲಿದೆ, ಆದರೆ ಇಂದು ಅವಕಾಶಗಳನ್ನು ಸದುಪಯೋಗ ಪಡಿಸಿ ಮುನ್ನಡೆಯುವ ದೇಶವಾಗಿ ಮಾರ್ಪಾಡುಗೊಂಡಿದೆ. ಇಡೀ ವಿಶ್ವಕ್ಕೆ ಬಾಧಿಸಿದ ಕೋವಿಡ್-19 ಅನ್ನು ನಮ್ಮ ದೇಶವು ಸಮರ್ಥವಾಗಿ ಎದುರಿಸಿರುತ್ತದೆ. ಇದು ಭಾರತದ ಸಾಮರ್ಥ್ಯವನ್ನು ತೋರಿಸುತ್ತದೆ. ಇಂದು ನಮ್ಮ ಮುಂದೆ ಬೇರೆ ಬೇರೆ ಕ್ಷೇತ್ರದಲ್ಲಿ ಹಲವಾರು ಅವಕಾಶಗಳಿವೆ ಮುಂದಿನ 25 ವರ್ಷಗಳು ನಿಜಕ್ಕೂ ಭಾರತದ ಇತಿಹಾಸದಲ್ಲಿ ಅಮೃತ ಕಾಲವಾಗಲಿದೆ ಎಂದು ಖ್ಯಾತ ವಿಜ್ಞಾನಿ, ಲೇಖಕ ಮತ್ತು ಸಂಶೋಧಕ ಡಾ. ಆನಂದ್ ರಂಗನಾಥನ್ ಹೇಳಿದರು.
ಇವರು ರಾಮಕೃಷ್ಣ ಮಿಷನ್ ಮಾರ್ಗದರ್ಶನ ದಲ್ಲಿ ಸ್ವಚ್ಛ ಮಂಗಳೂರು ಫೌಂಡೇಷನ್ ಮತ್ತು ಜಸ್ಟೀಸ್ ಕೆ. ಎಸ್. ಹೆಗ್ಡೆ ಚಾರಿಟೇಬಲ್ ಟ್ರಸ್ಟ್ ಸಹಯೋಗದೊಂದಿಗೆ ಮಂಗಳೂರು ರಾಮಕೃಷ್ಣ ಮಠದ ವಿವೇಕಾನಂದ ಸಭಾಭವನದಲ್ಲಿ ನಡೆದ "ಜಿಜ್ಞಾಸಾ": ಸನಾತನ ಚಿಂತನ ಗಂಗಾ: ದ್ವೈಮಾಸ ಮೊದಲ ಸರಣಿ ಉಪನ್ಯಾಸ ಮಾಲಿಕೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಭಾರತ- 2047 ಅವಕಾಶಗಳ ಆಗರ" ಇದರ ಕುರಿತು ಮಾತನಾಡಿದರು.
ಮಂಗಳೂರು ರಾಮಕೃಷ್ಣ ಮಠದ ಅಧ್ಯಕ್ಷರಾದ ಸ್ವಾಮಿ ಜಿತಕಾಮಾನಂದಜೀ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಆಶೀರ್ವಚನ ನೀಡಿದ ಇವರು ಮಂಗಳೂರು ರಾಮಕೃಷ್ಣ ಮಠ ಮತ್ತು ಮಿಷನ್ ಆಧ್ಯಾತ್ಮಿಕ, ಸಾಂಸ್ಕೃತಿಕ ಶೈಕ್ಷಣಿಕ ಕಾರ್ಯಕ್ರಮಗಳೊಂದಿಗೆ ಇತರ ಸಾಮಾಜಿಕ ಚಟುವಟಿಕೆಗಳನ್ನು ನಡೆಸುತ್ತಾ ಬರುತ್ತಿದೆ. ಇದರೊಂದಿಗೆ ಸ್ವಚ್ಛ ಮಂಗಳೂರು ಫೌಂಡೇಶನ್ ಇದರ ಮೂಲಕ ಸ್ವಚ್ಛ ಮಂಗಳೂರು ಅಭಿಯಾನ ಆರಂಭದ ಕಾರ್ಯ ನಿಜಕ್ಕೂ ಶ್ಲಾಘನೀಯ ಮುಂದೆಯೂ ಇನ್ನಷ್ಟು ಉತ್ತಮ ಕಾರ್ಯಕ್ರಮಗಳು ಹೀಗೆ ಮುಂದುವರೆಯಲಿ ಮಂಗಳೂರಿನ ಜನತೆಗೆ ಉತ್ತಮ ಸೇವೆ ನೀಡಲಿ ಎಂದು ಶುಭ ಹಾರೈಸಿದರು.
ವೇದಿಕೆಯಲ್ಲಿ ಕಾರ್ಯಕ್ರಮದ ಅಧ್ಯಕ್ಷ ನಿಟ್ಟೆ ವಿಶ್ವವಿದ್ಯಾನಿಲಯದ ಕುಲಪತಿ ಎನ್ ವಿನಯ ಹೆಗ್ಡೆ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಜಿಜ್ಞಾಸಾದ ಸಂಯೋಜಕ ಮತ್ತು ಭಾರತೀಯ ಸೇನೆಯ ಅನುಭವಿ ಸೈನಿಕ ಕ್ಯಾಪ್ಟನ್ ಗಣೇಶ್ ಕಾರ್ಣಿಕ ಸ್ವಾಗತಿಸಿ, ಜಿಜ್ಞಾಸಾದ ಸಹ ಸಂಯೋಜಕ ಮತ್ತು ನಿಟ್ಟೆ ಇನ್ಸ್ಟಿಟ್ಯೂಟ್ ಆಫ್ ಫಿಜಿಯೋಥೆರಫಿ ಇದರ ಪ್ರಾಂಶುಪಾಲ ಪ್ರೊ. ಧನೇಶ್ ಕುಮಾರ್ ವಂದಿಸಿ, ಐಶ್ವರ್ಯ ನಾಯರ್ ನಿರ್ವಹಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ