ಇದೇ ಸಂದರ್ಭದಲ್ಲಿ‘ಜಿಎಸ್ಟಿಲಾ & ಪ್ರಾಕ್ಟಿಸಸ್ ಮತ್ತುಇನ್ ಕಮ್ ಟ್ಯಾಕ್ಸ್ಲಾ & ಪ್ರಾಕ್ಟಿಸಸ್’ಎಂಬ ಎರಡು ಪುಸ್ತಕ ಬಿಡುಗಡೆ ಮಾಡಲಾಯಿತು. ಈ ಪುಸ್ತಕವನ್ನು ಡಾ. ರವಿ ಎಂ ಎನ್, ಡಾ. ಸುಮನ್ ಶೆಟ್ಟಿ ಹಾಗೂ ಸಹಾಯಕ ಪ್ರಾಧ್ಯಾಪಕ ಭಾನುಪ್ರಕಾಶ್ ಬಿ ಇ ಇವರು ಬರೆದಿದ್ದಾರೆ. ಇದರೊಂದಿಗೆ ‘ವನಿಕ’ –ಭಿತ್ತಿಪತ್ರವನ್ನು ಅನಾವರಣಗೊಳಿಸಲಾಯಿತು. ವಾಣಿಜ್ಯ ವಿಭಾಗದ ಮುಖ್ಯಸ್ಥೆ ಡಾ. ರತ್ನಾವತಿ ಕೆ, ಸಂಘದ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಿದರು. ಸಂಘದ ಕಾರ್ಯದರ್ಶಿ ಸುವಿತ್ ಶೆಟ್ಟಿ ಕಳೆದ ವರ್ಷದ ಸಂಘದ ವಾರ್ಷಿಕ ವರದಿಯನ್ನು ಪ್ರಸ್ತುತಪಡಿಸಿದರು.
ಈ ಸಂದರ್ಭದಲ್ಲಿ ಡಾ. ರವಿ ಎಂ ಎನ್, ಡಾ. ಬಿ.ಎ ಕುಮಾರ್ ಹೆಗ್ಡೆ, ವ್ಯವಹಾರ ಆಡಳಿತ ವಿಭಾಗ ಮುಖ್ಯಸ್ಥೆ ಶಾಕುಂತಲಾ, ವಾಣಿಜ್ಯ ವಿಭಾಗ ಮುಖ್ಯಸ್ಥೆ ಡಾ. ರತ್ನಾವತಿ ಕೆ, ಸಂಘದ ಉಸ್ತುವಾರಿ ಪ್ರಾಧ್ಯಾಪಕರಾದ ವಿನುತ ಹಾಗೂ ಗುರುರಾಜ್, ಸಂಘದ ಸಿಇಓ ಆದರ್ಶ ಬೇಕಲ್ ಮತ್ತು ಇತರರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಜೆನಿಫರ್ ಮತ್ತು ಮಧುರ ಕಾರ್ಯಕ್ರಮ ನಿರೂಪಿಸಿ, ಆದರ್ಶ ಬೇಕಲ್ ಸ್ವಾಗತಿಸಿ, ಶರಧಿ ಹೊಳ್ಳ ವಂದಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ