ಮಂಗಳೂರು: ಮಂಗಳೂರಿನ ಹೆಸರಾಂತ ನೃತ್ಯ ತಂಡ ಗಾನನೃತ್ಯ ಅಕಾಡೆಮಿಯ ನಿರ್ದೇಶಕಿ ಗುರು ವಿದ್ಯಾಶ್ರೀ ರಾಧಾಕೃಷ್ಣ ಮತ್ತು ತಂಡ ಇದೇ ಅಕ್ಟೋಬರ್ ತಿಂಗಳ 4 ರಿಂದ 14 ತಾರೀಕಿನವರೆಗೆ ದಕ್ಷಿಣ ಕೊರಿಯಾದ ಹಲವಾರು ವೇದಿಕೆಗಳಲ್ಲಿ ನೃತ್ಯ ಪ್ರದರ್ಶನವನ್ನು ನೀಡಲು ಭಾರತ ದೇಶವನ್ನು ಪ್ರತಿನಿಧಿಸಲಿದ್ದಾರೆ.
ಕೇಂದ್ರ ಸರಕಾರದ ಸಂಸ್ಕೃತಿ ಸಚಿವಾಲಯದ ಐ.ಸಿ.ಸಿ.ಆರ್ ದಾಖಲಿತ ಪ್ರತಿನಿಧಿಯಾಗಿರುವ ಇವರು ದಕ್ಷಿಣ ಕೊರಿಯಾದ `ಸಾರಂಗ್’ ಉತ್ಸವದಲ್ಲಿ ಹಾಗೂ ಇನ್ನಿತರ 8 ಪಟ್ಟಣಗಳಲ್ಲಿ ನೃತ್ಯ ಪ್ರದರ್ಶನ ಹಾಗೂ ಪ್ರಾತ್ಯಕ್ಷಿಕೆಯನ್ನು ನೀಡಲಿದ್ದಾರೆ. ಇವರೊಂದಿಗೆ ಸಹಕಲಾವಿದರಾಗಿ ರಶ್ಮಿ ಉಡುಪ, ಅಂಕಿತ ರೈ, ಮೇಘ ಮಲರ್, ತ್ವಿಶಾ ಶೆಟ್ಟಿ, ದಿಶಾ ಗಿರೀಶ್, ಪೂರ್ವೀ ಕೃಷ್ಣ ಹಾಗೂ ತಾಂತ್ರಿಕ ಸಹಕಾರಕ್ಕಾಗಿ ರಾಧಾಕೃಷ್ಣ ಭಟ್ ತೆರಳಲಿದ್ದಾರೆ. ಈ ತಂಡದ ಸಂಪೂರ್ಣ ಪ್ರಾಯೋಜಕತ್ವವನ್ನು ಕೇಂದ್ರ ಸರಕಾರದ ಸಂಸ್ಕೃತಿ ಸಚಿವಾಲಯ ವಹಿಸಿದೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ


