ಮಂಜೇಶ್ವರ ಉಪಜಿಲ್ಲೆಯ 62ನೇ ಶಾಲಾ ಕಲೋತ್ಸವದ ಸಂಘಟನಾ ಸಮಿತಿ ರಚನೆ

Upayuktha
1

ಧರ್ಮತ್ತಡ್ಕ: ಧರ್ಮತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ವಿದ್ಯಾ ಸಂಸ್ಥೆಗಳಲ್ಲಿ ನವೆಂಬರ್ 7 ರಿಂದ 10ರ ತನಕ ನಡೆಯಲಿರುವ, ಮಂಜೇಶ್ವರ ಉಪಜಿಲ್ಲಾ ಮಟ್ಟದ 62ನೇ ಶಾಲಾ ಕಲೋತ್ಸವದ ಸಂಘಟನಾ ಸಮಿತಿ ರಚನೆ ಹೈಸ್ಕೂಲ್ ಸಭಾಂಗಣದಲ್ಲಿ ಜರಗಿತು.


ಪುತ್ತಿಗೆ ಪಂಚಾಯತ್ ವಿದ್ಯಾಭ್ಯಾಸ ಸ್ಥಾಯೀ ಸಮಿತಿ ಅಧ್ಯಕ್ಷ ಅಬ್ದುಲ್ ಮಜೀದ್ ಎಂ.ಎಚ್ ಸಭಾಧ್ಯಕ್ಷತೆ ವಹಿಸಿ ಮಾತನಾಡಿದರು. ವಿದ್ಯಾರ್ಥಿಯು ಪಠ್ಯದೊಂದಿಗೆ ಪಠ್ಯೇತರ ವಿಷಯಗಳಲ್ಲಿ ತನ್ನನ್ನು ತೊಡಗಿಸಿಕೊಂಡಾಗ ಮಾದಕ ವ್ಯಸನಗಳಂತಹ ಸಾಮಾಜಿಕ ಪಿಡುಗುಗಳಿಂದ ದೂರವಿರುವುದಕ್ಕೆ ಸಾಧ್ಯವಾಗುತ್ತದೆ. ಕಲೋತ್ಸವದಂತಹ ವೇದಿಕೆಗಳು, ಮನಸ್ಸನ್ನು ಸತ್ ವಿಚಾರಗಳ ಕಡೆಗೆ ಕೇಂದ್ರೀಕರಿಸುವಲ್ಲಿ ಮಹತ್ತರವಾದ ಪಾತ್ರವನ್ನು ವಹಿಸುತ್ತದೆ ಎಂದರು. ಏಷ್ಯಾದಲ್ಲಿ ಅತ್ಯುತ್ತಮ ಕಾರ್ಯಕ್ರಮಗಳಲ್ಲೊಂದಾದ ಕೇರಳ ಶಾಲಾ ಕಲೋತ್ಸವದಲ್ಲಿ ಎಲ್ಲರೂ ಸಕ್ರಿಯವಾಗಿ ಭಾಗವಹಿಸುವಂತಾಗಬೇಕು ಎಂದು ಅಭಿಪ್ರಾಯಪಟ್ಟರು.


ಪುತ್ತಿಗೆ ಪಂಚಾಯತ್ ಅಧ್ಯಕ್ಷ ಡಿ ಸುಬ್ಬಣ್ಣ ಆಳ್ವ ದೀಪ ಬೆಳಗಿಸಿ ಉದ್ಘಾಟಿಸಿದರು. ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಹಸಿರು ಪ್ರೋಟೋಕೋಲ್ ನ್ನು ಕಾರ್ಯಕ್ರಮದುದ್ದಕ್ಕೂ ಅನುಸರಿಸಿ ಯಶಸ್ವಿಗೊಳಿಸಬೇಕೆಂದೂ ಇದಕ್ಕಾಗಿ ಪ್ರತಿಯೊಬ್ಬರೂ ಸಹಕರಿಸಬೇಕೆಂದು ಕರೆಯಿತ್ತರು.


ಮಂಜೇಶ್ವರ ವಿದ್ಯಾಭ್ಯಾಸ ಉಪಜಿಲ್ಲೆಯ ಪ್ರಭಾರ ಸಹಾಯಕ ವಿದ್ಯಾಧಿಕಾರಿ ಶ್ರೀ ಜಿತೇಂದ್ರ ಮಾತನಾಡಿ, 5 ಬಾರಿ ಕಲೋತ್ಸವವನ್ನು  ಯಶಸ್ವಿಯಾಗಿ ನಡೆಸಿದ ಧರ್ಮತ್ತಡ್ಕ ವಿದ್ಯಾಸಂಸ್ಥೆಗೆ ಹಿಂದಿನ ಅನುಭವಗಳೇ ದಾರಿದೀಪವಾಗಲಿ, ಶಾಲಾ ಕಲೋತ್ಸವವು ಊರಿನ ಉತ್ಸವವಾಗಲಿ, ನೈಜ ಪ್ರತಿಭೆಗಳು ರಾಜ್ಯಮಟ್ಟದಲ್ಲಿಯೂ ಗುರುತಿಸುವಂತಾಗಲಿ ಎಂದು ಶುಭವನ್ನು ಹಾರೈಸಿದರು.


ಹೈಸ್ಕೂಲ್, ಹೈಯರ್ ಸೆಕೆಂಡರಿ ವಿಭಾಗದ ವ್ಯವಸ್ಥಾಪಕರಾದ ಶಂಕರನಾರಾಯಣ ಭಟ್ ಮಾತನಾಡಿ, ಸರ್ವರ ಸಹಕಾರದಿಂದ ಈ ಕಲೋತ್ಸವವು ಯಶಸ್ವಿಗೊಂಡು, ಮುಂದಿನ ದಿನಗಳಲ್ಲಿ ಇತರರಿಗೆ ಮಾದರಿಯಾಗಲಿ ಎಂದು  ಹಾರೈಸಿದರು.


ಜಿಲ್ಲಾ ಪಂಚಾಯತ್ ಸದಸ್ಯ ನಾರಾಯಣ ನಾಯ್ಕ್, ಪೈವಳಿಕೆ ಗ್ರಾಮ ಪಂಚಾಯತ್ ಸದಸ್ಯ ಅಶೋಕ ಭಂಡಾರಿ, ಮಂಜೇಶ್ವರ ಮುಖ್ಯ ಶಿಕ್ಷಕರ ವೇದಿಕೆಯ ಕಾರ್ಯದರ್ಶಿ ಶ್ಯಾಮ ಭಟ್, ಬಿ.ಪಿ.ಒ ವಿಜಯಕುಮಾರ್, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ, ಹೈಯರ್ ಸೆಕೆಂಡರಿ ಪ್ರಾಂಶುಪಾಲರ ವೇದಿಕೆ ಸಂಚಾಲಕ ರಮೇಶ್, ಎಂ.ಪಿ.ಟಿ ಅಧ್ಯಕ್ಷೆ ಶ್ರೀಮತಿ ಪುಷ್ಪಾ ಕಮಲಾಕ್ಷ  ಶುಭಾಶಂಸನೆಗೈದರು‌.


ಈ ಸಂದರ್ಭ ವಾರ್ಡ್ ಸದಸ್ಯೆ ಶ್ರೀಮತಿ ಶಾಂತಿ ವೈ, ಯು.ಪಿ ಶಾಲಾ ಎಂ.ಪಿ‌.ಟಿ.ಎ ಶ್ರೀಮತಿ ಜಯಲಕ್ಷ್ಮಿ, ಯು.ಪಿ ಶಾಲಾ ವ್ಯವಸ್ಥಾಪಕಿ ಶ್ರೀಮತಿ ವಿಜಯಶ್ರೀ, ಪಿ.ಟಿ.ಎ ಉಪಾಧ್ಯಕ್ಷ ವೇಣುಗೋಪಾಲ ಶೆಟ್ಟಿ ಉಪಸ್ಥಿತರಿದ್ದರು‌. 


ಪುತ್ತಿಗೆ ಪಂಚಾಯತ್ ಅಧ್ಯಕ್ಷ ಡಿ. ಸುಬ್ಬಣ್ಣ ಆಳ್ವ ಆಧ್ಯಕ್ಷರಾಗಿ, ಧರ್ಮತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ವಿದ್ಯಾಸಂಸ್ಥೆಗಳ ಕರೆಸ್ಪಾಂಡೆಂಟ್ ಶ್ರೀಮತಿ ಶಾರದಾ ಅಮ್ಮ ಉಪಾಧ್ಯಕ್ಷರಾಗಿ, ಹೈಯರ್ ಸೆಕೆಂಡರಿ ಪ್ರಾಂಶುಪಾಲ ಎನ್. ರಾಮಚಂದ್ರ ಭಟ್ ಜನರಲ್ ಕನ್ವೀನರ್, ಹೈಸ್ಕೂಲ್ ಮುಖ್ಯೋಪಾಧ್ಯಾಯರಾದ ಈ.ಎಚ್ ಗೋವಿಂದ ಭಟ್ ಮತ್ತು ಧರ್ಮತ್ತಡ್ಕ ಯು.ಪಿ ಶಾಲಾ ಮುಖ್ಯೋಪಾಧ್ಯಾಯ ಎನ್. ಮಹಾಲಿಂಗ ಭಟ್ ಜನರಲ್ ಜೋಯಿಂಟ್ ಕನ್ವೀನರ್ ಹಾಗೂ ಮಂಜೇಶ್ವರ ಉಪಜಿಲ್ಲೆಯ ಪ್ರಭಾರ ಸಹಾಯಕ ವಿದ್ಯಾಧಿಕಾರಿ ಜಿತೇಂದ್ರ ಖಜಾಂಚಿಯಾಗಿರುವ ಸಂಘಟನಾ ಸಮಿತಿಯನ್ನು ರೂಪಿಸಲಾಯಿತು. ಇದರೊಂದಿಗೆ ಕಲೋತ್ಸವವನ್ನು ಯಶಸ್ವಿಯಾಗಿ ನಡೆಸಲು ಇತರ 9 ಉಪಸಮಿತಿ ಗಳನ್ನು ರಚಿಸಲಾಯಿತು. ಯು.ಪಿ ಶಾಲಾ ಮುಖ್ಯೋಪಾಧ್ಯಾಯ ಮಹಾಲಿಂಗ ಭಟ್ ಈ ಸಮಿತಿಯನ್ನು ಅನಾವರಣಗೊಳಿಸಿದರು. ಸಭೆಯಲ್ಲಿ ಪೂರ್ಣ ಅಂಗೀಕಾರ ಪಡೆಯಲಾಯಿತು.   


ಇದೇ ಸಂದರ್ಭ ಇತ್ತೀಚೆಗೆ ನಮ್ಮನ್ನಗಲಿದ ನಿವೃತ್ತ ವಿದ್ಯಾಧಿಕಾರಿಗಳೂ, ಕನ್ನಡ ಸಾಹಿತ್ಯ ಪರಿಷತ್ತು  ಕೇರಳ ಗಡಿನಾಡ ಘಟಕದ ಅಧ್ಯಕ್ಷರಾಗಿದ್ದ ಎಸ್.ವಿ ಭಟ್  ಅವರಿಗೆ ನುಡಿನಮನ ಅರ್ಪಿಸಿ ಮೌನಪ್ರಾರ್ಥನೆ ಸಲ್ಲಿಸಲಾಯಿತು‌.


ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಎನ್. ರಾಮಚಂದ್ರ ಭಟ್ ಅಭ್ಯಾಗತರನ್ನು ಸ್ವಾಗತಿಸಿದರು. ಮುಖ್ಯೋಪಾಧ್ಯಾಯ ಈ.ಎಚ್ ಗೋವಿಂದ ಭಟ್ ವಂದಿಸಿದರು‌. ಅಧ್ಯಾಪಕ ಸತೀಶ್ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು‌. ಯು.ಪಿ ಶಾಲಾ ಶಿಕ್ಷಕಿಯರು ಪ್ರಾರ್ಥನೆ ಹಾಡಿದರು.



ಮಂಜೇಶ್ವರ ಉಪಜಿಲ್ಲೆಯ ಹಲವು ಶಾಲೆಗಳ ಮುಖ್ಯ ಶಿಕ್ಷಕರು, ಅಧ್ಯಾಪಕರು, ಪಿ‌.ಟಿ.ಎ ಪದಾಧಿಕಾರಿಗಳು, ಧರ್ಮತ್ತಡ್ಕ ವಿದ್ಯಾಸಂಸ್ಥೆಗಳ ಎಲ್ಲಾ ಅಧ್ಯಾಪಕ, ಸಿಬ್ಬಂದಿ ವರ್ಗದವರ ಸಹಕಾರದೊಂದಿಗೆ ಕಾರ್ಯಕ್ರಮವು ಸಂಪನ್ನಗೊಂಡಿತು.

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

1 Comments
Post a Comment
Maruti Suzuki Festival of Colours
Maruti Suzuki Festival of Colours
To Top