ನಿಟ್ಟೆ: ರಜತೋತ್ಸವ ಉದ್ದಿಮೆ ಕಾರ್ಯಾಗಾರ- 2023

Upayuktha
0


ನಿಟ್ಟೆ: ವಿಶ್ವಾದ್ಯಂತ ಕಾರ್ಪೊರೇಟ್‌ ವಲಯ ಆಮೂಲಾಗ್ರವಾಗಿ ಬದಲಾಗಿದೆ. ಈ ಹಿಂದಿನ ಉದ್ಯಮಾಡಳಿತ ಚಿಂತನೆ, ಸಿದ್ಧಾಂತ, ತತ್ವಗಳು ಸಮಗ್ರವಾಗಿ ಮಾರ್ಪಾಡು ಹೊಂದಿದೆ. ಇದಕ್ಕನುಗುಣವಾದ ಪರಿಸ್ಥಿತಿಯೂ ನಿರ್ಮಾಣವಾಗಿದೆ. ಕೃತಕ ಬುದ್ದಿಮತ್ತೆ ರೋಬೋಟ್, ಚಾಟ್ ಜಿಪಿಟಿ, ಉದ್ಧಿಮೆಗಳ ಬಳಕೆ ಮತ್ತು ಭಾಷೆಯಾಗಿದೆ. ಮುಂದಿನ ಜನಾಂಗ ಈ ಬದಲಾವಣೆಗಳಿಗೆ ಯೋಗ್ಯವಾಗಿ ಸಂಧಿಸಿ ಮುಂದೆ ಸಾಗುವವರಾಗಬೇಕು. ಉದ್ಧಿಮೆಗಳು ತಮ್ಮ ಕಾರ್ಯ ಕೌಶಲದೊಂದಿಗೆ ವಲಯಗಳನ್ನು ಅತ್ಯಂತ ದಕ್ಷ ರೀತಿಯಲ್ಲಿ ಸಾಗುವಂತೆ ಮಾಡಲು ಯೋಗ್ಯ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದು ಅತ್ಯಂತ ಕಳಕಳಿ ಮತ್ತು ಜವಾಬ್ದಾರಿಯುಕ್ತ ಕೆಲಸ ಎಂದು ಪ್ರಜ್ ಜೆನ್ ಎಕ್ಸ್ ಲಿಮಿಟೆಡ್ ನ ಮುಖ್ಯಸ್ಥ ಹಾಗೂ ಉಪಾಧ್ಯಕ್ಷ (ಆಪರೇಶನ್ಸ್) ರಾದ ಸಂದೀಪ್ ಕಿನ್ ಕರ್ ಅಭಿಪ್ರಾಯಪಟ್ಟರು.


ಅವರು ನಿಟ್ಟೆಯ ಜಸ್ಟೀಸ್ ಕೆ ಎಸ್ ಹೆಗ್ಡೆ ಉಧ್ಯಮಾಡಳಿತ ಸಂಸ್ಥೆ ಆಯೋಜಿಸಿದ "ನಿಟ್ಟೆ ಉದ್ಧಿಮೆ ಕಾರ್ಯಾಗಾರ-2023” ನ್ನು ದೀಪ ಬೆಳಗಿಸಿ ಉದ್ಘಾಟಿಸಿ ದಿಕ್ಸೂಚಿ ಭಾಷಣಗೈದರು.


ಈ ಕಾರ್ಯಾಗಾರವು ಉದ್ಯಮಾಡಳಿತ ಪುನರ್ ಚಿಂತನೆ ಹಾಗು ಬದಲಾಗುತ್ತಿರುವ ಸಂದಿಗ್ದ ವ್ಯವಹಾರ ಪರಿಸ್ಥಿತಿಗಳ ಕುರಿತು ರಜತ ಮಹೋತ್ಸವ ಕಾರ್ಯಾಗಾರವಾಗಿದ್ದು  ಭಾನುವಾರ (ಸೆ.10) ಇದನ್ನು ಸಂಸ್ಥೆಯಲ್ಲಿ ಆಯೋಜಿಸಿತ್ತು. ಇನೋರ್ವ ಮುಖ್ಯ ಅತಿಥಿಗಳಾದ ಪ್ರಾಕ್ತನ ಉಪಾಧ್ಯಕ್ಷರು ಹಾಗೂ ಮುಖ್ಯಸ್ಥರೂ (ಸಾಸ್ಕೆನ್ ಟೆಕ್ನಾಲಾಜೀಸ್‌) ಪ್ರೈ ಲಿಮಿಟೆಡ್‌ನ ಸ್ವಾಮಿನಾಥನ್ ಕೃಷ್ಣನ್ ಅವರು ಮಾತನಾಡುತ್ತಾ, ಮಾನವೀಯ ಮೌಲ್ಯಗಳು, ನಂಬಿಕೆ, ದೃಢಚಿತ್ತ, ಪ್ರಾಮಾಣಿಕತ್ವ, ಸಮಯವಾಲನೆಯನ್ನು ಸಂಪೂರ್ಣವಾಗಿ ನೆಚ್ಚಿ ವೃತ್ತಿಪರತೆಯನ್ನು ಪ್ರತಿಹಂತದಲ್ಲೂ ಉದ್ಯೋಗಿಗಳು ಕರಗತ ಮಾಡಿಕೊಳಬೇಕು ಸಾಕಷ್ಟು ಅವಕಾಶಗಳು ಮತ್ತು ಅವಕಾಶಗಳು ಉದ್ಧಿಮೆ ವಲಯದಲ್ಲಿದೆ ಎಂದರು.


ನಿಟ್ಟೆಯ ಜಸ್ಟೀಸ್ ಕೆ ಎಸ್ ಹೆಗ್ಡೆ ಸಂಸ್ಥೆ ಆಯೋಜಿಸಿದ ಸಮಯೋಚಿತ ಕಾರ್ಯಾಗಾರವನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು (ನಿಟ್ಟೆ ಪರಿಗಣಿತ ವಿವಿ)ಯ ತಾಂತ್ರಿಕ ಶಿಕ್ಷಣದ ಉಪಾಧ್ಯಕ್ಷರಾದ ಡಾ. ಗೋಪಾಲ ಮುಗೇರಾಯ ವಹಿಸಿದ್ದು ಉಧ್ಯಮಾಡಳಿತ ವಿದ್ಯಾರ್ಥಿಗಳು ಮತ್ತು ಪ್ರಾಧ್ಯಾಪಕರು ಬದಲಾಗುತ್ತಿರುವ ಕಾರ್ಪೊರೇಟು ವಲಯಗಳ ಆಗುಹೋಗುಗಳಿಗೆ ತಮ್ಮನ್ನು ತಾವು ಕ್ಷಣ, ಕ್ಷಣದಲ್ಲಿ ತೆರೆದು ಕೊಳ್ಳಬೇಕು ಎಂದರು.


ಸಂಸ್ಥೆಯ ನಿರ್ದೇಶಕರಾದ ಡಾ. ಗುರುರಾಜ್ ಹೆಚ್ ಕಿದಿಯೂರು ಕಾರ್ಯಾಗಾರದ ಆಶಯ, ಮಹತ್ವ ಮತ್ತು ದಿರ್ಘವಧಿ  ಮೌಲ್ಯಗಳ ಬಗ್ಗೆ ಮಾತನಾಡಿದರು. ಕಾರ್ಯಾಗಾರ ಸಂಯೋಜಕರು ಹಾಗೂ ಸಂಸ್ಥೆಯ ಪ್ಲೇಸ್ಮೆಂಟ್ ಮತ್ತು ಅಡ್ಮಿಶನ್ ಮುಖ್ಯಸ್ಥರಾದ ಗುರುಪ್ರಶಾಂತ್ ಭಟ್ ಪರಿಚಯಿಸಿ, ಸ್ವಾಗತಿಸಿದರು. ಎಂಬಿಎ ವಿದ್ಯಾರ್ಥಿನಿ ನಿಧಿ ಪ್ರಾರ್ಥಿಸಿದರು. ಪ್ರೊಫೆಸರ್ ಕಾರ್ತಿಕ್ ಕುದ್ರೋಳಿ ವಂದನಾರ್ಪಣೆಗೈದರು. ಡಾ. ಸುಧೀರ್ ರಾಜ್ ಕೆ ಕಾರ್ಯಕ್ರಮ ನಿರ್ವಹಿಸಿದರು.


ಕಾರ್ಯಾಗಾರ ಗೋಷ್ಠಿಗಳು:

ಈ ಕಾರ್ಯಾಗಾರದಲ್ಲಿ ಬದಲಾಗುತ್ತಿರುವ ಉಧ್ಯಮಾಡಳಿತ ಚಿಂತನೆಗೆ ಸಂಬಂಧಿಸಿ ನಾಲ್ಕು ಪ್ರಮುಖ ಗೋಷ್ಠಿಗಳನ್ನು ಆಯೋಜಿಸಲಾಗಿತ್ತು. ಪ್ರಮುಖ ಕಂಪನಿಗಳ ಮುಖ್ಯಸ್ಥರು, ಆಡಳಿತ ನಿರ್ದೇಶಕರು ಸಿಇಒಗಳು ಮಾನವ ಸಂಪದ ಅಧಿಕಾರಿಗಳು ಸ್ಟಾರ್ಟ್ಅಪ್ ಗಳು ಗೋಷ್ಠಿಯಲ್ಲಿ ಪಾಲ್ಗೊಂಡಿದ್ದವು,.


ಐಟಿಸಿ(ಲಿ) ಎಬಿಡಿ, ಹನಿವೆಲ್ ವರೋಸ್ಪಾಸ್, ಆಟೋಮೋಟಿವ್ ಓಡಿಯೋ ಸಾಫ್ಟ್ ವೇರ್ ಹರ್ಮನ್ ಇಂಟರ್ನ್ಯಾಷನಲ್, ವಿಪ್ ಪ್ಲೈ ಇಂಡಿಯಾ, ಜಿಟಿ, ಹೆಚ್ ಅಂಡ್ ಕೋ (ಲಿ), ಕ್ಯಾಂಟಿಲಿವೆರ್ ಲ್ಯಾಬ್ಸ್,  ಸುಶ್ರುತ್ ಆಯುರ್ವೇದಿಕ್ ಇಂಡಸ್ಟ್ರೀಸ್, ವೆಂಟನಾ ವೆಂಚರ್ಸ್, ಎಕ್ಸಿಟೋ ಮೀಡಿಯಾ ಕಾನ್ಸೆಪ್ಟ್ ಪ್ರೈ(ಲಿ), ಇನ್ ಫಿನಿಯೋನ್, ವಿಥಮ್ ಇಂಡಿಯಾ ಎಲ್‌ಎಲ್‌ಪಿ, ಟಯೋಟಾ ಇವರಿ, ರೋಬೋಸೋಫ್ಟ್ ಟೆಕ್ನಾಲಜೀಸ್, ಒನೆಸಿಲ್ಕ್, ಡಬ್ಲ್ಯೂಜಿ ಹೋಲ್ಡಿಂಗ್ಸ್, ಎಐಸಿ ನಿಟ್ಟೆ ಕಾರ್ಯಾಗಾರದಲ್ಲಿ ಪಾಲ್ಗೊಂಡು ಎಂಬಿಎ ವಿದ್ಯಾರ್ಥಿಗಳು ಹಾಗೂ ಪ್ರಾಧ್ಯಾಪಕರ ಜೊತೆ ಸಂವಹನ ನಡೆಸಿದರು.


ಸಮಾರೋಪ: ಐಟಿಸಿ (ಲಿ) (ಎಂಬಿಡಿ)ಯ ಉಪಾಧ್ಯಕ್ಷ (ಎಚ್ ಆರ್) ಪಿ ವೀರಾಸ್ವಾಮಿ ಸಮಾರೋಪ ಭಾಷಣಗೈದರು.


إرسال تعليق

0 تعليقات
إرسال تعليق (0)
Best Summer Deals Marvellous May Offers at Mandovi Motors
Best Summer Deals Marvellous May Offers at Mandovi Motors
To Top