ಶ್ರೀನಿವಾಸ್ ವಿವಿ ಸಮಾಜ ವಿಜ್ಞಾನ ಮತ್ತು ಮಾನವಿಕ ಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಣೆ

Upayuktha
0


ಮಂಗಳೂರು: ಶ್ರೀನಿವಾಸ್ ವಿಶ್ವವಿದ್ಯಾನಿಲಯದ ಸಮಾಜ ವಿಜ್ಞಾನ ಮತ್ತು ಮಾನವಿಕ ಸಂಸ್ಥೆಯು 2023ರ ಸೆಪ್ಟೆಂಬರ್ 18ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಪಾಂಡೇಶ್ವರದ ಶ್ರೀನಿವಾಸ್ ವಿಶ್ವವಿದ್ಯಾಲಯದ ಸಿಟಿ ಕ್ಯಾಂಪಸ್‌ನಲ್ಲಿ ಚಿಂತನ-ಮಂಥನ ಮತ್ತು ವಿಚಾರ ಪ್ರಚೋದಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.


ಸಮಾಜ ವಿಜ್ಞಾನ ಮತ್ತು ಮಾನವಿಕ ಸಂಸ್ಥೆಯ ಪ್ರಾಧ್ಯಾಪಕಿ ಹಾಗೂ ವಿಭಾಗದ ಮುಖ್ಯಸ್ಥೆ ಡಾ.ಲವೀನಾ ಡಿಮೆಲ್ಲೋ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.


MSW ವಿದ್ಯಾರ್ಥಿ ಅಲೆಕ್ಸಾಂಡರ್ ಜೋಸೆಫ್, ಪ್ರಜಾಪ್ರಭುತ್ವದ ತತ್ವಗಳನ್ನು ಎತ್ತಿಹಿಡಿಯುವ ಬದ್ಧತೆಯನ್ನು ಸಂಕೇತಿಸುವ ಪ್ರತಿಜ್ಞಾ ವಿಧಿಯನ್ನು ಓದಿದರು.  ಈ ಕಾರ್ಯಕ್ರಮವು ಪ್ರಜಾಪ್ರಭುತ್ವ ಮತ್ತು ನಾಗರಿಕ ಜವಾಬ್ದಾರಿಯ ಮಹತ್ವವನ್ನು ಸಾರಿತು.


MSW, BSW ಮತ್ತು BAJMC ಯ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ  ಸಕ್ರಿಯವಾಗಿ ತೊಡಗಿಸಿಕೊಂಡರು. ಪ್ರೊ.ಜಾಯ್ಸನ್ ಪ್ರೇಂಕಿ ಕಾರ್ಡೋಜಾ, ಪ್ರೊ.ಸುಶ್ಮಿತಾ, ಪ್ರೊ.ಪ್ರಜ್ಞಾ ಉಪಸ್ಥಿತರಿದ್ದರು.


ಎಂಎಸ್‌ಡಬ್ಲ್ಯೂ ವಿದ್ಯಾರ್ಥಿ ಅರುಣ್ ಕುರಿಕೋಸ್ ಕಾರ್ಯಕ್ರಮ ನಿರೂಪಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter 

Post a Comment

0 Comments
Post a Comment (0)
To Top