ಆತ್ಮಹತ್ಯೆ ತಡೆಯಲು ಬೇಕು ಅನುಭೂತಿಯುಳ್ಳ ಆಪ್ತಸಮಾಲೋಚನೆ: ಹಿರಿಯ ಸಿವಿಲ್ ನ್ಯಾಯಾಧೀಶ ಸಿ.ಎನ್. ಚಂದನ್

Upayuktha
0


ಶಿವಮೊಗ್ಗ: ಶಿವಮೊಗ್ಗದ ಮಾನಸ ಟ್ರಸ್ಟ್‌ನ ಕಟೀಲ್ ಅಶೋಕ್ ಪೈ ಸ್ಮಾರಕ ಸಂಸ್ಥೆಯು ಶಿವಮೊಗ್ಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದೊಂದಿಗೆ ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆಯನ್ನು ಕಾಲೇಜಿನ ಬಹುಮುಖಿ ಸಭಾಂಗಣದಲ್ಲಿ ಇಂದು (ಸೆ.12) ಆಚರಿಸಲಾಯಿತು. ಈ ದಿನದ ಪ್ರಯುಕ್ತ ಕಾಲೇಜಿನ ಮನೋವಿಜ್ಞಾನ ಹಾಗೂ ಕ್ಲಿನಿಕಲ್ ಸೈಕಾಲಜಿ ವಿದ್ಯಾರ್ಥಿಗಳು ಒಂದು ವಾರಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಇಂದು ಸಮಾರೋಪ ಕಾರ್ಯಕ್ರಮವನ್ನು ನಡೆಸಿದರು.


ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳೂ ಆದ ಸಿ.ಎನ್. ಚಂದನ್ ರವರು ಸಮಾರೋಪ ನುಡಿಗಳನ್ನಾಡಿದರು.


ಆತ್ಮಹತ್ಯೆ ತಡೆಯೆಂಬುದು ‘ನನ್ನಂತೆ ನೀನು ಬದುಕು’ ಎಂಬ ಸಂದೇಶವನ್ನು ನೀಡಬಲ್ಲ ಒಂದು ಮಾನವೀಯ ಪರಿಕಲ್ಪನೆ. ಆತ್ಮಹತ್ಯೆಯೊಂದು ಮನೋ ಸಾಮಾಜಿಕ ಸಂಕೀರ್ಣ ಸಮಸ್ಯೆ. ಕಾನೂನಿನಲ್ಲಿ ಇದೊಂದು ಅಪರಾಧವೆಂದು ಪರಿಗಣಿಸಲ್ಪಟ್ಟರೂ ಆತ್ಮಹತ್ಯೆಯ ಯೋಚನೆಗಳು ಒಂದು ಮಾನಸಿಕ ಸಮಸ್ಯೆಯೂ ಹೌದು.  ಆದುದರಿಂದ ಅತ್ಮಹತ್ಯೆಗೆ ಪ್ರಯತ್ನಿಸುವ ವ್ಯಕ್ತಿಗಳಿಗೆ ಮೂಲಭೂತವಾಗಿ ಮಾನಸಿಕ ತಜ್ಞರಿಂದ ಅನುಭೂತಿಯುಳ್ಳ ಚಿಕಿತ್ಸೆಯು ದೊರಕಬೇಕು. ಆತ್ಮಹತ್ಯೆ ತಡೆಯುವಲ್ಲಿ ಸಮಾಜದ ಪ್ರತಿಯೊಬ್ಬರೂ ಜವಾಬ್ದಾರಿಯುತವಾಗಿ ಮಾತನಾಡಬೇಕು ಮತ್ತು ವರ್ತಿಸಬೇಕು ಎಂದು ನುಡಿದರು.


ಅತಿಯಾದ ಅಸೂಯೆ, ಅತಿಯಾದ ನಿರೀಕ್ಷೆಗಳು ಹಾಗೂ ಬದುಕಿನ ಕುರಿತು ಅನಗತ್ಯ ಆಲೋಚನೆಗಳು ಆತ್ಮಹತ್ಯೆಗೆ ಕಾರಣ ಅಲ್ಲದೆ ಇಂದಿನ ಸಮಾಜದಲ್ಲಿ ಹೆಚ್ಚುತ್ತಿರುವ ಸ್ವಾರ್ಥಪರತೆ ಅನಗತ್ಯ ವಸ್ತುಗಳ ಕುರಿತು ಅತಿ ಆಸೆ ಹಾಗೂ ವಿವಿಧ ಆಮಿಷಗಳಿಗೆ ಬಲಿಯಾಗುವ ಪರಿಸ್ಥಿತಿಗಳು ಆತ್ಮಹತ್ಯೆಯ ಪ್ರಮಾಣವನ್ನು ಹೆಚ್ಚಿಸಿದೆ. ಆದುದರಿಂದ ಜೀವನ ಮೌಲ್ಯದ ಕುರಿತು ಸಂಭಾಷಣೆ, ಪರಸ್ಪರ ಅವಲಂಬನೆಯ ಕುರಿತು ಗೌರವ ಋಣಾತ್ಮಕತೆಯಿಂದ ದೂರವಿರಬಲ್ಲ ಮನಸ್ಥಿತಿ ಹೆಚ್ಚಾಗಬೇಕಿದೆ. ಇದೆಲ್ಲದರ ಜೊತೆಗೆ ಮನೋಚಿಕಿತ್ಸೆಯ ಸೌಲಭ್ಯ ಹಾಗೂ ಆಪ್ತಸಮಾಲೋಚನೆ ಎಲ್ಲಾ ಕ್ಷೇತ್ರಗಳಲ್ಲೂ ದೊರಕುವಂತಾಗಬೇಕು ಎಂದು ಹಿರಿಯ ನ್ಯಾಯಾಧೀಶರು ತಿಳಿಸಿದರು.


ಕಾರ್ಯಕ್ರಮದಲ್ಲಿ ಕ್ಲಿನಿಕಲ್ ಸೈಕಾಲಜಿ ವಿಭಾಗದ ಮುಖ್ಯಸ್ಥರಾದ ಡಾ. ಪುಷ್ಟಲತಾರವರು ಎಲ್ಲರನ್ನೂ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಆತ್ಮಹತ್ಯೆಯ ಯೋಚನೆಗಳುಳ್ಳ ವ್ಯಕ್ತಿಯನ್ನು ಗುರುತಿಸುವ ಮತ್ತು ವಿಶ್ಲೇಷಿಸುವ ಕಾರ್ಯದ ಮೂಲಕ ಮಾನಸಿಕ ತಜ್ಞರು ಅದನ್ನು ತಡೆಯುವಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತಾರೆ ಎಂದು ತಿಳಿಸಿದರು.


ಕಾರ್ಯಕ್ರಮದಲ್ಲಿ ಎಂ.ಸಿ.ಸಿ.ಎಸ್.ನ ನಿರ್ದೇಶಕರಾದ ಡಾ. ರಾಜೇಂದ್ರ ಚನ್ನಿರವರು ಮಾತನಾಡಿ, ಪ್ರತಿ 60  ಸೆಕೆಂಡುಗಳಿಗೆ 01 ರಂತೆ ವಿಶ್ವಾದ್ಯಂತ ನಡೆಯುವ ಆತ್ಮಹತ್ಯೆಯ ಸಮಸ್ಯೆಯು ಒಂದು ತೀವ್ರತರವಾದ ಸಮಸ್ಯೆ. ಅದನ್ನು ತಡೆಯುವುದು ಅಗತ್ಯ ಎಂದರು.


ಕಾರ್ಯಕ್ರಮದಲ್ಲಿ ಮಾನಸ ಸಂಸ್ಥೆಯ ಡಾ.ರಜನಿ ಎ ಪೈ, ಕ್ಲಿನಿಕಲ್ ಸೈಕಾಲಜಿ ವಿಭಾಗದ ಸಂಯೋಜಕರಾದ ಸಿಸ್ಟರ್ ಮಾರಿ ಇವ್ಲಿನ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಪ್ರಾಂಶುಪಾಲರಾದ ಡಾ. ಸಂಧ್ಯಾ ಕಾವೇರಿ ಕೆ ಅಧ್ಯಕ್ಷತೆ ವಹಿಸಿದ್ದರು.


ಈ ಕಾರ್ಯಕ್ರಮದಲ್ಲಿ ಭಿತ್ತಿಚಿತ್ರ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನವನ್ನು ಕು. ಆಲಿಯಾ ಹಾಗೂ ದ್ವಿತೀಯ ಬಹುಮಾನವನ್ನು ಕು. ಅಕ್ಷತಾ ಕಾಮತ್ ಪಡೆದರು. ಕು.ಸ್ನೇಹಾ ನಿರೂಪಿಸಿ, ಎಂ.ಫಿಲ್ ಸೈಕಾಲಜಿ ವಿದ್ಯಾರ್ಥಿಗಳು ಪ್ರಾರ್ಥಿಸಿ, ಉಪನ್ಯಾಸಕರಾದ ಶ್ರೀಮತಿ ಶ್ರೀದೇವಿ ವಂದಿಸಿದರು. ಇದೇ ಸಂದರ್ಭದಲ್ಲಿ ಎಂ.ಎಸ್ಸಿ ಮನ:ಶಾಸ್ತ್ರದ ಪ್ರಥಮ ವರ್ಷದ ವಿದ್ಯಾರ್ಥಿಗಳು ಆತ್ಮಹತ್ಯೆಯ ಕುರಿತು ಕಿರು ನಾಟಕವನ್ನು ಪ್ರದರ್ಶಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top