ಸೌಜನ್ಯಾ ಪ್ರಕರಣದ ನೆಪದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳದ ತೇಜೋವಧೆ ಖಂಡನೀಯ: ಹಿಂದೂ ಜನಜಾಗೃತಿ ಸಮಿತಿ

Upayuktha
0

ಸೌಜನ್ಯಾಳ ಅತ್ಯಾಚಾರ ಪ್ರಕರಣದಲ್ಲಿ ನಿಜವಾದ ಅಪರಾಧಿಗಳಿಗೆ ಶಿಕ್ಷೆಯಾಗಲೇಬೇಕು



ಬೆಂಗಳೂರು: ಧರ್ಮಸ್ಥಳದ ಸೌಜನ್ಯಾ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳದ ವಿಶೇಷ ನ್ಯಾಯಾಲಯವು ಆರೋಪಿ ಸಂತೋಷ್ ರಾವ್ ಇವರನ್ನು ನಿರ್ದೋಷಿ ಎಂದು ಇತ್ತೀಚೆಗೆ  ಘೋಷಿಸಿದೆ. ಈ ಪ್ರಕರಣಕ್ಕೆ 11 ವರ್ಷ ಕಳೆದರೂ ಸಹ ನಿಜವಾದ ಆರೋಪಿಗಳ ಬಂಧನ ಆಗದಿರುವುದು ದುರದೃಷ್ಟಕರ ವಿಷಯವಾಗಿದೆ. ಇದು ಕಾನೂನು ಸುವ್ಯವಸ್ಥೆಯು ವಿಫಲವಾಗಿರುವುದರ ಲಕ್ಷಣವಾಗಿದೆ. ಈಗ ರಾಜ್ಯದಲ್ಲಿ ಮೃತ ಕು. ಸೌಜನ್ಯಾಳ ಪ್ರಕರಣವು ಮರುತನಿಖೆಯಾಗಬೇಕೆಂಬ ಆಗ್ರಹವು ಸಮಾಜದಲ್ಲಿ ಪುನಃ ಕೇಳಿ ಬರುತ್ತಿದೆ. ಆದರೆ ಈ ಪ್ರಕರಣವನ್ನು ನೆಪವಾಗಿಟ್ಟುಕೊಂಡು ಅನೇಕ ಎಡಪಂಥೀಯರು ಮತ್ತು ಅನ್ಯ ಸಮುದಾಯದ ಸಂಘಟನೆಯವರು ಶ್ರೀ ಕ್ಷೇತ್ರ ಧರ್ಮಸ್ಥಳದ ತೇಜೋವಧೆ ಮಾಡುವ ಪ್ರಯತ್ನ ಮಾಡುತ್ತಿರುವುದು ಗಮನಕ್ಕೆ ಬರುತ್ತಿದೆ. ಇದು ಅತ್ಯಂತ ಖಂಡನೀಯ ಎಂದು ಹಿಂದೂ ಜನಜಾಗೃತಿ ಸಮಿತಿ ಹೇಳಿದೆ.

ಹಿಂದೂ ಕ್ಷೇತ್ರಗಳ ಅವಹೇಳನಕ್ಕೆ ಕ್ರೈಸ್ತ ಮಿಷನರಿಗಳ ಸಹಿತ ಹಿಂದುಯೇತರರ ಸಂಚು?

1. ಕನ್ನಡ ನಟ ದುನಿಯಾ ವಿಜಯ ಇವರು ಪ್ರತಿ ವರ್ಷ ಧರ್ಮಸ್ಥಳದ ದರ್ಶನ ಪಡೆಯುವುದು ವಾಡಿಕೆಯಾಗಿತ್ತು, ಆದರೆ ಸೌಜನ್ಯಾಳ ಪ್ರಕರಣದ ಇಂದಿನ ಬೆಳವಣಿಗೆ ನೋಡಿ ‘ಸೌಜನ್ಯಾ ಮತ್ತು ಕುಟುಂಬಸ್ಥರಿಗೆ ನ್ಯಾಯ ಸಿಗುವವರೆಗೂ ಮಂಜುನಾಥನ ದರ್ಶನ ಮಾಡಕೂಡದು ಅನಿಸುತ್ತಿದೆ ಎಂದು ಹೇಳಿದರು.

2. ನಟ ಪ್ರಕಾಶ ರಾಜ್ ಇವರು ಸೌಜನ್ಯ ಪ್ರಕರಣದಲ್ಲಿ ಧರ್ಮಾಧಿಕಾರಿ ಡಾ. ವಿರೇಂದ್ರ ಹೆಗ್ಗಡೆಯವರ ಮಂಪರು ಪರೀಕ್ಷೆ ಮಾಡಬೇಕೆಂದು ಹೇಳಿದರು.

3. ನಟ ವಿನೋದ್ ಟೈಗರ್ ಪ್ರಭಾಕರ ಇವರು ಸೌಜನ್ಯ ಸಾವಿಗೆ ನ್ಯಾಯ ಸಿಗುವವರೆಗೂ ನಾನು ಧರ್ಮಸ್ಥಳಕ್ಕೆ ಹೋಗುವುದಿಲ್ಲ ಹೇಳಿದರು.

4. ನಟ ಚೇತನ ಅಹಿಂಸಾ ಇವರು ಈ ಪ್ರಕರಣದಲ್ಲಿ ಧರ್ಮಸ್ಥಳದ ಶಕ್ತಿಗಳು ಮೌನವಾಗಿರುವುದೇಕೆ ? ಅವರು ಅಪರಾಧದಲ್ಲಿ ತಮ್ಮದೆ ಆದ ಪಾಲ್ಗೊಳ್ಳುವಿಕೆಯನ್ನು ಮರೆಮಾಡುತ್ತಾರೆಯೇ ? ಎಂದರು.

5. ಒಡನಾಡಿ ಕ್ರೈಸ್ತ ಸಂಘಟನೆಯ ಸಂಸ್ಥಾಪಕ ಸ್ಟ್ಯಾನ್ಲಿ ಇವರು ಧರ್ಮಸ್ಥಳವನ್ನು ಹಂದಿಯ ಹಾಗೆ ಹೊಡೆಯಬೇಕು ಎಂಬ ಹೇಳಿಕೆ ನೀಡಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹರಿದಾಡುತ್ತಿದೆ.

ಕ್ಯಾಥೊಲಿಕ್ ಬಿಷಪ್ ಫ್ರಾಂಕೊ ಮುಲಕ್ಕಲ್ ಕ್ರೈಸ್ತ ಸನ್ಯಾಸಿನಿಯ ಮೇಲೆ ಅತ್ಯಾಚಾರ ಮಾಡಿದ ಪ್ರಕರಣದಲ್ಲಿ ಯಾರು ಸಹ ಚರ್ಚ್ ಗುರಿ ಮಾಡಿರಲಿಲ್ಲ. ಆದರೆ ಈ ಪ್ರಕರಣದಲ್ಲಿ ಮಾತ್ರ ಹಿಂದೂಗಳಲ್ಲದವರು ಸಹ ಹಿಂದೂಗಳ ಪವಿತ್ರ ಕ್ಷೇತ್ರವನ್ನು ಗುರಿ ಮಾಡುತ್ತಿದ್ದಾರೆ.


ಕೇವಲ ಕರ್ನಾಟಕ ರಾಜ್ಯದಲ್ಲಿಯೇ ಇಸವಿ 2019 ರಿಂದ 2021 ರ 3 ವರ್ಷಗಳ ಕಾಲಾವದಿಯಲ್ಲಿ 40,000 ಬಾಲಕಿಯರು, ಮಹಿಳೆಯರು ನಾಪತ್ತೆಯಾಗಿದ್ದಾರೆ. ಯಾಕೆ ಎಲ್ಲ ಪ್ರಕರಣಗಳ ಮೇಲೆ ತನಿಖೆಯನ್ನು ಮಾಡಲಿಲ್ಲ. ಧರ್ಮಸ್ಥಳದ ಬಗ್ಗೆ ಮಾತನಾಡುವ ಹಿಂದುಯೇತರರು ಈ ಎಲ್ಲ ಪ್ರಕರಣಗಳ ಬಗ್ಗೆ ಏಕೆ ಮೌನ? ಧರ್ಮಸ್ಥಳವನ್ನೇ ಗುರಿ ಮಾಡುವುದು ಏಕೆ? ಒಟ್ಟಾರೆ ಈ ಎಲ್ಲ ಘಟನೆಗಳನ್ನು ಗಮನಿಸಿದಾಗ ಕು. ಸೌಜನ್ಯಾ ಪ್ರಕರಣವನ್ನು ನೆಪಮಾಡಿಕೊಂಡು ಹಿಂದೂ ವಿರೋಧಿಗಳು ಧರ್ಮಸ್ಥಳವನ್ನು ಗುರಿ ಮಾಡುತ್ತಿರುವುದು ಗಮನಕ್ಕೆ ಬರುತ್ತದೆ. ಇದನ್ನು ಹಿಂದೂ ಜನಜಾಗೃತಿ ಸಮಿತಿಯು ಖಂಡಿಸುತ್ತದೆ. ಮೃತ ಕು. ಸೌಜನ್ಯಾ ಪ್ರಕರಣವು ಮರುತನಿಖೆಯಾಗಲೇಬೇಕು ಮತ್ತು ನಿಜವಾದ ಅಪರಾಧಿಗಳ ಬಂಧನವಾಗಿ, ಅವರಿಗೆ ಕಠಿಣ ಶಿಕ್ಷೆಯಾಗಲೇಬೇಕು, ಇದರಲ್ಲಿ ಮರುಪ್ರಶ್ನೆಯೇ ಇಲ್ಲ. ಆದರೆ ಪ್ರಕರಣದ ತನಿಖೆ ಪ್ರಾರಂಭವಾಗುವ ಮೊದಲೇ ಧರ್ಮಸ್ಥಳದ ತೇಜೋವಧೆಯನ್ನು ಮಾಡುವುದು ಸರಿಯಲ್ಲ ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ವಕ್ತಾರ ಮೋಹನ ಗೌಡ ಅವರು ಅಗ್ರಹಿಸಿದ್ದಾರೆ.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Best Summer Deals Marvellous May Offers at Mandovi Motors
Best Summer Deals Marvellous May Offers at Mandovi Motors
To Top