ತೆಂಕನಿಡಿಯೂರು: ಅಂತಾರಾಷ್ಟ್ರೀಯ ಕರಾವಳಿ ಸ್ವಚ್ಛತಾ ದಿನಾಚರಣೆ, ಕಡಲಾಮೆ ರಕ್ಷಣಾ ಜಾಗೃತಿ ಕಾರ್ಯಾಗಾರ

Upayuktha
0

ತೆಂಕನಿಡಿಯೂರು: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಡಿಯೂರು ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ, ಯೂತ್ ರೆಡ್ ಕ್ರಾಸ್ ಘಟಕ, ರೇಂಜರ್ ರೋವರ್ ಘಟಕ ಮತ್ತು ಎಚ್ ಸಿ ಎಲ್ ಫೌಂಡೇಶನ್, ಉಡುಪಿ ನಗರಸಭೆ, ಅರಣ್ಯ ಇಲಾಖೆ  ಸಹಯೋಗದೊಂದಿಗೆ ಮಲ್ಪೆ ಕಡಲ ತೀರದಲ್ಲಿ ಬೀಚ್ ಸ್ವಚ್ಛತಾ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು. 


ಬೀಚ್‌ನಲ್ಲಿರುವ ವಿವಿಧ ರೀತಿಯ ಪ್ಲಾಸ್ಟಿಕ್ ತ್ಯಾಜ್ಯ ಚಪ್ಪಲಿಗಳು, ಪೇಪರ್ ಕಸ ಇತ್ಯಾದಿಗಳನ್ನು ಹೆಕ್ಕಿ ಬೇರ್ಪಡಿಸಿ ನಗರ ಸಭೆಗೆ ಹಸ್ತಾಂತರಿಸಲಾಯಿತು. ಕಾಲೇಜಿನ ಎನ್.ಎಸ್.ಎಸ್. ಘಟಕದ ಯೋಜನಾಧಿಕಾರಿಗಳಾದ ಡಾ. ರಘು ನಾಯ್ಕ ಮತ್ತು ಶ್ರೀಮತಿ ಮಮತಾ ವಿವಿಧ ಸಂಘಟನೆಗಳ ಅಧ್ಯಕ್ಷರುಗಳು ಮತ್ತು ಅರಣ್ಯ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter    

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top