ಉಡುಪಿ: ದ್ವಾರಕಾಮಯಿ ಮಠ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನ ಶಂಕರಪುರ ಮತ್ತು ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಇದರ ವತಿಯಿಂದ ಇಂದು (ಸೆ.21 ಗುರುವಾರ) ಜಯಂಟ್ಸ್ ಸಪ್ತಾಹದ ಅಂಗವಾಗಿ ಬಿಲ್ವ ಪತ್ರ ಗಿಡ ವಿತರಣಾ ಅಭಿಯಾನ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶ್ರೀ ಸಾಯಿ ಈಶ್ವರ್ ಗುರೂಜಿ ಬಿಲ್ವಪತ್ರ ಗಿಡದಿಂದ ನಮ್ಮ ಆರೋಗ್ಯಕ್ಕೆ ಮತ್ತು ಪರಿಸರಕ್ಕೆ ವಿಶೇಷವಾದ ಲಾಭವಿದೆ ಈ ಗಿಡವನ್ನು ನೆಟ್ಟು ನಮ್ಮ ಆರೋಗ್ಯವನ್ನು ಮತ್ತು ಆಧ್ಯಾತ್ಮಿಕವಾಗಿ ನಮ್ಮ ಸಮಾಜವನ್ನು ಕೂಡ ಕಾಪಾಡಬಹುದು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಅಧ್ಯಕ್ಷೆ ವೀಣಾ ಶೆಟ್ಟಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಗೀತಾಂಜಲಿ ಸುವರ್ಣ, ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಇದರ ಅಧ್ಯಕ್ಷ ವಿವೇಕಾನಂದ ಕಾಮತ್ ನಿಕಟ ಪೂರ್ವ ಅಧ್ಯಕ್ಷ ಸುಂದರ ಪೂಜಾರಿ ಮೂಡುಕುಕ್ಕುಡೆ, ಸುನೀತಾ ಮಧುಸೂಧನ್ ಮುಂತಾದವರು ಉಪಸ್ಥಿತರಿದ್ದರು. ಕಾರ್ಯಕ್ರಮದ ಕುರಿತಾಗಿ ಜಯಂಟ್ಸ್ ಗ್ರೂಪ್ ಫೆಡರೇಶನ್ ಮಾಜಿ ಅಧ್ಯಕ್ಷ ಮಧುಸೂದನ್ ಹೇರೂರು ಬಿಲ್ವ ಪತ್ರ ಅಭಿಯಾನಂದ ಕುರಿತಾಗಿ ಮಾಹಿತಿ ನೀಡಿದರು.
ಈ ಸಂದರ್ಭ ಬೆಂಗಳೂರಿನ ಸಾಯಿ ಭಕ್ತರಾದ ಶ್ರೀರಾಮು ಇವರು ಕೊಡ ಮಾಡಿದ ಸಾಯಿ ಮುಖ್ಯಪ್ರಾಣ ಭಾವಚಿತ್ರವನ್ನು ಈ ಸಂದರ್ಭದಲ್ಲಿ ಬಿಡುಗಡೆಗೊಳಿಸಲಾಯಿತು. ರಾಘವೇಂದ್ರ ಪ್ರಭು ಕರ್ವಾಲು ನಿರೂಪಿಸಿ ವಂದಿಸಿದರು. ಸುಮಾರು 300 ಜನರಿಗೆ ಗಿಡಗಳನ್ನು ವಿತರಿಸಲಾಯಿತು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ