ಉಜಿರೆ: “ಗೃಹವಿಜ್ಞಾನವೆಂಬುದು ನಮ್ಮ ದೈನಂದಿನ ಜೀವನದಲ್ಲಿ ಎಲ್ಲಾ ಕಾರ್ಯ ಚಟುವಟಿಕೆ ಗಳನ್ನು ಸಮರ್ಪಕವಾಗಿ ನಿರ್ವಹಿಸಲು ಸಹಕಾರಿಯಾಗುವ ಮಾಧ್ಯಮ” ಎಂದು ಉಜಿರೆ ಎಸ್.ಡಿ.ಎಂ. ಕಾಲೇಜಿನ ಆಡಳಿತ ಕುಲಸಚಿವೆ ಡಾ. ಶಲೀಫ್ ಎ.ಪಿ. ಅಭಿಪ್ರಾಯಪಟ್ಟರು.
ಅವರು ಕಾಲೇಜಿನಲ್ಲಿ ಗೃಹವಿಜ್ಞಾನ ವಿಭಾಗದ ವತಿಯಿಂದ ಸೆ.16ರಂದು ನಡೆದ ‘ಎಜುನ್ಯೂಟ್ರಿ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಆರೋಗ್ಯದ ಬಗ್ಗೆ ಇಂದು ಪ್ರತಿಯೊಬ್ಬರು ಕಾಳಜಿ ವಹಿಸಬೇಕಾದ ಅಗತ್ಯವಿದೆ, ಅದರಲ್ಲೂ ಮುಖ್ಯವಾಗಿ ಪೌಷ್ಟಿಕಾಂಶದ ಬಗ್ಗೆ ಗಮನಹರಿಸಬೇಕು ಎಂದರು.
ಈ ವೇಳೆ ಕಾರ್ಯಕ್ರಮದಲ್ಲಿ ಗೃಹವಿಜ್ಞಾನ ವಿಭಾಗದ ಮುಖ್ಯಸ್ಥೆ ಶೋಭಾ ಎಸ್. ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಅನುಜ್ಞ ಸ್ವಾಗತಿಸಿ, ರಿಯಾ ಕಾರ್ಯಕ್ರಮ ನಿರೂಪಿಸಿ, ಶ್ರೇಯಾ ವಂದಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ


