ವಿಜಯಕುಮಾರ್ ಕೊಡಿಯಾಲ್‌ಬೈಲ್- ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ

Upayuktha
0


ಮಂಗಳೂರು: ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಸೆ.28ರಂದು ಬೆಳಗ್ಗೆ 10.45ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯುವ ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ರಂಗಕರ್ಮಿ, ಚಿತ್ರ ನಿರ್ದೇಶಕ ವಿಜಯಕುಮಾರ್ ಕೊಡಿಯಾಲ್‌ಬೈಲ್ ಭಾಗವಹಿಸಿ ಗೌರವ ಸ್ವೀಕರಿಸಲಿದ್ದಾರೆ.


ನಮ್ಮ ಕುಡ್ಲದ ನಿರ್ದೇಶಕ ಲೀಲಾಕ್ಷ ಕರ್ಕೇರ ಕಾರ್ಯಕ್ರಮ ಉದ್ಘಾಟಿಸುವರು. ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್. ಉಪಸ್ಥಿತರಿರುವರು ಎಂದು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
To Top