ಮಂಗಳೂರು: ಮಂಗಳೂರಿನ ಪಾಂಡೇಶ್ವರದಲ್ಲಿರುವ ಶ್ರೀನಿವಾಸ ವಿಶ್ವವಿದ್ಯಾಲಯದ ಇನ್ಸಿಟ್ಯೂಟ್ ಆಫ್ ಮ್ಯಾನೇಜ್ ಮೆಂಟ್ ಆಂಡ್ ಕಾಮರ್ಸ್ ನಲ್ಲಿ ಅಸೋಸಿಯೇಟ್ ಪ್ರೊಫೆಸರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಅಮಿತ್ ಡೊನಾಲ್ಡ್ ಮೆನೇಜಸ್ ಬರೆದ ಇವಾಲ್ಯುವೇಶನ್ ಆಫ್ ಇಲೆಕ್ಟ್ರಾನಿಕ್ ಪೇಮೆಂಟ್ ಸಿಸ್ಟಮ್ಸ್: ಎ ಸ್ಟಡಿ ವಿತ್ ರೆಫೆರೆನ್ಸ್ ಬು ಸೆಲೆಕ್ಟ್ ಪ್ರೈವೇಟ್ ಅಂಡ್ ಪಬ್ಲಿಕ್ ಸೆಕ್ಟರ್ ಬ್ಯಾಂಕ್ಸ್ ಇನ್ ದಕ್ಷಿಣ ಕನ್ನಡ ಡಿಸ್ಟಿಕ್ಸ್, ಕರ್ನಾಟಕ ಸೈಟ್, ಇಂಡಿಯಾ" ಎನ್ನುವ ಮಹಾ ಪ್ರಬಂಧಕ್ಕೆ ಬೆಳಗಾವಿಯ ವಿಶ್ವೇಶ್ವರಯ್ಯ ಟೆಕ್ನಾಲಜಿಸ್ ವಿಶ್ವವಿದ್ಯಾಯವು ಪಿ.ಹೆಚ್.ಡಿ. ಪದವಿಯನ್ನು ಪ್ರದಾನ ಮಾಡಿರುತ್ತದೆ.
ಅವರು ಮಂಗಳೂರಿನ ವಾಮಂಜೂರಿನಲ್ಲಿರುವ ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜು ಇಲ್ಲಿನ ಬಿಸಿನೆಸ್ ಅಡ್ಮಿನಿಸ್ಟೇಶನ್ ವಿಭಾಗದ ಡೀನ್ ಮತ್ತು ಪ್ರಾಧ್ಯಾಪಕರಾಗಿರುವ ಡಾ. ಪ್ರಕಾಶ್ ಪಿಂಟೋ ಇವರ ಮಾರ್ಗದರ್ಶನದಲ್ಲಿ ಈ ಮಹಾ ಪ್ರಬಂಧವನ್ನು ಸಿದ್ಧಪಡಿಸಿರುತ್ತಾರೆ. ಇವರು ಸ್ಪ್ಯಾನಿ ಮೆನೇಜಸ್ ಮತ್ತು ಎಮ್ಮಿ ಮೆನೇಜಸ್ ಅವರ ಪುತ್ರರಾಗಿರುತ್ತಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ