ಧರ್ಮಸ್ಥಳದಲ್ಲಿ ಸಂಪ್ರದಾಯದಂತೆ ಇದೇ 22 ರಂದು ನವರಾತ್ರಿ ಸಂದರ್ಭ ಭಾನುವಾರ ರಾತ್ರಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ದೇವಸ್ಥಾನದಲ್ಲಿ ಪ್ರಸಾದ ರೂಪವಾಗಿ ಸೀರೆಗಳನ್ನು ವಿತರಿಸಿದರು.
ಧರ್ಮಸ್ಥಳದಲ್ಲಿ ತೆನೆಹಬ್ಬ ಆಚರಣೆ
ಧರ್ಮಸ್ಥಳದಲ್ಲಿ ಮಂಗಳವಾರ ವಿಜಯದಶಮಿ ಶುಭಾವಸರದಲ್ಲಿ ತೆನೆಹಬ್ಬ ಆಚರಿಸಲಾಯಿತು. ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಿಂದ ತೆನೆ (ಭತ್ತದ ಪೈರು) ಭವ್ಯ ಮೆರವಣಿಗೆಯಲ್ಲಿ ತಂದು ಬೀಡಿನಲ್ಲಿ ಹೊಸ ಅಕ್ಕಿ ಊಟ (ತುಳು: ಪುದ್ದರ್) ಏರ್ಪಡಿಸಲಾಯಿತು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಕುಟುಂಬದವರು ಭಾಗವಹಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ