ಕಾಸರಗೋಡು ಜಿಲ್ಲೆಯಿಂದ ಇಬ್ಬರು ಶಾಲಾ ವಿದ್ಯಾರ್ಥಿಗಳಿಗೆ ಅವಕಾಶಕ್ಕೆ ಆಹ್ವಾನ
ಕಾಸರಗೋಡು: ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ನೇತೃತ್ವದಲ್ಲಿ ದೆಹಲಿ ಘಟಕದ ಸಹಯೋಗದಲ್ಲಿ 2023 ನವೆಂಬರ್ 15ರಂದು ನವದೆಹಲಿಯ ಶ್ರೀ ಸತ್ಯಸಾಯಿ ಸಭಾಂಗಣದಲ್ಲಿ ಪ್ರಥಮ ರಾಷ್ಟ್ರೀಯ ಕನ್ನಡ ಮಕ್ಕಳ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗಿದೆ.
ಸಮ್ಮೇಳನದಲ್ಲಿ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳು ಮತ್ತು ಹೊರನಾಡು ಗಡಿನಾಡು ಘಟಕಗಳ ವ್ಯಾಪ್ತಿಯಲ್ಲಿ ತಲಾ ಇಬ್ಬರನ್ನು ಆಯ್ಕೆ ಮಾಡಿ ಮಕ್ಕಳ ಕವಿ ಗೋಷ್ಠಿ ಮತ್ತು ಮಕ್ಕಳ ಸಾಹಿತ್ಯ ವಿಚಾರಗೋಷ್ಠಿಯಲ್ಲಿ ಇಬ್ಬರಿಗೆ ಭಾಗವಹಿಸಲು ಅವಕಾಶ ನೀಡಲಾಗಿದೆ. ಹೆತ್ತವರು ಹಾಗೂ ಪೋಷಕರೊಂದಿಗೆ ಪಾಲ್ಗೊಳ್ಳುವ ಮಕ್ಕಳಿಗೆ ನವದೆಹಲಿಯಲ್ಲಿ ವಸತಿ ಊಟೋಪಚಾರದ ವ್ಯವಸ್ಥೆ ಇರುತ್ತದೆ. ಹೋಗಿ ಬರುವ ಪ್ರಯಾಣದ ವ್ಯವಸ್ಥೆಯನ್ನು ಭಾಗವಹಿಸುವವರು ಬರಿಸಬೇಕಾಗುತ್ತದೆ.
ಕರ್ನಾಟಕ ರಾಜ್ಯದಿಂದ ಮಾಧ್ಯಮದವರು ಕವಿ, ಸಾಹಿತಿ, ಅಧ್ಯಾಪಕರು, ವಿದ್ಯಾರ್ಥಿಗಳು ಹಾಗೂ ಆಹ್ವಾನಿತರು ಘಟಕದ ಅಧ್ಯಕ್ಷರೊಂದಿಗೆ ಸುಮಾರು 300 ಮಂದಿ ಭಾಗವಹಿಸಲಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಶಿವರಾಮ ಕಾಸರಗೋಡು ಅಧ್ಯಕ್ಷರು ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ (ರಿ) ಕೇರಳ ರಾಜ್ಯದ ಕನ್ನಡ ಗ್ರಾಮರಸ್ತೆ, ಕಾಸರಗೋಡು 671121. ಮೊಬೈಲ್:- 9448572016 ಇವರನ್ನು ಸಂಪರ್ಕಿಸಬಹುದು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ

