ಪುಂಜಾಲಕಟ್ಟೆ: ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆಯಲ್ಲಿ ಮಾನವಿಕ ಸಂಘದ ಉದ್ಘಾಟನೆ ಮತ್ತು ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮವನ್ನು ಅ.11 ಬುಧವಾರದಂದು ನಡೆಯಿತು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಡಾ.ಸುಬ್ರಹ್ಮಣ್ಯ ಕೆ. ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಮಾನವಿಕ ಸಂಘದ ವಿಷಯಗಳು ವಿದ್ಯಾರ್ಥಿಗಳ ಜೀವನವನ್ನು ರೂಪಿಸುವ, ಮನಸ್ಸನ್ನು ಪಕ್ವಗೊಳಿಸುವ ನೆಲೆಗಳನ್ನು ವಿವರಿಸಿದರು ಹಾಗೂ ವಿದ್ಯಾರ್ಥಿಗಳ ಭವಿಷ್ಯದ ಕುರಿತು ಶುಭ ಹಾರೈಸಿದರು.
ಮಾನವಿಕ ಸಂಘದ ಸಂಚಾಲಕರಾದ ಡಾ. ವೈಶಾಲಿ.ಯು ಇವರು ಮಾನವಿಕ ಸಂಘದ ಶೈಕ್ಷಣಿಕ ಚಟುವಟಿಕೆಗಳ ಕುರಿತು ಮಹತ್ವವನ್ನು ತಿಳಿಸಿಕೊಟ್ಟರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ.ಟಿ.ಕೆ ಶರತ್ ಕುಮಾರ್ ಅವರು ಮಾನವಿಕ ಸಂಘದ ವಿದ್ಯಾರ್ಥಿಗಳಿಗೆ ಮಾನವೀಯ ಮೌಲ್ಯಗಳ ಕುರಿತು ಅರಿವನ್ನು ಮೂಡಿಸುವುದರೊಂದಿಗೆ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಅನೇಕ ಶೈಕ್ಷಣಿಕ ಹಾಗು ಸಾಂಸ್ಕ್ರತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ವೇದಿಕೆಯಲ್ಲಿ ಮಾನವಿಕ ಸಂಘದ ಪದಾಧಿಕಾರಿಗಳಾದ ಶೇಖರ್ ಕೆ, ಮುನಿಕೃಷ್ಣಪ್ಪ ಕೆ, ಸ್ವಾತಿ. ಎಂ.ಪಿ, ಆಂಜನೇಯ ಎಂ.ಎನ್ ಹಾಗೂ ಸಾಂಸ್ಕ್ರತಿಕ ಸಂಘದ ಸಂಚಾಲಕರಾದ ಡಾ.ಪ್ರೀತಿ ಕೆ ರಾವ್ ಉಪಸ್ಥಿತರಿದ್ದರು. ಸುಚಿತ್ರ ಮತ್ತು ಬಳಗದವರು ಪ್ರಾರ್ಥಿಸಿದರು. ನವ್ಯಶ್ರೀ ನಿರೂಪಿಸಿದರು. ಸೌಜನ್ಯ ಇವರು ಸ್ವಾಗತಿಸಿದರು. ಕೀರ್ತಿ ಇವರು ಧನ್ಯವಾದವಿತ್ತರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ