ಗೋವಾದಲ್ಲಿ ಕರವೇ ಬಣದ ವಿಸ್ತರಣೆ: ಮಂಜು ನಾಟೇಕರ್

Upayuktha
0


ಪಣಜಿ (ವಾಸ್ಕೊ): ಗೋವಾ ರಾಜ್ಯದ ವಿವಿಧ ನಗರಗಳಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣಕುಮಾರ್ ಶೆಟ್ಟಿ ಬಣ ಸಂಘಟನೆಯನ್ನು ವಿಸ್ತರಣೆ ಮಾಡಲಾಗುವುದು. ಇದರಿಂದಾಗಿ ಆಯಾ ಭಾಗದಲ್ಲಿ ಕನ್ನಡಿಗರಿಗೆ ಆಗುತ್ತಿರುವ ಸಮಸ್ಯೆ ಮತ್ತು ಕುಂದು ಕೊರತೆಗಳನ್ನು ಶೀಘ್ರವಾಗಿ ಪರಿಹರಿಸಲು ಇದರಿಂದ ಹೆಚ್ಚಿನ ಅನುಕೂಲವಾಗುತ್ತದೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣಕುಮಾರ ಶೆಟ್ಟಿ ಬಣದ ಗೋವಾ ರಾಜ್ಯಾಧ್ಯಕ್ಷ ಮಂಜು ನಾಟೀಕರ್ ನುಡಿದರು.


ಗೋವಾ ವಾಸ್ಕೊದ ಮುರ್ಗಾಂವ ಕ್ಷೇತ್ರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ನೂತನ ಘಟಕವನ್ನು ಕನ್ನಡಾಂಬೆ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಉದ್ಘಾಟನೆ ನೆರವೇರಿಸಿ ಮಂಜು ನಾಟೀಕರ್ ಮಾತನಾಡುತ್ತಿದ್ದರು.


ಗೋವಾ ರಾಜ್ಯದ ಎಲ್ಲೆಡೆಯಿಂದ ಕನ್ನಡಿಗರಿಂದ ಕರ್ನಾಟಕ ರಕ್ಷಣಾ ವೇದಿಕೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಅಕ್ಟೋಬರ್ 22 ರಂದು ಗೋವಾ ವಾಸ್ಕೊದ ಬಿರ್ಲಾ ನಗರ ಘಟಕ ಸ್ಥಾಪನೆ ಮಾಡಲಾಗುವುದು. ಗೋವಾದ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ನಮ್ಮ ಸಂಘಟನೆ ಸೇರ್ಪಡೆಯಾಗಬೇಕು ಎಂದು ಮಂಜು ನಾಟೀಕರ್ ಮನವಿ ಮಾಡಿದರು.


ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಗೋವಾ ರಾಜ್ಯ ಘಟಕದ ಕಾರ್ಯದರ್ಶಿ ಶಿವಾನಂದ ಮಸಬಿನಾಳ, ಮಹಾಂತೇಶ ಕಾರಗೇರಿ, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ವಾಲ್ಮಿಕಿ, ಯುವ ಮೋರ್ಚಾ ಅಧ್ಯಕ್ಷ ಯಶವಂತ್ ಕಿಂಗ್, ಮಹಿಳಾ ಸಂಘಟನೆ ಮುಖಂಡರಾದ ಪಾರ್ವತಿ ಛಲವಾದಿ, ವೀರಶೈವ ಲಿಂಗಾಯತ ಸಮಾಜದ ಬಿರ್ಲಾ ಅಧ್ಯಕ್ಷ ರುದ್ರಯ್ಯಸ್ವಾಮಿ ಹಿರೇಮಠ, ರಮೇಶ ಗೌಡರ್, ಸಡಾ ನಗರದ ಕರವೇ ಮುಖಂಡ ಶಿವು ಛಲವಾದಿ, ಸಂಗಮೇಶ ಹಗರಿ, ಬಸು, ಅಯ್ಯಪ್ಪ, ಲಕ್ಕಪ್ಪ ಮತ್ತಿತರರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top