'ಸಾಹಿತ್ಯ. ಕಲೆಗಳು ಸರ್ವತೋಮುಖ ಬೆಳವಣಿಗೆಗೆ ಪೂರಕ'

Upayuktha
0


ಬಂಟ್ವಾಳ: ಸಾಹಿತ್ಯ ಬರಹಗಳು ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಬಹಳ ಪೂರಕ ಸಾಧನವಾಗಿವೆ. ವಿದ್ಯಾರ್ಥಿ ದೆಸೆಯಲ್ಲೇ ಸಾಹಿತ್ಯ ಕ್ಷೇತ್ರದಲ್ಲಿ ಒಲವು ತೋರಿಸಿದರೆ ಮುಂದೆ ಬಹು ದೊಡ್ಡ ಸಾಧನೆ ಮಾಡಬಹುದು ಎಂದು ಮಂಚಿ ಕೊಲ್ನಾಡು ಸರಕಾರಿ ಪ್ರೌಢಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಬಾಲಕೃಷ್ಣ ಸೆರ್ಕಳರವರು ಹೇಳಿದರು.


ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು (ರಿ) ಬಂಟ್ಟಾಳ ತಾಲೂಕು ಹಾಗೂ ಸರಕಾರಿ ಪ್ರೌಢಶಾಲೆ ಮಂಚಿ ಕೊಳ್ನಾಡು ಇದರ ಜಂಟಿ ಆಶ್ರಯದಲ್ಲಿ 2 ದಿನಗಳ ಬಂಟ್ಟಾಳ ತಾಲೂಕು ಮಟ್ಟದ ಮಕ್ಕಳ ಸಾಹಿತ್ಯ ಶಿಬಿರವನ್ನು ಬಂಟ್ವಾಳ ತಾಲೂಕಿನ ಸರಕಾರಿ ಪ್ರೌಢಶಾಲೆ ಮಂಚಿ ಕೊಳ್ಳಾಡು ಇಲ್ಲಿ ಉದ್ಘಾಟಿಸಿ ಅಭಿಪ್ರಾಯಪಟ್ಟರು.


ಮಕ್ಕಳ ಸಾಹಿತ್ಯ ಪರಿಷತ್ ದ.ಕ ಜಿಲ್ಲಾಧ್ಯಕ್ಷೆ ಪರಿಮಳ ಮಹೇಶ ರಾವ್ ಮಂಗಳೂರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಉದ್ಯಮಿ ದೇವಿಪ್ರಸಾದ್ ಚೆಂಗಲ್ಪಾಡಿ, ಗೌರವ ಸಲಹೆಗಾರರಾದ ಬಾಲಕೃಷ್ಣ ಕಾರಂತ್ ಎರುಂಬು, ಶಾಲಾ ಮುಖ್ಯೋಪಾಧ್ಯಾಯರಾದ ಸುಶೀಲಾ ವಿಟ್ಲ, ಸಾಹಿತಿ ಹಾಗೂ ಪತ್ರಕರ್ತರಾದ ಜಯಾನಂದ ಪೆರಾಜೆ ಇವರು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಪರಿಷತ್ತಿನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ನೇರಳಕಟ್ಟೆಯವರನ್ನು ಗೌರವಿಸಲಾಯಿತು.



ಶಿಬಿರದಲ್ಲಿ ಜಯಾನಂದ ಪೆರಾಜೆಯವರು ಚುಟುಕು ಕವನ, ರಶ್ಮಿತಾ ಸುರೇಶ್ ಜೋಗಿಬೆಟ್ಟುರವರು ಹಾಸ್ಯ ಸಾಹಿತ್ಯ, ಸುರೇಖಾ ಯಳವಾರರವರು ಮಕ್ಕಳ ಸಾಹಿತ್ಯ, ತಾರಾನಾಥ್ ಕೈರಂಗಳರವರು ಚಿತ್ರ ಸಾಹಿತ್ಯ, ಜಯರಾಮ ಪಡ್ರೆಯವರು ಕಥನ ಕಾವ್ಯ, ಗೋಪಾಲಕೃಷ್ಣ ನೇರಳಕಟ್ಟೆಯವರು ಸೃಜನಶೀಲ ಸಾಹಿತ್ಯ, ಅಬ್ಬುಲ್ ಮಜೀದ್ ತುಂಬೆರವರು ಮೌಲ್ಯ ಸಾಹಿತ್ಯ, ಶ್ರೀಕಲಾ ಕಾರಂತ ಅಳಿಕೆಯವರು ಬಾಲ ಸಾಹಿತ್ಯ, ಎಂ.ಡಿ ಮಂಚಿರವರು ನಾಟಕ ಸಾಹಿತ್ಯದ ಬಗ್ಗೆ ಮಾಹಿತಿ ನೀಡಿದರು.


ಶಾಲೆಯ ಶಿಕ್ಷಕ ವೃಂದದವರು ಸಂಪೂರ್ಣ ಸಹಕರಿಸಿದರು ತರಬೇತಿಯಲ್ಲಿ ಬಂಟ್ವಾಳ ತಾಲೂಕಿನ ವಿವಿಧ ಶಾಲೆಗಳ ಸುಮಾರು 125 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಮಕ್ಕಳ ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ಶ್ರೀಕಲಾ ಕಾರಂತ್ ಅಳಿಕೆ ಸ್ವಾಗತಿಸಿ, ವಲಯ ಸಂಯೋಜಕಿ ತುಳಸಿ ಕೈರಂಗಳ ವಂದಿಸಿದರು. ಶಿಕ್ಷಕ ಕಲಾವಿದ ತಾರಾನಾಥ್ ಕೈರಂಗಳ ಕಾರ್ಯಕ್ರಮ ನಿರ್ವಹಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top