ಭೌತಿಕ ವಸ್ತುಗಳು ಕೂಡಾ ಚರಿತ್ರೆಯ ಭಾಗ: ಪ್ರೊ. ತುಕಾರಾಂ ಪೂಜಾರಿ

Upayuktha
0



ಕಾರ್ಕಳ  : ಚರಿತ್ರೆ ಎನ್ನುವುದು ಕೇವಲ  ಕಾಲ ಮತ್ತು ಘಟನೆಗಳ ಮೊತ್ತವಷ್ಟೇ ಆಗಿರದೆ ಮೌಖಿಕ ಸಾಹಿತ್ಯ ಮತ್ತು ಭೌತಿಕ ಸಾಮಾಗ್ರಿಗಳು ಕೂಡಾ ಚರಿತ್ರೆಯ ಭಾಗಗಳೇ ಆಗಿವೆ. ಮನುಷ್ಯ ನಿರ್ಮಿತ ಈ ಭೌತಿಕ ವಸ್ತುಗಳೆಲ್ಲವೂ ಗತಕಾಲದ ಜೀವನಕ್ರಮ ಮತ್ತು  ಸಂಸ್ಕøತಿಯನ್ನು ನಮಗೆ ಪರಿಚಯಿಸಿದರೆ, ಬದಲಾದ ಇಂದಿನ ಜೀವನಶೈಲಿ ಹಾಗೂ ಮುಂದೆ ಎದುರಾಗಲಿರುವ ಆಪತ್ತಿನ ಬಗ್ಗೆಯೂ ಸೂಚ್ಯವಾಗಿ ಅವು ನಮಗೆ ತಿಳಿಸಿಕೊಡುತ್ತವೆ ಎಂಬುದಾಗಿ ಖ್ಯಾತ ಇತಿಹಾಸ ತಜ್ಞ ಹಾಗೂ ಬಂಟ್ವಾಳದ ತುಳು ಬದುಕು ವಸ್ತುಸಂಗ್ರಹಾಲಯ ಮತ್ತು ರಾಣಿ ಅಬ್ಬಕ್ಕ ಅಧ್ಯಯನ ಕೇಂದ್ರದ ನಿರ್ದೇಶಕರೂ ಆಗಿರುವ ಪ್ರೊ. ತುಕಾರಾಂ ಪೂಜಾರಿಯವರು  ತಿಳಿಸಿದರು.



ಅವರು ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕಾರ್ಕಳ ತಾಲೂಕು ಘಟಕ ಮತ್ತು ಕನ್ನಡ ಸಂಘ ಕಾಂತಾವರ ಇವರ ಜಂಟಿ ಸಹಯೋಗದೊಂದಿಗೆ ಕಾರ್ಕಳದ ಸರಕಾರಿ ಪ.ಪೂ.ಕಾಲೇಜಿನ ಸಭಾಂಗಣದಲ್ಲಿ ನಡೆದ ‘ಅರಿವು ತಿಳಿವು’ ತಿಂಗಳ ಉಪನ್ಯಾಸ ಕಾರ್ಯಕ್ರಮದಲ್ಲಿ “ಭೌತಿಕ ಶೋಧ (ವಸ್ತುವಿನ ಮುಖಾಂತರ ಚರಿತ್ರೆ)” ಎಂಬ ವಿಷಯದ ಕುರಿತು ಮಾತನಾಡಿದರು.




ಪ್ರತಿಯೊಂದು ಭೌತಿಕ ವಸ್ತುವಿನ ಹಿಂದೆಯೂ ಒಂದೊಂದು ಚರಿತ್ರೆಯಿದ್ದು ಇವೆಲ್ಲವೂ ಒಂದು ಕಾಲದ ತುಳುನಾಡಿನ ಸಾಮಾಜಿಕ ವ್ಯವಸ್ಥೆಯ ಪರಿಚಯವನ್ನು ಮಾಡಿಕೊಡುತ್ತವೆ. ನಮ್ಮ ಹಿರಿಯರು ಬೆಳೆದು ಬಂದ ಬದುಕಿನ ಕ್ರಮವನ್ನು ಇಂದು ಅನೇಕ ಕಾರಣಗಳಿಂದಾಗಿ ಉಳಿಸಿಕೊಳ್ಳಲಾಗದಿದ್ದರೂ ಆ ಭೌತಿಕ ವಸ್ತುಗಳನ್ನು ಮುಂದಿನ ಪೀಳಿಗೆಯ ನೆನಪಿಗಾಗಿಯೂ ಕಾ¥Àಡಬೇಕಾಗಿದೆ. ಇತಿಹಾಸ ಪ್ರಜ್ಞೆಯನ್ನು ಉಳಿಸಿಕೊಳ್ಳುವುದಕ್ಕೆ ಮತ್ತು ಅವುಗಳಿಂದ ನಾವು ಅನೇಕ ಪಾಠಗಳನ್ನೂ ಕಲಿಯಬೇಕಾಗಿರುವುದರಿಂದ ಅವುಗಳ ರಕ್ಷಣೆಯೂ ಮಹತ್ವದ ಸಂಗತಿಯಾಗಿದೆ ಅಂದರು. 



ಅತಿಥಿಗಳನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು. ಅ.ಭಾ.ಸಾ.ಪ. ತಾಲೂಕು ಘಟಕದ ಗೌರವಾಧ್ಯಕ್ಷರಾದ ನಿತ್ಯಾನಂದ ಪೈ, ಉಪಾಧ್ಯಕ್ಷರಾದ ಏರ್‍ವೈಸ್ ಮಾರ್ಷಲ್ ರಮೇಶ್ ಕಾರ್ಣಿಕ್, ಡಾ.ನಾ.ಮೊಗಸಾಲೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಡಾ. ಸುಮತಿ ಪಿ. ಕಾರ್ಯಕ್ರಮ ನಿರೂಪಿಸಿದರು. ವೀಣಾ ರಾಜೇಶ್ ಅತಿಥಿಗಳನ್ನು ಪರಿಚಯಿಸಿದರು. ಸದಾನಂದ ನಾರಾವಿ ಸ್ವಾಗತಿಸಿಅ.ಭಾ.ಸಾ.ಪ ತಾಲೂಕು ಅಧ್ಯಕ್ಷರಾದ ಮಿತ್ರಪ್ರಭಾ ಹೆಗ್ಡೆ ವಂದಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


                                                   


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top