ನ. 4: ಯುವಜನರು ಮತ್ತು ಅಭಿವೃದ್ಧಿ ವಿಚಾರ ಸಂಕಿರಣ

Upayuktha
0




ಮಂಗಳೂರು: ಮಾತಾ ಅಮೃತಾನಂದಮಯಿ ಮಠದ ಸಂಸ್ಕೃತಿ ಮತ್ತು ಶ್ರೇಷ್ಠತಾ ಕೇಂದ್ರದ ಆಶ್ರಯದಲ್ಲಿ ನವಂಬರ್ 4 ರ ಶನಿವಾರ ಬೆಳಗ್ಗೆ 10 ಗಂಟೆಯಿಂದ ಬೋಳೂರಿನಲ್ಲಿರುವ ಮಠದ ಅಮೃತೇಶ್ವರಿ ಸಭಾಭವನದಲ್ಲಿ ಯುವಜನರು ಮತ್ತು ಅಭಿವೃದ್ಧಿ ಎಂಬ ವಿಚಾರ ಸಂಕಿರಣವೊಂದನ್ನು ಹಮ್ಮಿಕೊಳ್ಳಲಾಗಿದೆ. ಮಠದ ಮುಖ್ಯಸ್ಥೆ ಸ್ವಾಮಿನಿ ಮಂಗಳಾಮೃತ ಪ್ರಾಣ ವಿಚಾರ ಸಂಕಿರಣವನ್ನು ಉದ್ಘಾಟಿಸುವರು.


ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ಅವರು ಮಾದಕದ್ರವ್ಯ ವ್ಯಸನ ಮತ್ತು ಪರಿಹಾರದ ಮಾರ್ಗೋಪಾಯಗಳು ಎಂಬ ವಿಷಯದ ಕುರಿತು ಮಾತಾಡುವರು. ಲೇಖಕ ಅರವಿಂದ ಚೊಕ್ಕಾಡಿ ಯುವಜನರು ಮತ್ತು ಭಾರತೀಯ ಸಂಸ್ಕೃತಿಯ ಅಳವಡಿಕೆ ಎಂಬ ವಿಷಯದ ಕುರಿತು ಮಾತಾಡುವರು. ಅನಂತರ ವಿವಿಧ ಕಾಲೇಜುಗಳಿಂದ ಆಗಮಿಸಿದ ವಿದ್ಯಾರ್ಥಿಗಳ ತಂಡದೊಂದಿಗೆ ಸಂವಾದ ಏರ್ಪಡಲಿದೆ.



ಡಾ. ಜೀವರಾಜ ಸೊರಕೆಯವರು ಮಂಗಳೂರಿನ ಮಾತಾ ಅಮೃತಾನಂದಮಯಿ ಮಠವು ಬೆಳೆದು ಬಂದ ಹಾದಿಯ ಬಗ್ಗೆ ಮಾತಾಡಲಿರುವರು. ಸಾಹಿತಿ ಹಾಗೂ ಸಂಸ್ಕೃತಿ ಮತ್ತು ಶ್ರೇಷ್ಠತಾ ಕೇಂದ್ರದ ಅಧ್ಯಕ್ಷ ಡಾ. ವಸಂತಕುಮಾರ ಪೆರ್ಲ ಅಧ್ಯಕ್ಷತೆ ವಹಿಸಲಿದ್ದಾರೆ. ಸದಸ್ಯರಾದ ಡಾ. ಬಾಲಕೃಷ್ಣ ಭಾರದ್ವಾಜ, ವೀಣಾ ಟಿ. ಶೆಟ್ಟಿ ಮತ್ತು ಪ್ರವೀಣ್ ಚಂದ್ರ ಶರ್ಮ ಉಪಸ್ಥಿತರಿರುವರು ಎಂದು ಮಠದ ಪ್ರಕಟಣೆ ತಿಳಿಸಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top