ಶಿವರಾಮ ಕಾಸರಗೋಡು 58ನೇ ಜನ್ಮ ದಿನಾಚರಣೆ ಪ್ರಯುಕ್ತ ಉತ್ಸವ
ಕಾಸರಗೋಡು: ಕೇರಳ ರಾಜ್ಯ ಕನ್ನಡ ಭಾಷಾ ಅಲ್ಪ ಸಂಖ್ಯಾತರ ಸಾಂಸ್ಕೃತಿಕ ಮತ್ತು ಸಾಹಿತ್ಯಕ ಸಂಘಟನೆಯಾದ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ), ಕನ್ನಡ ಗ್ರಾಮ ಕಾಸರಗೋಡು ಇದರ 33ನೇ ಸಂಸ್ಥಾಪನಾ ವರ್ಷಾಚರಣೆಯ (ಸ್ಥಾಪನೆ:04-11-1990--04-11-2023) ಪ್ರಯುಕ್ತ ಕನ್ನಡ ಗ್ರಾಮೋತ್ಸವ- 2023 ಹಾಗೂ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಸಂಸ್ಥಾಪಕ ಅಧ್ಯಕ್ಷ ಶಿವರಾಮ ಕಾಸರಗೋಡು ಅವರಿಗೆ 58ನೇ (04/11/1965- 04/11/2023) ಜನ್ಮ ದಿನಾಚರಣೆಯ ಕಾರ್ಯಕ್ರಮವನ್ನು ಕಾಸರಗೋಡು ಕನ್ನಡ ಗ್ರಾಮದಲ್ಲಿ ದಿನಾಂಕ 04 ನವೆಂಬರ್ 2023 ಶನಿವಾರದಂದು ಸಂಜೆ ಗಂಟೆ 4.00ರಿಂದ ನಡೆಯಲಿದೆ.
"ಶಿವರಾಮ ಕಾಸರಗೋಡು 58" ಫೋಟೋ ಗ್ಯಾಲರಿಗೆ ಛಾಯಾಚಿತ್ರ ಆಹ್ವಾನ:
ಕಾಸರಗೋಡು ಕನ್ನಡ ಗ್ರಾಮೋತ್ಸವ ಕಾರ್ಯಕ್ರಮದಲ್ಲಿ ಕಾಸರಗೋಡು ಪ್ರದೇಶದ ವಿವಿಧ ಸಂಘ ಸಂಸ್ಥೆಗಳ ಕಲಾವಿದರಿಂದ ಸಂಗೀತ, ನೃತ್ಯ, ಸುಗಮ ಸಂಗೀತ, ದಾಸ ಸಂಕೀರ್ತನೆ, ಭಕ್ತಿ, ಭಾವ, ಚಲನಚಿತ್ರ, ಜಾನಪದ ಗೀತಾ ಗಾಯನಕ್ಕೆ ಅವಕಾಶ ನೀಡಲಾಗಿದೆ. ಈ ಸಂದರ್ಭದಲ್ಲಿ ಕೇರಳ ರಾಜ್ಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಮತ್ತು ಕನ್ನಡ ಗ್ರಾಮೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಶಿವರಾಮ ಕಾಸರಗೋಡು ಅವರು ಕಳೆದ ನಾಲ್ಕು ದಶಕಗಳಿಂದ ನಿರಂತರವಾಗಿ ಸಾಹಿತ್ಯ ಸಂಸ್ಕೃತಿ, ಸಮುದಾಯ, ಸಮಾಜ ಸೇವೆ, ಸಂಘಟನೆಗಳ ಮೂಲಕ ಹಲವು ಸಮ್ಮೇಳನ, ಸಮಾವೇಶ, ವಿಚಾರಗೋಷ್ಠಿ, ಕನ್ನಡ ಚಳುವಳಿ, ಹೋರಾಟ, ಸತ್ಯಾಗ್ರಹ, ಕನ್ನಡ ಜಾಗೃತಿ ಸಮಾವೇಶಗಳು ಮತ್ತು ವಿವಿಧ ಕಾರ್ಯಕ್ರಮಗಳಲ್ಲಿ ಸಂಘಟಕರಾಗಿ, ಆಮಂತ್ರಿಕರಾಗಿ ಭಾಗವಹಿಸಿದ ಅಪರೂಪದ ಸಂಗ್ರಾಹ್ಯ "ಫೋಟೋ"ವನ್ನು ವಾಟ್ಸಪ್ ಮೂಲಕ ಮತ್ತು ತಲಾ ಒಂದು ಪ್ರತಿಯನ್ನು ಅಂಚೆ ಮೂಲಕ ಕಳುಹಿಸಲು ವಿನಂತಿಸಲಾಗಿದೆ.
ತಾವು ಅಭಿಮಾನವಿಟ್ಟು ಕಳುಹಿಸಿದ ಛಾಯಾ ಚಿತ್ರದೊಂದಿಗೆ ತಮ್ಮ ಹೆಸರು, ವಿಳಾಸ, ಮೊಬೈಲ್ ಸಂಖ್ಯೆಯನ್ನು ಬರೆದು ಕಳುಹಿಸಿದರೆ "ಫೋಟೋ" ಗ್ಯಾಲರಿಯಲ್ಲಿ ಪ್ರದರ್ಶಿಸಲಾಗುವುದು.
ಶಿವರಾಮ ಕಾಸರಗೋಡು ವಾಟ್ಸಾಪ್
ಮೊಬೈಲ್ :-9448572016
email: shivaramakasaragod@gmail.Com ಅಥವಾ ಶಿವರಾಮ ಕಾಸರಗೋಡು ಕನ್ನಡ ಗ್ರಾಮ ರಸ್ತೆ ಕಾಸರಗೋಡು-671121, ಈ ವಿಳಾಸಕ್ಕೆ ಕಳುಹಿಸಬಹುದು.
ಶಿವರಾಮ ಕಾಸರಗೋಡು- 50 "ಚಂದನ "ಅಭಿನಂದನಾ ಸಂಘಟವನ್ನು 2016ರಲ್ಲಿ ಕಾಸರಗೋಡು ಕನ್ನಡ ಗ್ರಾಮದಲ್ಲಿ ಬಿಡುಗಡೆಗೊಂಡಿರುತ್ತದೆ.
ಶಿವರಾಮ ಕಾಸರಗೋಡು ಅಧ್ಯಕ್ಷರಾಗಿರುವ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಆಶ್ರಯದಲ್ಲಿ 7 ಬಾರಿ ಕೇರಳ ರಾಜ್ಯ ಕನ್ನಡ ಸಮ್ಮೇಳನ ಮತ್ತು ಕೇರಳ ಕರ್ನಾಟಕ ಉತ್ಸವ, ಸಾಂಸ್ಕೃತಿಕ ಕಲಾಮೇಳ, ಕಾಸರಗೋಡು ಜಿಲ್ಲಾ ಕನ್ನಡ ಜಾಗೃತಿ ಸಮಿತಿಯ ಆಶ್ರಯದಲ್ಲಿ 3 ಬಾರಿ ಕಾಸರಗೋಡು ಜಿಲ್ಲಾ ಕನ್ನಡ ಜಾಗೃತಿ ಸಮ್ಮೇಳನ, ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಆಶ್ರಯದಲ್ಲಿ 6 ಬಾರಿ ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಸಮ್ಮೇಳನ 32 ವರ್ಷಗಳಿಂದ ಕಾಸರಗೋಡು ಜಿಲ್ಲಾ ಕನ್ನಡ ದಿನಾಚರಣೆ ಕನ್ನಡ ರಾಜ್ಯೋತ್ಸವ, ಕನ್ನಡ ಪತ್ರಿಕೋದ್ಯಮ ವರ್ಷಾಚರಣೆ, ಕಾಯಕ್ರಮ ಕನ್ನಡ ಪತ್ರಿಕಾ ದಿನಾಚರಣೆ, ಕಾಸರಗೋಡು ಜಿಲ್ಲಾ ಐತಿಹಾಸಿಕ ಪರಂಪರೆ ಉಳಿಸಿ ದಿನಾಚರಣೆ ಮತ್ತು ಸಾಹಿತ್ಯ ಸಾಂಸ್ಕೃತಿಕ ಸಾಧಕರ ಜನ್ಮ ವರ್ಷಾಚರಣೆ- ಸಾಹಿತ್ಯೋತ್ಸವ, 2009ರಲ್ಲಿ ಅಖಿಲ ಭಾರತ ಕನ್ನಡ ಸಂಸ್ಕೃತಿ, ಸಮ್ಮೇಳನ,2006 ರಲ್ಲಿ ಅಖಿಲ ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನ, 1985ರಲ್ಲಿ ಸ್ಥಾಪನೆಗೊಂಡ ಕಾಸರಗೋಡು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಫ್ರೀಲಾನ್ಸ್ ಪತ್ರಕರ್ತರ ಸಂಘವನ್ನು ಸ್ಥಾಪಿಸುವ ಮೂಲಕ ತನ್ನ ಕಾರ್ಯಕ್ಷೇತ್ರವನ್ನು ವಿಸ್ತರಿಸಿದ್ದಾರೆ.
1998- 2001 ನೇ ಅವಧಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಗೌರವ ಕಾರ್ಯದರ್ಶಿ, 2001ನೇ ವರ್ಷದಿಂದ ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್, 2019 ನೇ ವರ್ಷದಿಂದ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು (ರಿ), ಇದರ ಕೇರಳ ರಾಜ್ಯ ಘಟಕದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.
2007ರಲ್ಲಿ ಉಡುಪಿಯಲ್ಲಿ ನಡೆದ 74ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ, 2008ರಲ್ಲಿ ಧಾರವಾಡ ಕರ್ನಾಟಕ ವಿದ್ಯಾವರ್ಧಕ ಸಂಘದ 118ನೇ ಸಂಸ್ಥಾಪನಾ ದಿನಾಚರಣೆಯ ಸನ್ಮಾನ, 2010 ರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ, 2013ರಲ್ಲಿ ತಿರುಮಲ ತಿರುಪತಿ ದೇವಸ್ಥಾನದ ದಾಸ ಸಾಹಿತ್ಯ ಪ್ರಾಜೆಕ್ಟ್ ನಿಂದ ಶ್ರೀ ಪುರಂದರಾನುಗ್ರಹ ಪ್ರಶಸ್ತಿ, ಆರ್ಯಭಟ ಪ್ರಶಸ್ತಿ, ಸಹಿತ ಹಲವು ಸಂಘ ಸಂಸ್ಥೆಗಳಿಂದ ಪ್ರಶಸ್ತಿ ಸನ್ಮಾನ, ಪುರಸ್ಕಾರಕ್ಕೆ ಭಾಜನರಾಗಿದ್ದಾರೆ.
ಕೇರಳ ಸರಕಾರದ ಕಾಸರಗೋಡು ಜಿಲ್ಲಾ ಭಾಷಾ ಅಲ್ಪ ಸಂಖ್ಯಾತರ ಸಮಿತಿಯ ಸದಸ್ಯರಾಗಿ, ಗಲ್ಫ್ ರಾಷ್ಟ್ರದ ದುಬೈ, ಶಾರ್ಜಾಕ್ಕೆ 3 ಬಾರಿ ವಿಶೇಷ ಆಮಂತ್ರಿತರಾಗಿ ಭಾಗವಹಿಸಿದ್ದಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ