ಸುರತ್ಕಲ್: ಮೂಡುಬಿದಿರೆ ಸಮೀಪದ ಮಾರ್ಪಾಡಿ ಗ್ರಾಮದ ಬಬಿತಾ ಬಂಗೇರ ಇವರ ಪುತ್ರಿ 12 ವರ್ಷದ ಸಿಂಚನಾ ನರಗಳ ಸಮಸ್ಯೆ, ಮಿದುಳು ಮತ್ತು ಮೂತ್ರಕೋಶದ ಸಮಸ್ಯೆಗಳಿಂದ ಬಳಲುತ್ತಿದ್ದು, ಈಕೆಯ ಚಿಕಿತ್ಸೆಗೆ ಸುಮಾರು 5 ಲಕ್ಷಕ್ಕೂ ಅಧಿಕ ಖರ್ಚಾಗುತ್ತಿದೆ.
ಈ ಬಡ ಕುಟುಂಬದ ನೆರವಿಗಾಗಿ ಸಿಂಚನಾಳ ಸಮಸ್ಯೆಗೆ ಸ್ಪಂದಿಸಿದ ಸುರತ್ಕಲ್ ಗೋವಿಂದದಾಸ ಕಾಲೇಜಿನ ಬಿಎ ವಿದ್ಯಾರ್ಥಿಗಳಾದ ಮನೀಶ್ ಡಿ ಶೆಟ್ಟಿ, ರಾಜು, ಬಸವರಾಜ್, ಶರಣ್ ಮತ್ತು ದೀಪೇಶ್ ನವರಾತ್ರಿಯ ಸಂದರ್ಭದಲ್ಲಿ ವೇಷ ಹಾಕಿ ಸಂಗ್ರಹವಾಗುವ ಮೊತ್ತವನ್ನು ಬಾಲಕಿಯ ಚಿಕಿತ್ಸೆಗೆ ನೀಡುವ ನಿರ್ಧಾರ ಮಾಡಿದ್ದಾರೆ.
ವಿದ್ಯಾರ್ಥಿಗಳ ಈ ಸಮಾಜಮುಖಿ ಕಾರ್ಯಕ್ಕೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೃಷ್ಣಮೂರ್ತಿ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ