ಶಿವಶಕ್ತಿಯ ಸ್ತ್ರೀ ರೂಪವೇ ಆಗಿದ್ದ ಅಕ್ಕಮಹಾದೇವಿ: ಡಾ.ಜ್ಯೋತಿ ರೈ

Upayuktha
0



ಕಾರ್ಕಳ : ತನ್ನ ಸ್ವಾಭಿಮಾನಕ್ಕೆ ಧಕ್ಕೆ ಬಂದಾಗ ಪತಿ  ಕೌಶಿಕನನ್ನು ಮತ್ತು ಸಕಲ ಸೌಭಾಗ್ಯಗಳನ್ನು ತಿರಸ್ಕರಿಸಿ ಏಕಾಂಗಿಯಾಗಿ ಆಧ್ಯಾತ್ಮದ ಹಾದಿಯಲ್ಲಿ ನಡೆದ ಅಕ್ಕಮಹಾದೇವಿಯ ದಿಟ್ಟತನ ಎಲ್ಲರಿಗೂ ಪ್ರೇರಣಾದಾಯಿಯಾಗಿದೆ. ಅಲ್ಲಮಪ್ರಭುಗಳು ಹೇಳುವಂತೆ ಶಿವಶಕ್ತಿಯ ಸ್ತ್ರೀ ರೂಪವೇ ಆಗಿದ್ದ  ಅಕ್ಕಮಹಾದೇವಿಯನ್ನು ಅನುಭವ ಮಂಟಪದಲ್ಲಿ  ಪರೀಕ್ಷೆಗೆ ಒಡ್ಡಿ  ಆಕೆಯ  ವ್ಯಕ್ತಿತ್ವ, ಅಸ್ತಿತ್ವವನ್ನು ಅಲ್ಲಮಪ್ರಭುಗಳು ಜಗತ್ತಿಗೆ  ಪರಿಚಯಿಸಿದರು ಎಂಬುದಾಗಿ  ಮೂಡುಬಿದಿರೆ ಆಳ್ವಾಸ್ ಕಾಲೇಜಿನ ಸಹಪ್ರಾಧ್ಯಾಪಕಿ ಡಾ.ಜ್ಯೋತಿ ರೈ ಅವರು ಇಲ್ಲಿ ಮಾತನಾಡುತ್ತಾ ತಿಳಿಸಿದರು. 



ಕನ್ನಡ ಸಂಘ ಕಾಂತಾವರ ಮತ್ತು ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕಾರ್ಕಳ ಇವುಗಳ ಸಹಯೋಗದೊಂದಿಗೆ ಕಾರ್ಕಳ ಸರಕಾರಿ.ಪ.ಪೂ.ಕಾಲೇಜಿನಲ್ಲಿ ನ.25ರಂದು ನಡೆದ  ತಿಂಗಳ ‘ಅರಿವು ತಿಳಿವು’ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ‘ಅಕ್ಕಮಹಾದೇವಿಯ ವಚನಗಳು : ಒಂದು ಪ್ರವೇಶ’ ಎಂಬ  ಕುರಿತು ಉಪನ್ಯಾಸ ನೀಡಿದರು. 




ಲೌಕಿಕ ಪುರುಷನನ್ನು ತಿರಸ್ಕರಿಸಿ ಅಲೌಕಿಕ ಪುರುಷ ಚೆನ್ನಮಲ್ಲಿಕಾರ್ಜುನನ್ನೇ ತನ್ನ ಪತಿಯೆಂದು ಭಾವಿಸಿ ಅರಿಷಡ್ವೈರಿಗಳನ್ನೆಲ್ಲ ತೊರೆದು ಮಾನಸಿಕವಾಗಿಯೂ ಬೆತ್ತಲಾಗಿ ಶ್ರೇಷ್ಠ ವಚನಗಳನ್ನೂ ನೀಡಿದ ಆಕೆಯಲ್ಲಿ ದೈಹಿಕ ಭಾವವನ್ನು ಮೀರಿದ ಅಕ್ಕಮಹಾದೇವಿಯನ್ನು ಕಾಣಬಹುದಾಗಿದೆ. ಅಕ್ಕನ ವಚನಗಳಲ್ಲಿ ಮುಗ್ದತೆಯಿದೆ, ಸತಿಪತಿ ಭಾವವಿದೆ, ಸ್ವಾಭಿಮಾನದ ಕೆಚ್ಚಿದೆ, ಪ್ರತಿಭಟನೆಯ ಸ್ವರವೂ ಇದೆ ಎಂಬುದಾಗಿ ಸೋದಾಹರಣವಾಗಿ ವಿವರಿಸಿದರು.



ಅತಿಥಿಗಳನ್ನು ಇದೇ ಸಂದರ್ಭದಲ್ಲಿ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು. ಅ.ಭಾ.ಸಾ.ಪ.ದ  ತಾಲೂಕು ಘಟಕದ  ಗೌರವಾಧ್ಯಕ್ಷರಾದ ನಿತ್ಯಾನಂದ ಪೈ ಉಪಾಧ್ಯಕ್ಷರಾದ ಏರ್‍ವೈಸ್ ಮಾರ್ಷಲ್  ರಮೇಶ್ ಕಾರ್ಣಿಕ್  ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸುಧಾಕರ ಶ್ಯಾನುಭಾಗ್ ಪ್ರಾರ್ಥಿಸಿದರು. ವೀಣಾ ರಾಜೇಶ್ ಅತಿಥಿಗಳನ್ನು ಪರಿಚಯಿಸಿದರು. ಗಂಗಾಧರ ಪಣಿಯೂರು ಕಾರ್ಯಕ್ರಮ ನಿರೂಪಿಸಿದರು. ಸದಾನಂದ ನಾರಾವಿ ಸ್ವಾಗತಿಸಿ ಸುಲೋಚನಾ ಬಿ.ವಿ. ವಂದಿಸಿದರು.



   ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter                                                       

Post a Comment

0 Comments
Post a Comment (0)
Best Summer Deals Marvellous May Offers at Mandovi Motors
Best Summer Deals Marvellous May Offers at Mandovi Motors
To Top