ಮಂಗಳೂರು: ಕೆನರಾ ಕಾಲೇಜಿನ 'ಮಾನವ ಕಳ್ಳ ಸಾಗಣೆ ವಿರೋಧಿ ಘಟಕ'ವು 'ಮಾನವ ಕಳ್ಳ ಸಾಗಣೆ ಒಂದು ಸಾಮಾನ್ಯ ನೋಟ' ಎಂಬ ವಿಷಯದಲ್ಲಿ ವಿಚಾರ ಸಂಕಿರಣವನ್ನು ಏರ್ಪಡಿಸಿತ್ತು.
ಶ್ರೀ ಧರ್ಮಸ್ಥಳ ಕಾನೂನು ಮಹಾವಿದ್ಯಾಲಯದ ಸಹ ಪ್ರಾಧ್ಯಾಪಕಿ ಶ್ರೀಮತಿ ಕೆ ವಿನುತಾ ಮುಖ್ಯ ಅತಿಥಿಯಾಗಿ ಆಗಮಿಸಿದ್ದು, ಮನುಷ್ಯನನ್ನು ಒಂದು ದೇಶದಿಂದ ಇನ್ನೊಂದು ದೇಶಕ್ಕೆ ಮಾರುವ ದಂದೆ ಹೆಚ್ಚುತ್ತಿದೆ. ಬಾಡಿಗೆ ತಾಯಂದಿರನ್ನಾಗಿಸಲು, ಭಿಕ್ಷಾಟನೆಗಾಗಿ, ವಿವಿಧ ಉದ್ದೇಶಗಳಿಗಾಗಿ ಮಹಿಳೆಯರನ್ನು, ಮಕ್ಕಳನ್ನು ಮಾರುವುದೇ ಮಾನವ ಕಳ್ಳ ಸಾಗಣೆ. ಇದಕ್ಕೆ ಸಂಬಂಧಪಟ್ಟ ಕಾನೂನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ಬರಬೇಕು ಎಂದರು.
ಕಾರ್ಯಕ್ರಮದಲ್ಲಿ ಘಟಕದ ಸಂಯೋಜಕರಾದ ಡಾ. ಗಣೇಶ್ ಶೆಟ್ಟಿ ಹಾಗೂ ಶ್ರೀಮತಿ ಕೀರ್ತಿ ಆಳ್ವ ಉಪಸ್ಥಿತರಿದ್ದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ