ಮಂಜೇಶ್ವರ ಉಪಜಿಲ್ಲಾ ಕಲೋತ್ಸವ ನಾಳೆಯಿಂದ ಧರ್ಮತ್ತಡ್ಕದಲ್ಲಿ

Upayuktha
0





ಧರ್ಮತ್ತಡ್ಕ: 62ನೇ ಮಂಜೇಶ್ವರ ಉಪಜಿಲ್ಲಾ ಶಾಲಾ ಕಲೋತ್ಸವವು ಧರ್ಮತ್ತಡ್ಕದ  ಶ್ರೀ ದುರ್ಗಾಪರಮೇಶ್ವರಿ ವಿದ್ಯಾಸಂಸ್ಥೆಗಳಲ್ಲಿ ನವಂಬರ್ 7 ರಿಂದ 10 ರ ತನಕ  ವಿಜ್ರಂಭಣೆಯಿಂದ ನಡೆಯಲಿರುವುದು. ಆ ಪ್ರಯುಕ್ತ 7ನೇ ತಾರೀಕಿಗೆ ಎಲ್ಲಾ ರಚನಾ ಸ್ಪರ್ಧೆಗಳನ್ನು ನಡೆಸಲಾಗುವುದು.


ಕಾರ್ಯಕ್ರಮದ ಔಪಚಾರಿಕ ಉದ್ಘಾಟನೆಯು 8ನೇ ತಾರೀಕಿಗೆ ನಡೆಯುವುದು. ವಿದ್ಯಾಸಂಸ್ಥೆಗಳ ಕರೆಸ್ಪಾಂಡೆಂಟ್ ಶ್ರೀಮತಿ ಶಾರದಾ ಅಮ್ಮ ಧ್ವಜಾರೋಹಣ ಗೈಯುವರು. ಮಂಜೇಶ್ವರ ಶಾಸಕ  ಎ.ಕೆ.ಎಂ ಅಶ್ರಫ್ ಕಾರ್ಯಕ್ರಮವನ್ನು ಉದ್ಘಾಟಿಸುವರು. ಕಾಸರಗೋಡು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಬೇಬಿ ಬಾಲಕೃಷ್ಣನ್ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಮಂಜೇಶ್ವರ ಉಪ ವಿದ್ಯಾಧಿಕಾರಿ ಜಿತೇಂದ್ರ ಎಸ್.ಎಚ್ ಪ್ರಾಸ್ತಾವಿಕ ನುಡಿಗಳನ್ನಾಡುವರು‌.


ಪುತ್ತಿಗೆ ಪಂಚಾಯತ್ ಅಧ್ಯಕ್ಷ ಸುಬ್ಬಣ್ಣ ಆಳ್ವ, ಜಿಲ್ಲಾ ಪಂಚಾಯತ್ ಸದಸ್ಯ ನಾರಾಯಣ ನಾಯ್ಕ್, ಕಾಸರಗೋಡು ಡಿ.ಡಿ.ಇ ನಂದಿಕೇಶನ್ ಎನ್, ವಿದ್ಯಾಭ್ಯಾಸ ಸ್ಥಾಯೀ ಸಮಿತಿ ಅಧ್ಯಕ್ಷ ಅಬ್ದುಲ್ ಮಜೀದ್ ಎಂ ಎಚ್, ಮಂಜೇಶ್ವರ ಬ್ಲಾಕ್ ಪಂಚಾಯತ್ ಸದಸ್ಯೆ ಶ್ರೀಮತಿ ಚಂದ್ರಾವತಿ ಎಂ, ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಶಾಂತಿ ವೈ, ಗಂಗಾಧರ, ಆಸಿಫ್ ಅಲಿ ಸಿ.ಎಂ, ಶ್ರೀಮತಿ ಜಯಂತಿ, ಶ್ರೀಮತಿ ಕಾವ್ಯಶ್ರೀ ಪಿ‌.ಕೆ, ಶ್ರೀಮತಿ ಇರ್ಶಾನ ಎಸ್, ಶ್ರೀಮತಿ ಪುಷ್ಪಲಕ್ಷ್ಮಿ ಎನ್, ಡಯಟ್ ಪ್ರಾಂಶುಪಾಲ ರಘುರಾಮ ಭಟ್ ಕೆ,ಪಿ.ಟಿ.ಎ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ, ಎಂ.ಪಿ.ಟಿ.ಎ ಅಧ್ಯಕ್ಷೆ ಶ್ರೀಮತಿ ಪುಷ್ಪಾ ಕಮಲಾಕ್ಷ, ವ್ಯವಸ್ಥಾಪಕ ಶಂಕರನಾರಾಯಣ ಭಟ್, ಶುಭಾಶಯಗಳನ್ನು ತಿಳಿಸುವರು. ಪ್ರಾಂಶುಪಾಲ ರಾಮಚಂದ್ರ ಭಟ್ ಸ್ವಾಗತಿಸಿ ಮುಖ್ಯೋಪಾಧ್ಯಾಯ ಗೋವಿಂದ ಭಟ್ ವಂದಿಸುವರು‌. ಸ್ವಾಗತ ಗೀತೆಯೊಂದಿಗೆ ಆರಂಭಗೊಳ್ಳುವ ಈ ಕಾರ್ಯಕ್ರಮದಲ್ಲಿ ಅತಿಥಿಗಳನ್ನು ಸಾಂಪ್ರದಾಯಿಕ ಮೆರವಣಿಗೆಗಳೊಂದಿಗೆ ವೇದಿಕೆಗೆ ಕರೆದುಕೊಂಡು ಬರಲಾಗುವುದು.


120ಕ್ಕೂ ಅಧಿಕ ಶಾಲೆಗಳಿಂದ ಸುಮಾರು 4000ಕ್ಕೂ ಅಧಿಕ ಪ್ರತಿಭೆಗಳು 10 ರಷ್ಟು ಮುಖ್ಯ ವೇದಿಕೆಗಳಲ್ಲಿ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸುವ ಈ ಮಹಾ ಉತ್ಸವವನ್ನು ಯಶಸ್ವಿಗೊಳಿಸುವಲ್ಲಿ ಎಲ್ಲಾ ವಿದ್ಯಾಭಿಮಾನಿಗಳು, ರಕ್ಷಕರು ಸರ್ವ ಸಹಕಾರವನ್ನು ನೀಡಬೇಕೆಂದು ಸಂಘಟನಾ ಸಮಿತಿಯವರು ವಿನಂತಿಸಿಕೊಂಡಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top