ನಿಜಗುಣಯ್ಯ ಎಚ್‌.ಎಸ್ ಅವರಿಗೆ ಗುರುಕುಲ ವಿದ್ಯಾರತ್ನ ಪ್ರಶಸ್ತಿ, ನಾಳೆ ಹಂಪಿಯಲ್ಲಿ ಪ್ರದಾನ

Upayuktha
0


ತುಮಕೂರು: ಗುರುಕುಲ ಕಲಾ ಪ್ರತಿಷ್ಠಾನ ಕೇಂದ್ರ ಸಮಿತಿ ತುಮಕೂರು ವತಿಯಿಂದ ಅಖಿಲ ಭಾರತ ಮಟ್ಟದ 3ನೇ ಗುರುಕುಲ ಕಲಾ ಸಮ್ಮೇಳನವು ವಿಜಯನಗರ ಜಿಲ್ಲೆ ಹಂಪಿಯಲ್ಲಿ ಅದ್ದೂರಿ ಕಾರ್ಯಕ್ರಮ, ಕವಿಗೋಷ್ಠಿ, ವಿಚಾರ ಗೋಷ್ಠಿಗಳೊಂದಿಗೆ ನ.18ರಂದು ನಡೆಯಲಿದೆ. ಈ ಸಮ್ಮೇಳನದಲ್ಲಿ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ಸಮಾಜಕ್ಕೆ ಮಾದರಿಯಾಗುವ ಕಾರ್ಯ ಮಾಡುವ ಸಾಧಕರಿಗೆ ಸನ್ಮಾನಿಸಲಾಗುವುದು.


ಈ ಕಾರ್ಯಕ್ರಮದಲ್ಲಿ ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ನೊಣವಿನಕೆರೆಯ ಡಾ.ಬಿ.ಆರ್ ಅಂಬೇಡ್ಕರ್ ವಸತಿ ಶಾಲೆಯ ಪ್ರೌಢಶಾಲಾ ಶಿಕ್ಷಕ ಹಾಗೂ ರಾಜ್ಯ ಸಂಪನ್ಮೂಲ ವ್ಯಕ್ತಿ ನಿಜಗುಣಯ್ಯ ಹೆಚ್.ಎಸ್ ಅವರಿಗೆ ಗುರುಕುಲ ವಿದ್ಯಾರತ್ನ (ಶಿಕ್ಷಣ) ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು.


ಇದುವರೆಗಿನ ಶೈಕ್ಷಣಿಕ ಸೇವೆ ಶಾಲಾ ಮಟ್ಟ, ತಾಲ್ಲೂಕು ಮಟ್ಟ, ಹಾಗೂ ಜಿಲ್ಲಾ ಮಟ್ಟ ಹಾಗೂ ರಾಜ್ಯ ಮಟ್ಟದ ಸೇವೆಯನ್ನು ಗುರುತಿಸಿ ಗುರುಕುಲ ಪ್ರತಿಷ್ಠಾನದ ಸಂಸ್ಥಾಪಕ ಅಧ್ಯಕ್ಷ ಹುಲಿಯೂರುದುರ್ಗ ಲಕ್ಷ್ಮೀನಾರಾಯಣ್ ರವರು ಹಾಗೂ ವಿಜಯನಗರ ಜಿಲ್ಲಾ ಘಟಕದ ಅಧ್ಯಕ್ಷ ವೆಂಕಟೇಶ್ ಬಡಿಗೇರ್ ರವರು ಹಾಗೂ ಸರ್ವ ಪದಾಧಿಕಾರಿಗಳು ಆಯ್ಕೆ ಮಾಡಿದ್ದಾರೆ.


ನ. 18ರಂದು ಶನಿವಾರ ಹಂಪಿಯಲ್ಲಿ ನಡೆಯುವ ಅದ್ದೂರಿ ಕಾರ್ಯಕ್ರಮದಲ್ಲಿ ಇವರಿಗೆ ಗುರುಕುಲ ವಿದ್ಯಾ ರತ್ನ (ಶಿಕ್ಷಣ )ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top