ಕೊಣಾಜೆ : ಸಮಾಜ ಕಾರ್ಯ ವಿಭಾಗದಲ್ಲಿ ಸಿಗುವಷ್ಟು ಅನುಭವ , ಜೀವನ ಮೌಲ್ಯಗಳು ಬೇರೆ ಯಾವ ಕೋರ್ಸ್ನಲ್ಲಿ ಸಿಗಲು ಸಾಧ್ಯವಿಲ್ಲ. ಸಮಾಜ ಕಾರ್ಯ ವಿಭಾಗವು ವಿದ್ಯಾರ್ಥಿಗಳ ವ್ಯಕ್ತಿತ್ವವನ್ನು ರೂಪಿಸುತ್ತದೆ ಎಂದು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸ್ವಸ್ತಿಕ್ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಡಾ.ರಾಘವೇಂದ್ರ ಹೊಳ್ಳ.ಎನ್ ಅಭಿಪ್ರಾಯಪಟ್ಟರು.
ಮಂಗಳೂರು ವಿಶ್ವವಿದ್ಯಾನಿಲಯ ಸಮಾಜ ಕಾರ್ಯ ಮತ್ತು ಸಂಶೋಧನಾ ವಿಭಾಗ ಇವರ ಜಂಟಿ ಆಶ್ರಯದಲ್ಲಿ ನಡೆದ "ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿ ಸಂಘದ ಉದ್ಘಾಟನೆ ಮತ್ತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು " ಕಾಲೇಜಿನ ಯಕ್ಷಗಾನ ಕಲಾಕೇಂದ್ರದಲ್ಲಿ ಹಮ್ಮಿಕೊಳ್ಳಲಾಯಿತು.
ಅಧ್ಯಕ್ಷೀಯ ನುಡಿಗಳನ್ನಾಡಿದ ವಿಭಾಗದ ಮುಖ್ಯಸ್ಥ ಡಾ.ಮೋಹನ್ ಸಿಂಗೇ ಮಾನವ ಸಮಾಜ ಜೀವಿ ಮಾತ್ರವಲ್ಲ ಆತ ಸಾಂಘಿಕ ಜೀವಿ ಕೂಡ ಹೌದು . ಸಮಾಜವನ್ನು ಕಟ್ಟಲು ಅಣಿಯಾಗುತ್ತಿರುವ ಸಮಾಜ ಕಾರ್ಯದ ವಿದ್ಯಾರ್ಥಿಗಳಿಗೆ ಈ ಸಂಘ ಜೀವನದ ಅಗತ್ಯವಿದೆ ಎಂದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ