ಪಣಜಿ: ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸದ್ಯ 78 ಲಕ್ಷಕ್ಕೂ ಹೆಚ್ಚು ಸದಸ್ಯರಾಗಿದ್ದಾರೆ. ನಾಡೋಜ ಡಾ. ಮಹೇಶ್ ಜೋಶಿ ರವರ ನೇತೃತ್ವದಲ್ಲಿ ಡಿಜಿಟಲ್ ಮುಖಾಂತರ ತಮ್ಮ ಇಚ್ಛಾ ಶಕ್ತಿಯ ಮುಖಾಂತರ ಕಸಾಪ ಸದಸ್ಯರನ್ನು ದಾಖಲೆಯ ರೀತಿಯಲ್ಲಿ ಹೆಚ್ಚಳ ಮಾಡಿದ್ದಾರೆ. ಅಂತೆಯೇ ಗೋವಾದಲ್ಲಿಯೂ ಕೂಡ ಇಂದು ಪದಗ್ರಹಣ ಮಾಡಿಕೊಳ್ಳುತ್ತಿರುವ ಕಸಾಪ ಉತ್ತರ ಗೋವಾ ಜಿಲ್ಲಾಧ್ಯಕ್ಷ ಮಡಿವಾಳಯ್ಯ ಗಣಾಚಾರಿ ರವರು ಗೋವಾದಲ್ಲಿ ಕಸಾಪ ಸದಸ್ಯತ್ವ ಅಭಿಯಾನವನ್ನು ಚುರುಕುಗೊಳಿಸಿರುವುದು ಸಂತಸದ ಸಂಗತಿ ಎಂದು ಕನ್ನಡ ಸಾಹಿತ್ಯ ಪರಿಷತ್ ಗೋವಾ ರಾಜ್ಯಾಧ್ಯಕ್ಷ ಡಾ.ಸಿದ್ಧಣ್ಣ ಮೇಟಿ ನುಡಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ಕನ್ನಡ ಸಾಹಿತ್ಯ ಪರಿಷತ್ತು ಗಡಿನಾಡ ಘಟಕ ಗೋವಾ ರಾಜ್ಯ ಇವರ ಸಂಯುಕ್ತ ಆಶ್ರಯದಲ್ಲಿ ಇಂದು (ನವೆಂಬರ್ 26) ಭಾನುವಾರ ಬಿಚೋಲಿಯ ಶಿರೋಡ್ಕರ್ ಸಮಾಗೃಹದಲ್ಲಿ ಆಯೋಜಿಸಿದ್ದ ಉತ್ತರ ಗೋವಾ ಜಿಲ್ಲಾ ಮತ್ತು ತಾಲೂಕಾ ಘಟಕಗಳ ಕನ್ನಡ ಸಾಹಿತ್ಯ ಪರಿಷತ್ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ 1 ನೆಯ ವಾರ್ಷಿಕೋತ್ಸವ, 68 ನೇ ಕನ್ನಡ ರಾಜ್ಯೋತ್ಸವದ ಉಧ್ಘಾಟನೆ ನೆರವೇರಿಸಿ ಅವರು ಮಾತನಾಡುತ್ತಿದ್ದರು.
ಗೋವಾದಲ್ಲಿರುವ ಜಿಲ್ಲಾ ಮತ್ತು ತಾಲೂಕಾ ಘಟಕದ ವತಿಯಿಂದ ಮುಂಬರುವ ದಿನಗಳಲ್ಲಿ ಸದಸ್ಯತ್ವ ಅಭಿಯಾನವನ್ನು ಚುರುಕುಗೊಳಿಸಬೇಕು. ಪ್ರತಿಯೊಬ್ಬ ಪದಾಧಿಕಾರಿಗಳೂ ಕೂಡ ಸದಸ್ಯತ್ವ ಹೆಚ್ಚಳಕ್ಕೆ ಪ್ರಯತ್ನಿಸಬೇಕು. ಈ ನಿಟ್ಟಿನಲ್ಲಿ ಎಲ್ಲ ಜಿಲ್ಲಾ ಹಾಗೂ ತಾಕೂಲಾ ಘಟಕಗಳು ಕೂಡ ಪ್ರಯತ್ನಿಸಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ ಗೋವಾ ರಾಜ್ಯಾಧ್ಯಕ್ಷ ಸಿದ್ಧಣ್ಣ ಮೇಟಿ ನುಡಿದರು.
ಈ ಸಂರ್ದದಲ್ಲಿ ಮುಖ್ಯ ಅತಿಥಿಗಳಾಗಿ ವೇದಿಕೆಯ ಮೇಲೆ ಉಪಸ್ಥಿತರಿದ್ದ ಇಂಡೋ ಪೋರ್ಚುಗೀಸ ಸಾಹಿತ್ಯ ಪ್ರತಿಷ್ಠಾನದ ನಿರ್ದೇಶಕ ಡಾ.ಅರವಿಂದ ಯಾಳಗಿ ಮಾತನಾಡಿ- ನಾವು ಹೊರನಾಡು ಗೋವೆಯ ಕನ್ನಡಿಗರು ನಾವೆಲ್ಲರೂ ಒಂದು ಎಂಬ ಭಾವನೆಯಿರಬೇಕು. ನಮ್ಮ ನಡುವೆ ಯಾವುದೇ ವೈಮನಸ್ಸು ಅಥವಾ ಧ್ವೇಷ ಇರಬಾರದು. ಅಂದಾಗ ಮಾತ್ರ ಹೊರನಾಡ ಕನ್ನಡಿಗರು ಒಗ್ಗಟ್ಟಾಗಿ ಹೊರನಾಡಲ್ಲಿ ಕನ್ನಡದ ಕಂಪು ಬೀರಲು ಸಾಧ್ಯ ಎಂದರು.
ಈ ಸಂದರ್ಭದಲ್ಲಿ ಕಸಾಪ ಉತ್ತರ ಗೋವಾ ಜಿಲ್ಲಾಧ್ಯಕ್ಷ ಮಡಿವಾಳಯ್ಯ ಗಣಾಚಾರಿ, ವಿಜುಪುರ ಜಿಪಂ ಮಾಜಿ ಅಧ್ಯಕ್ಷೆ ನೀಲಮ್ಮ ಮೇಟಿ, ಕವಿಶೈಲ ಕನ್ನಡ ಸಂಘ ಮಾಪ್ಸಾ ಅಧ್ಯಕ್ಷ ಶಂಭು ಶೆಟ್ಟರ್, ಕಸಾಪ ಬಿಚೋಲಿಂ ತಾಲೂಕಾ ಘಟಕದ ಅಧ್ಯಕ್ಷ ಸಂಗಪ್ಪ ಕುರಿ, ಅಖಿಲ ಗೋವಾ ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪಡದಯ್ಯ ಹಿರೇಮಠ, ಕಲಾ ಸಂಗಮ ಸಂಸ್ಥೆ ಧಾರವಾಡದ ಅಧ್ಯಕ್ಷ ಪ್ರಭು ಹಂಚಿನಾಳ, ಕಸಾಪ ಗೋವಾ ರಾಜ್ಯ ಘಟಕದ ಗೌ. ಕಾರ್ಯದರ್ಶಿ ನಾಗರಾಜ ಗೋಂದಕರ್, ಕಸಾಪ ದಕ್ಷಿಣ ಗೋವಾ ಜಿಲ್ಲಾಧ್ಯಕ್ಷ ಪರಶುರಾಮ ಕಲಿವಾಳ, ಕಸಾಪ ಸಾಲಸೇಟ ತಾಲೂಕಾಧ್ಯಕ್ಷ ಬಸವರಾಜ್ ಬನ್ನಿಕೊಪ್ಪ, ಕಸಾಪ ಗೋವಾ ರಾಜ್ಯ ಘಟಕದ ಸಂಘಟನಾ ಕಾರ್ಯದರ್ಶಿ ಬಸವರಾಜ್ ಮೇಟಿ, ಮತ್ತಿತರರು ವೇದಿಕೆಯ ಮೇಲೆ ಉಪಸ್ಥಿತರಿದ್ದರು.
ಸಭಾ ಕಾರ್ಯಕ್ರಮದ ನಂತರ ಸಂಗೀತ ಶಿಕ್ಷಕ ಬಾಬು ಬೂಸಾರಿ ತಂಡದಿಂದ ಸಂಗೀತ ಕಾರ್ಯಕ್ರಮ, ಶಿವಾನಿ ಪಾಟೀಲ್ ತಂಡದಿಂದ ಜೋಗತಿ ನೃತ್ಯ, ಕುಮಾರಿ ಸಂಜನಾ ಕರಿಗಾರ ತಂಡದಿಂದ ನೃತ್ಯ ಕಾರ್ಯಕ್ರ, ಮಹಾದೇವ ಸತ್ತಿಗೇರಿ ರವರಿಂದ ಹಾಸ್ಯ ಕಾರ್ಯಕ್ರಮ ನಡೆಯಿತು. ಉತ್ತರ ಗೋವಾ ಜಿಲ್ಲಾ ಮತ್ತು ತಾಲೂಕಾ ಘಟಕದ ಕಸಾಪ ಪದಾಧಿಕಾರಿಗಳ ಪದಗೃಹಣ ಸಮಾರಂಭ ನಡೆಯಿತು. ಡಾ. ಅರವಿಂದ ಯಾಳಗಿ ರವರ ವಿಂಗ್ಸ ಆಫ್ ಅ ಗಾಡ್ ಕೃತಿ ಲೋಕಾರ್ಪಣೆಗೊಳಿಸಲಾಯಿತು. ಶಿಲಾ ಮೇಸ್ತ ಕಾರ್ಯಕ್ರಮ ನಿರೂಪಿಸಿದರು. ಗೋವಾ ರಾಜ್ಯದ ವಿವಿಧ ಭಾಗದಿಂದ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ