ಅಂಬೇಡ್ಕರ್ ಉತ್ಸವ 2023- ಉದ್ಘಾಟಿಸಿದ ಶಾಸಕ ಡಾ. ಭರತ್ ಶೆಟ್ಟಿ

Upayuktha
0


ಮಂಗಳೂರು: ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರ (ರಿ) ಅಂಬೇಡ್ಕರ್ ನಗರ ತಿರುವೈಲ್ ವಾಮಂಜೂರ್ ಇದರ ರಜತ ಮಹೋತ್ಸವದ ಅಂಗವಾಗಿ ಅದೇ ರೀತಿ ಅಂಬೇಡ್ಕರ್ ಯುವಕ ಸಂಘ ಮತ್ತು ಶ್ರೀ ಸತ್ಯ ಸಾರಮಾಣಿ ದೇವಸ್ಥಾನದ ಸಹಯೋಗದೊಂದಿಗೆ, ಹೇಮಲತಾ ರಘು ಸಾಲಿಯಾನ್ ರವರ ಮುಂದಾಳತ್ವದಲ್ಲಿ `ಅಂಬೇಡ್ಕರ್ ಉತ್ಸವ 2023´ ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯಿತು. ಈ ಕಾರ್ಯಕ್ರಮದ ಸಭಾಕಾರ್ಯಕ್ರಮದ ಉದ್ಘಾಟನೆಯನ್ನು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರು ಉದ್ಘಾಟಿಸಿದರು.


ತಿರುವೈಲ್ ಪರಿಸರದಲ್ಲಿರುವ ಕಾಲೋನಿ ಅಭಿವೃದ್ಧಿ ಕಾಮಗಾರಿಗೆ ಸುಮಾರು  1 ಕೋಟಿಗೂ ಅಧಿಕ ಮೊತ್ತ ನೀಡಿ ಕಾಲೋನಿ ಅಭಿವೃದ್ಧಿ ಮಾಡಿದ ಶಾಸಕರ ಜನಪರ ಕಾರ್ಯವನ್ನು ಮೆಚ್ಚಿ ಗ್ರಾಮಸ್ಥರು ಶಾಸಕರನ್ನು ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Best Summer Deals Marvellous May Offers at Mandovi Motors
Best Summer Deals Marvellous May Offers at Mandovi Motors
To Top