ಕಾರ್ಕಳ : ಕರ್ನಾಟಕ ಗಮಕ ಕಲಾ ಪರಿಷತ್ತು (ರಿ.) ಉಡುಪಿ ಜಿಲ್ಲೆ ಹಾಗೂ ಕರ್ನಾಟಕ ಗಮಕ ಕಲಾ ಪರಿಷತ್ತು ಕುಂದಾಪುರ ಘಟಕ ಇವರ ಸಹಯೋಗದಲ್ಲಿ ಕನಕ ಜಯಂತಿ ಪ್ರಯುಕ್ತ ನ.30 ಗುರುವಾರದಂದು ಸಾಯಂಕಾಲ 4.30ಕ್ಕೆ ಎ.ಎಸ್.ಎನ್. ಹೆಬ್ಬಾರ್ ಅವರ ‘ನುಡಿ’ ಸ್ವಗೃಹದಲ್ಲಿ ಕನಕದಾಸ ಕೀರ್ತನೆಗಳ ಗಮಕ ವಾಚನ ವ್ಯಾಖ್ಯಾನ ಕಾರ್ಯಕ್ರಮ ನಡೆಯಲಿದೆ.
ಗಮಕ ಕಲಾ ಪರಿಷತ್ತಿನ ಉಡುಪಿ ಜಿಲ್ಲಾಧ್ಯಕ್ಷರಾಗಿರುವ ಸತೀಶ್ ಕುಮಾರ್ ಕೆಮ್ಮಣ್ಣು ಉಪಸ್ಥಿತಿಯಲ್ಲಿ ಕುಂದಾಪುರದ ಹಿರಿಯ ನ್ಯಾಯವಾದಿ ಮತ್ತು ಕಲಾ ಸಾಹಿತ್ಯ ಪೋಷಕರಾದ ಎ.ಎಸ್.ಎನ್. ಹೆಬ್ಬಾರ್ ಮುಖ್ಯ ಅತಿಥಿಗಳಾಗಿದ್ದು, ದ.ರಾ ಬೇಂದ್ರೆಯವರ ಮೇಘದೂತ (ಪೂರ್ವ ಮೇಘ)ವನ್ನು ಪ್ರಸಿದ್ಧ ಗಮಕಿ ಶ್ರೀಮತಿ ಮಂಜುಳಾ ಸುಬ್ರಹ್ಮಣ್ಯ ಮಂಚಿ ಅವರು ವಾಚಿಸಲಿದ್ದು ಸಂಸ್ಕøತ ವಿದ್ವಾಂಸರು ಹಾಗೂ ಕವಿಗಳಾದ ಡಾ.ರಾಘವೇಂದ್ರ ರಾವ್ ಪಡುಬಿದ್ರೆ ಅವರು ವ್ಯಾಖ್ಯಾನವನ್ನು ನೆರವೇರಿಸಿಕೊಡಲಿದ್ದಾರೆ ಎಂಬುದಾಗಿ ಸತೀಶ್ ಕುಮಾರ್ ಕೆಮ್ಮಣ್ಣು ಅವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ