ಮಂಗಳೂರು: ಫ್ರೂಟ್ಸ್ ತಂತ್ರಾಂಶದಲ್ಲಿ ಜಿಲ್ಲೆಯ ರೈತರ ಎಲ್ಲಾ ಜಮೀನಿನ ಮಾಹಿತಿಯನ್ನು ಮುಂದಿನ ಹದಿನೈದು ದಿನದೊಳಗೆ ದಾಖಲಿಸಲು ಸರ್ಕಾರದ ನಿರ್ದೇಶನವಿರುತ್ತದೆ. ಬರಗಾಲದಿಂದ ಉಂಟಾದ ಬೆಳೆ ನಷ್ಟಕ್ಕೆ ದೊರೆಯುವ ಪರಿಹಾರ ತಂತ್ರಾಂಶದ ದಾಖಲೆಯನ್ವಯ ರೈತರ ಖಾತೆಗೆ ನೇರವಾಗಿ ಮುಂದಿನ ದಿನಗಳಲ್ಲಿ ಜಮೆಯಾಗಲಿದೆ.
ಜಿಲ್ಲೆಯಲ್ಲಿ ಒಟ್ಟು ಲಭ್ಯ ಪ್ಲಾಟ್ 9,52,408ಗಳಲ್ಲಿ ಈವರೆಗೆ 3,99,306 ಪ್ಲಾಟ್ಗಳನ್ನು ತಂತ್ರಾಂಶದಲ್ಲಿ ಸಂಯೋಜಿಸಲಾಗಿದ್ದು, ಇನ್ನೂ 5,53,102(ಶೇ. 58.07%) ಪ್ಲಾಟ್ಗಳನ್ನು ಜೋಡಿಸಬೇಕಾಗಿದೆ. ಈ ಕಾರ್ಯವನ್ನು ಕ್ಷೇತ್ರ ಮಟ್ಟದಲ್ಲಿ ಕಂದಾಯ ಕೃಷಿ ಮತ್ತು ತೋಟಗಾರಿಕೆ ಇಲಾಖೆಗಳ ಲಾಗಿನ್ಗಳನ್ನು ಮುಂದಿನ 15 ದಿನಗಳ ಅವಧಿಯಲ್ಲಿ ಅಭಿಯಾನ ರೂಪದಲ್ಲಿ ಕೈಗೊಂಡು ಫ್ರೂಟ್ಸ್ ತಂತ್ರಾಂಶದಲ್ಲಿ ಶೇ.100ರಷ್ಟು ಲ್ಯಾಂಡ್ ಅಪ್ಡೇಷನ್ ಪ್ರಗತಿ ಸಾಧಿಸಲು ಸರ್ಕಾರದ ನಿರ್ದೇಶನವಿದೆ. ಫ್ರೂಟ್ಸ್ ತಂತ್ರಾಂಶದ ಮಾಹಿತಿಯನ್ನು ಸರಕಾರದ ವಿವಿಧ ಸವಲತ್ತುಗಳಾದ ಬೆಳೆ ವಿಮೆ, ಬೆಳೆ ಸಾಲ ವಿತರಣೆ, ಬೆಳೆ ಪರಿಹಾರ ವಿತರಣೆ, ಬೆಂಬಲ ಬೆಲೆ ಅನುಷ್ಠಾನ ಪಹಣಿಯಲ್ಲಿ ಬೆಳೆ ದಾಖಲಾತಿ ಹಾಗೂ ಸರ್ಕಾರದ ವಿವಿಧ ಸೌಲಭ್ಯಗಳ ವಿತರಣೆಗೆ ಬಳಕೆ ಮಾಡುತ್ತಿದ್ದು, ಕಂದಾಯ, ಕೃಷಿ, ತೋಟಗಾರಿಕೆ, ಮೀನುಗಾರಿಕೆ, ಪಶುಸಂಗೋಪನೆ, ರೇಷ್ಮೆ, ಸಹಕಾರ ಇಲಾಖೆ ಹಾಗೂ ಸಹಕಾರ ಮತ್ತು ವಾಣಿಜ್ಯ ಬ್ಯಾಂಕ್ಗಳಲ್ಲಿ ಈ ತಂತ್ರ ದತ್ತಾಂಶವನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ.
ಜಿಲ್ಲೆಯ ಸಮಸ್ತ ರೈತ ಬಾಂಧವರು ತಮ್ಮ ಆಧಾರ್ ಕಾರ್ಡ್ ಪ್ರತಿ, ಬ್ಯಾಂಕ್ ಖಾತೆ ಮತ್ತು ಶಾಖೆಯ ವಿವರ ಬ್ಯಾಂಕ್ ಐ.ಎಫ್.ಎಸ್.ಸಿ ಕೋಡ್, ಪಡಿತರ ಚೀಟಿಯ ವಿವರ, ಮೊಬೈಲ್ ಸಂಖ್ಯೆ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ರೈತರಾಗಿದ್ದಲ್ಲಿ ಜಾತಿ ಪ್ರಮಾಣ ಪತ್ರ ಹಾಗೂ ತಮ್ಮ ಮಾಲೀಕತ್ವದ ಎಲ್ಲಾ ಜಮೀನಿನ ಸರ್ವೇ ನಂಬರ್ ವಿವರವನ್ನು ತಮ್ಮ ಹತ್ತಿರದ ತಹಶೀಲ್ದಾರರ ಕಚೇರಿ, ಕಂದಾಯ ನಿರೀಕ್ಷಕರ ಕಛೇರಿ, ಗ್ರಾಮ ಲೆಕ್ಕಾಧಿಕಾರಿಗಳ ಕಚೇರಿ, ನ್ಯಾಯಬೆಲೆ ಅಂಗಡಿ ಅಥವಾ ಕೃಷಿ ತೋಟಗಾರಿಕೆ ರೇಷ್ಮೆ ಇಲಾಖೆ ಕಚೇರಿಗಳಿಗೆ ಕೂಡಲೇ ಒದಗಿಸಿ ತಮ್ಮ ಮಾಲೀಕತ್ವದ ಎಲ್ಲಾ ಪಹಣಿಯ ದಾಖಲೆಗಳನ್ನು ಮುಂದಿನ ಹದಿನೈದು ದಿನಗಳೊಳಗೆ ನೋಂದಾಯಿಸಿಕೊಳ್ಳಲು ತಿಳಿಸಿದ್ದಾರೆ.
ಈ ಮಾಹಿತಿಯನ್ನು ಸರಕಾರದ ವಿವಿಧ ಇಲಾಖೆಗಳ ಸವಲತ್ತುಗಳನ್ನು ನೀಡಲು ಮಾತ್ರ ಬಳಕೆ ಮಾಡುವುದರಿಂದ ರೈತರು ನಿರ್ಭಿತಿಯಿಂದ ತಮ್ಮ ಜಮೀನಿನ ಮಾಹಿತಿಯನ್ನು ನೀಡಿ ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಾಯಿಸಿಕೊಳ್ಳಲು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ