ಮಂಗಳೂರು: ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷನಾಗಿ ಹೊಣೆ ವಹಿಸಿಕೊಂಡ ನಂತರ ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡಿದ್ದೇನೆ. 18 ಬಾರಿ ಇಡೀ ರಾಜ್ಯವನ್ನು ಸುತ್ತಿ ಸಂಘಟನೆ ಮಾಡಿದ್ದೇನೆ ಎಂದು ನಿರ್ಗಮಿತ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.
ರಾಜ್ಯ ಬಿಜೆಪಿಗೆ ನೂತನ ಅಧ್ಯಕ್ಷರಾಗಿ ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ ಅವರನ್ನು ನೇಮಿಸಿ ಪಕ್ಷದ ವರಿಷ್ಠರು ಆದೇಶ ಹೊರಡಿಸಿದ ಬಳಿಕ ನಳಿನ್ ಕುಮಾರ್ ಕಟೀಲ್ ಶುಕ್ರವಾರ ಸುದ್ದಿಗಾರರ ಜತೆಗೆ ಮಾತನಾಡಿ, ತಮ್ಮ ಜತೆ ಹಸಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.
ಪಕ್ಷದ ಸಂಘಟನೆ ಕಾರ್ಯವನ್ನು ಯಶಸ್ವಿಯಾಗಿ ಮಾಡಿದ್ದೇನೆ. ನನಗೆ ನಾಲ್ಕೂವರೆ ವರ್ಷಗಳ ಕಾಲ ರಾಜ್ಯ ಬಿಜೆಪಿ ಅಧ್ಯಕ್ಷ ಹಾಗೂ ಕೇರಳ ಉಸ್ತುವಾರಿ ಆಗಿ ಕೆಲಸ ಮಾಡಲು ಹೈಕಮಾಂಡ್ ಸಹಕಾರ ನೀಡಿದೆ. ಮತಗಟ್ಟೆಯಿಂದ ಪಕ್ಷವನ್ನು ಸಂಘಟನೆ ಮಾಡಿರುವ ಸಂತೃಪ್ತಿ ನನಗೆ ಇದೆ ಎಂದರು.
ಪಂಚಾಯತ್ ಚುನಾವಣೆ, ಉಪ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಬಿಜೆಪಿ ಜಯ ಗಳಿಸಿತ್ತು. ಲೋಕಸಭಾ ಉಪ ಚುನಾವಣೆ, ರಾಜ್ಯಸಭೆ, ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷ ಜಯಗಳಿಸಿತ್ತು. ವಿಧಾನಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಸೋಲಾಗಿತ್ತು. ಇಡೀ ರಾಜ್ಯದಾದ್ಯಂತ ಪ್ರವಾಸ ಮಾಡಿ ಪಕ್ಷವನ್ನು ಕಟ್ಟಿದ್ದೇನೆ. ಯಡಿಯೂರಪ್ಪ, ಈಶ್ವರಪ್ಪ ಸದಾನಂದ ಗೌಡ, ಪ್ರಹ್ಲಾದ್ ಜೋಶಿ ಹಲವು ಹಿರಿಯ ನಾಯಕರ ಆಶೀರ್ವಾದದಿಂದ ನನಗೆ ಪಕ್ಷವನ್ನು ಸಂಘಟಿಸಲು ಸಾಧ್ಯ ಆಗಿದೆ ಎಂದರು.
ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿದ್ದ ವಿಜಯೇಂದ್ರ ಅವರನ್ನು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರನ್ನಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಘೋಷಣೆ ಮಾಡಿದ್ದಾರೆ. ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ