ನಡ ಸ.ಪ.ಪೂ ಕಾಲೇಜು ವಾರ್ಷಿಕ ಕ್ರೀಡಾಕೂಟ

Upayuktha
0


ಬೆಳ್ತಂಗಡಿ: ಕ್ರೀಡೆ ದೇಹಕ್ಕೆ ಮನಸಿಗೆ ಖುಷಿ ಕೊಡುವುದರ ಜೊತೆಗೆ ಜೀವನ ಮೌಲ್ಯಗಳನ್ನು ಕಲಿಸಿ ಕೊಡುತ್ತದೆ. ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವವನ್ನು ಬೆಳೆಸಿ ಬದುಕಿಗೆ ಶಕ್ತಿ ತುಂಬಿ ಕೊಡುತ್ತದೆ ಎಂದು ನಾವುರದ ಆರೋಗ್ಯ ಕ್ಲಿನಿಕ್‌ನ ಜನಪ್ರಿಯ ವೈದ್ಯ ಪ್ರದೀಪ್ ಕುಮಾರ್ ಇವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು.


ಸ.ಪ.ಪೂ.ಕಾಲೇಜು ನಡ ಇಲ್ಲಿನ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಅಜಿತ್ ಕುಮಾರ್ ಆರಿಗರು ಧ್ವಜಾರೋಹಣಗೈದರು. ಪ್ರಾಂಶುಪಾಲ ಚಂದ್ರಶೇಖರ್ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು.


ಉಪನ್ಯಾಸಕ ಮೋಹನ ಗೌಡರು ನಿರೂಪಿಸಿದ ಈ ಕಾರ್ಯಕ್ರಮದಲ್ಲಿ ಲಿಲ್ಲಿ ಮೇಡಂ ಸ್ವಾಗತಿಸಿ, ಶಿಲ್ಪಾ ಮೇಡಂ ಧನ್ಯವಾದವಿತ್ತರು. ಕ್ರೀಡಾ ಮಾರ್ಗದರ್ಶಿ ವಸಂತಿ ಮೇಡಂ ತಂಡದ ನಾಯಕರಿಗೆ ಕ್ರೀಡಾ ಪ್ರತಿಜ್ಞಾ ವಿಧಿ ಬೋಧಿಸಿದರು. ಕೊಯ್ಯೂರು ಸರಕಾರೀ ಪ್ರೌಢ ಶಾಲೆಯ ದೈಹಿಕ ಶಿಕ್ಷಕ ಪ್ರವೀಣ್ ಅಚ್ಚುಕಟ್ಟಾಗಿ ಕ್ರೀಡೆಗಳನ್ನು ನಡೆಸಿಕೊಟ್ಟರು. ಎಲ್ಲಾ ಉಪನ್ಯಾಸಕರು ಸಹಕರಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top